ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.26 : ಕಳೆದ ನಾಲ್ಕೈದು ತಿಂಗಳಿನಿಂದ ಪಕ್ಷ ಸಂಘಟನೆಯಲ್ಲಿ ತೊಡಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿಕೊಂಡು ಬರುತ್ತಿರುವ ಜಾತ್ಯಾತೀತ ಜನತಾದಳದ ಜಿಲ್ಲಾ ಕಾರ್ಯಾಧ್ಯಕ್ಷ ಸೈಯದ್ ವಲೀಯುಲ್ಲಾ ಶಾ ಖಾದ್ರಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಅಧಿಕಾರದ ಆಸೆಗಾಗಿ ಜಾತ್ಯಾತೀತ ಜನತಾದಳ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತಿರುವ ವಿಚಾರ ಮಾಧ್ಯಮಗಳಿಂದ ತಿಳಿದು ಮನಸ್ಸಿಗೆ ಬೇಸರವಾಗಿರುವುದರಿಂದ ಜಿಲ್ಲಾ ಕಾರ್ಯಾಧ್ಯಕ್ಷ ಸ್ಥಾನದ ರಾಜಿನಾಮೆ ಪತ್ರವನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಜಿಲ್ಲಾಧ್ಯಕ್ಷ ಎಂ.ಜಯಣ್ಣ ಇವರಿಗೆ ಸಲ್ಲಿಸಿರುವುದಾಗಿ ಸೈಯದ್ ವಲೀಯುಲ್ಲಾ ಶಾ ಖಾದ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











