Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮತ್ತೊಂದು ಹೋರಾಟಕ್ಕೆ ಸಜ್ಜಾದ ಜಯ ಮೃತ್ಯುಂಜಯ ಸ್ವಾಮೀಜಿ : ಹೋರಾಟ ಹೇಗಿರುತ್ತೆ..?

---Advertisement---

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಬೇಕು ಎಂದು ಬೃಹತ್ ಮಟ್ಟದ ಹೋರಾಟವನ್ನೇ ನಿನ್ನೆ ಬೆಳಗಾವಿಯಲ್ಲಿ ಮಾಡಿದರು. ಈ ವೇಳೆ ಲಾಠಿ ಚಾರ್ಜ್ ಕೂಡ ನಡೆದಿದೆ. ಕಲ್ಲು ತೂರಾಟವೂ ಆಗಿದೆ. ನಿನ್ನೆ ನಡೆದ ಘಟನೆಯಿಂದ ಆಕ್ರೋಶಗೊಂಡ ಜಯ ಮೃತ್ಯುಂಜಯ ಸ್ವಾಮೀಜಿ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದರು. ಎರಡನೇ ಹೋರಾಟಕ್ಕೂ ಕರೆ ನೀಡಿದರು.

ಇಂದು ಎರಡನೇ ಹೋರಾಟದ ಬಗ್ಗೆ ಮಾತಾಡಿದ ಜಯ ಮೃತ್ಯುಂಜಯ ಸ್ವಾಮೀಜಿ, ನಾಳೆ ಹೀರೇಬಾಗೇವಾಡಿ ರಾಷ್ಟ್ರೀಯ ಹೆದ್ದಾರಿ 4ರ ಟೋಲ್ ತಡೆದು ಹೋರಾಟ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಹೋರಾಟ ನಿಲ್ಲಿಸುವುದಿಲ್ಲ. ಸೋಮವಾರದಿಂದ ಅಧಿವೇಶನ ಮುಗಿಯುವ ತನಕವೂ ಹೋರಾಟ ಮಾಡುತ್ತೇವೆ. ಸುವರ್ಣಸೌಧದ ಕೊಂಡಸಕೊಪ್ಪದ ಬಳಿ ಹೋರಾಟ ಮಾಡುತ್ತೇವೆ ಎಂದಿದ್ದಾರೆ.

ಮುಂದುವರೆದು ಸಿಎಂ ವಿರುದ್ಧ ಹರಿಹಾಯ್ದ ಸ್ವಾಮೀಜಿ, ರಾಜ್ಯದಲ್ಲಿ ಈಗ ಇರುವುದು ಲಿಂಗಾಯತ ವಿರೋಧಿ ಸರ್ಕಾರ. ಲಾಠಿ ಚಾರ್ಜ್ ಮಾಡಿರುವ ಅಧಿಕಾರಿಯನ್ನು ಸಸ್ಪೆಂಡ್ ಮಾಡಬೇಕು. ಅಮಾನತು ಮಾಡದೆ ಹೋದರೆ ನೀವೇ ಆದೇಶ ಮಾಡಿದ್ದೀರಿ ಎಂದುಕೊಳ್ಳುತ್ತೇವೆ. ಎಫ್ಐಆರ್ ರದ್ದು ಮಾಡುವಂತೆ ಹೋರಾಟ ನಡೆಸುತ್ತೇವೆ. ನಾವೂ ಹೈಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡಿಲ್ಲ. ಮುಖ್ಯಮಂತ್ರಿಗಳ ಭೇಟಿಗೆ ಹೋಗುತ್ತಿದ್ದೆವು. ಆಗ ಹೆದ್ದಾರಿಯನ್ನು ಹಾರಿಕೊಂಡು ಹೋಗಬೇಕಿತ್ತಾ..? ವಕೀಲರ ಮೂಲಕವೇ ಎಲ್ಲವನ್ನು ಎದುರಿಸುತ್ತೇವೆ. ನಿನ್ನೆ ಪ್ರತಿಭಟನೆಯ ವೇಳೆ ಬಂದಂತ ಸಚಿವರು ಸಿಎಂ ಅವರ ಸಂದೇಶವನ್ನು ಹೇಳಬೇಕಿತ್ತು. ಆದರೆ ಅವರು ನಿಮ್ಮ ಅಭಿಪ್ರಾಯವನ್ನು ಕೇಳಲು ಬಂದಿದ್ದೇವೆ ಎಂದು ಹೇಳಿದರು. ಹೀಗಾಗಿ ಮುಖ್ಯಮಂತ್ರಿಗಳು ಸ್ಥಳಕ್ಕೆ ಬರಲೇಬೇಕೆಂದು ಒತ್ತಾಯಿಸಿದರು ಎಂದು ನಿನ್ನೆಯ ಘಟನೆ ಬಗ್ಗೆ ತಿಳಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...