Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಯದೇವ ಶ್ರೀಗಳ ಕಾಲದ ಸೇವೆಯು ಬಣ್ಣನೆಗೆ ನಿಲುಕದ್ದು : ಡಾ. ಬಸವಕುಮಾರ ಸ್ವಾಮೀಜಿ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಆ. 27 : ಶೂನ್ಯ ಪೀಠದ ಮುರುಘಾ ಪರಂಪರೆಯ ಜಯದೇವ ಶ್ರೀಗಳ ಕಾಲದ ಸೇವೆಯು ಬಣ್ಣನೆಗೆ ನಿಲುಕದ್ದು ಅವರ ಅನುಪಮ ಸೇವೆ ಮಾದರಿ ಎನ್ನುವಷ್ಟರ ಮಟ್ಟಿಗೆ ನಡೆದು ಹೋಗಿದೆ. ಅಂತಹವರ ತ್ಯಾಗವನ್ನು ನಾವು ಸ್ಮರಿಸದೆ ಹೋದರೆ, ಸೇವೆಯ ಮಹತ್ವ ಮುಂದಿನ ಪೀಳಿಗೆಗೆ ಅರಿವಾಗುವುದಿಲ್ಲ. ಪ್ರಸಾದ ನಿಲಯಗಳ ನಿರ್ಮಾತೃಗಳು ಮುರುಘಾ ಪರಂಪರೆಯ ಗುರುಗಳು. ಇದು ಬಡ ವಿದ್ಯಾರ್ಥಿಗಳ ಪಾಲಿಗೆ ಭರವಸೆ ಹುಟ್ಟಿಸುವ ಕಾರ್ಯ ಎಂದು ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಸ್ವಾಮೀಜಿ ಅವರು ಸ್ಮರಿಸಿದರು.

ಅವರು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ 24ನೆಯ ಪೀಠಾಧ್ಯಕ್ಷರಾದ ಜಗದ್ಗುರು ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150ನೇ ಜಯಂತಿ ಮಹೋತ್ಸವವನ್ನು ಶ್ರೀ ಮುರಘಾಮಠದ ಮುರುಗಿ ಶಾಂತವೀರ ಮಹಾಸ್ವಾಮಿಗಳವರ ಕರ್ತೃ ಸನ್ನಿಧಿಯಲ್ಲಿ ಶ್ರೀಗಳವರ ಭಾವಚಿತ್ರಕ್ಕೆ ಪುಷ್ಪವೃಷ್ಟಿ ಮಾಡುವುದರ ಮೂಲಕ ಮಹಾತ್ಮರನ್ನು ನೆನೆವುದೇ ಘನಮುಕ್ತಿ ಪದ ಶಿವಾಧವ ಎಂದು ಮೈಲಾರ ಬಸವಲಿಂಗ ಶರಣರು ಸೇವೆಯ ಸಾಧಕರನ್ನ ನೆನೆಯುವುದು ಮುಕ್ತಿಗೆ ಸಮ ಎಂದಿರುವಾಗ, ಸಮಾಜದಲ್ಲಿ ಸತ್ಕಾರ್ಯ ಉಳಿಯುತ್ತದೆ. ಅವರು ಸಮಾಜಕ್ಕೆ ಮಾಡಿರುವ ಸೇವೆಯು ಸದಾ ನಮ್ಮೊಂದಿಗೆ ಆ ಮೂಲಕ ಇದ್ದೇ ಇರುತ್ತದೆ ಎಂದು ನೆನೆದರು.

ಸಮ್ಮುಖ ವಹಿಸಿದ್ದ ದಾವಣಗೆರೆ ವಿರಕ್ತಮಠದ ಡಾ. ಬಸವಪ್ರಭು ಮಹಾಸ್ವಾಮಿಗಳವರು ಜಯದೇವ ಗುರುಗಳೇ ಈ ನಾಡಿಗೆ ಒಂದು ಕೊಡುಗೆ. ಶ್ರೀಮಠವನ್ನ ಬಾನೆತ್ತರಕ್ಕೆ ನಾಡಿನ ದಶ ದಿಕ್ಕುಗಳಲ್ಲಿ ಮಠ -ಪೀಠ ಸ್ಥಾಪನೆ, ಆರೋಗ್ಯ, ಶಿಕ್ಷಣ ,ಅನ್ನ ದಾಸೋಹದ ಮೂಲಕ ಅನನ್ಯ ಸೇವೆ ಮಾಡಿದ್ದಾರೆ. ಅವರ ಹುಟ್ಟೂರು ಬಿನ್ನಾಳ ಗ್ರಾಮದಲ್ಲಿ ಜನ್ಮದಿನವನ್ನು ಆ ಭಾಗದ ಜನತೆ ತುಂಬಾ ಶ್ರದ್ಧಾಪೂರ್ವಕವಾಗಿ ಜಾತ್ರೆಯ ಸ್ವರೂಪದಲ್ಲಿ ನೆರವೇರಿಸಿದರು. ಅದರಂತೆ ಇಂದು ಚಿತ್ರದುರ್ಗ ಸೇರಿದಂತೆ ನಾನಾ ಕಡೆ ಅವರ ಘನ ವ್ಯಕ್ತಿತ್ವದ ಸ್ಮರಣೆ ನಡೆಯಲಿದೆ. ಅವರ ಲಿಂಗೈಕ್ಯ ಲೀಲಾ ವಿಶ್ರಾಂತಿ ಸ್ಥಾನ ದಾವಣಗೆರೆಯಲ್ಲೂ ಇಂದು ನಡೆಯಲಿದೆ ಎಂದು ನುಡಿದರು.

ಈ ಸಂದರ್ಭದಲ್ಲಿ ಮುರುಗೇಂದ್ರ ಸ್ವಾಮೀಜಿ, ಅಭಿಮಾನಿ ಭಕ್ತರು, ಎಸ್ ಜೆ ಎಂ ವಿದ್ಯಾಪೀಠದ ನೌಕರರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!