Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನವ ಚಿತ್ರದುರ್ಗ ನಿರ್ಮಾಣಕ್ಕಾಗಿ ಪ್ರಣಾಳಿಕೆ ಬಿಡುಗಡೆ ಮಾಡಿದ ಜೆಡಿಎಸ್ ಅಭ್ಯರ್ಥಿ ಜಿ.ರಘು ಆಚಾರ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಏ.28) : ಅನೇಕ ಹಿರಿಯರು ಮತ್ತು ಯುವಕರನ್ನು ಸಂಪರ್ಕಿಸಿ ಅಭಿಪ್ರಾಯಗಳನ್ನು ತೆಗೆದುಕೊಂಡು ಪ್ರಣಾಳಿಕೆ ಹೊರಡಿಸಿದ್ದೇನೆಂದು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್. ಅಭ್ಯರ್ಥಿ ಜಿ.ರಘು ಆಚಾರ್ ತಿಳಿಸಿದರು.

ಜೆಡಿಎಸ್. ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ನವ ಚಿತ್ರದುರ್ಗ ನಿರ್ಮಾಣಕ್ಕಾಗಿ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದರು.

ಎರಡು ಬಾರಿ ಇಲ್ಲಿ ವಿಧಾನಪರಿಷತ್ ಸದಸ್ಯನಾಗಿ ಕೆಲಸ ಮಾಡಿದ್ದೇನೆ. ರಾಜಕಾರಣ ನಿಂತ ನೀರಲ್ಲ. ಹರಿಯುವ ನೀರಿದ್ದಂತೆ. ಮುಂದಿನ ತಿಂಗಳು ಹತ್ತನೆ ತಾರೀಖಿನಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಬಹುಮತ ಸಿಕ್ಕು ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದೆ ತಡ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಎಲ್ಲಾ ಭರವಸೆಗಳನ್ನು ಈಡೇರಿಸುವುದಾಗಿ ಹೇಳಿದರು.

ಶನಿವಾರ ಬೆಳಿಗ್ಗೆ 7 ಗಂಟೆಗೆ ನಗರದ ಒಂದನೆ ವಾರ್ಡ್‍ನಿಂದ ಪಾದಯಾತ್ರೆ ಆರಂಭಿಸಿ ಎರಡು ದಿನಗಳ ಕಾಲ 35 ವಾರ್ಡ್‍ಗಳಲ್ಲಿ ಸಂಚರಿಸಿ ಮತದಾರರಿಂದ ಬರುವ ದೇಣಿಗೆಯನ್ನು ರೈತರಿಗೆ ನೀಡುತ್ತೇನೆ. ನಮ್ಮದು ರೈತರ ಸ್ವಾಭಿಮಾನದ ಪಕ್ಷ. ಜೆಡಿಎಸ್. ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಜನತೆಗೆ ನೀಡಿದ ಯೋಜನೆಗಳನ್ನು ಪ್ರತಿ ಮನೆ ಮನೆಗೆ ಮುಟ್ಟಿಸಿ ಮತ ಕೇಳುತ್ತೇನೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ಐದು ಅಡುಗೆ ಅನಿಲ ಉಚಿತವಾಗಿ ಪ್ರತಿ ಮನೆಗೆ ನೀಡಲಾಗುವುದು ಎಂದರು.

ಜೆಡಿಎಸ್. ರಾಜ್ಯ ಉಪಾಧ್ಯಕ್ಷ ಬಿ.ಕಾಂತರಾಜ್ ಮಾತನಾಡುತ್ತ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್. ಅಭ್ಯರ್ಥಿ ಜಿ.ರಘು ಆಚಾರ್ ಹೊರಡಿಸಿರುವ ನವ ಚಿತ್ರದುರ್ಗ ನಿರ್ಮಾಣಕ್ಕಾಗಿ ಪ್ರಣಾಳಿಕೆಯಲ್ಲಿ ಕೃಷಿ, ನೀರಾವರಿ, ಕುಡಿಯುವ ನೀರು, ಶಿಕ್ಷಣ, ಆರೋಗ್ಯಕ್ಕೆ ಒತ್ತು, ನಿರುದ್ಯೋಗಿಗಳ ಕೈಗೆ ಕೆಲಸ ನೀಡುವುದಕ್ಕಾಗಿ ಗಾರ್ಮೆಂಟ್ಸ್, ಐ.ಟಿ. ಹಬ್ ಸ್ಥಾಪನೆ, ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆಯಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜೆಡಿಎಸ್. ತಾಲ್ಲೂಕು ಅಧ್ಯಕ್ಷ ತಿಮ್ಮಣ್ಣ, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಯುವ ಘಟಕದ ಜಿಲ್ಲಾಧ್ಯಕ್ಷ ಓ.ಪ್ರತಾಪ್‍ಜೋಗಿ, ಅಬ್ಬು ಇನ್ನು ಅನೇಕರು ಪತ್ರಿಕಾಗೋಷ್ಠಿಯಲ್ಲಿ

ಉಪಸ್ಥಿತರಿದ್ದರು.

 

 

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಂದು ಟೀಂ ಇಂಡಿಯಾದ ಉಪನಾಯಕನಾಗಿದ್ದ ಕೆ ಎಲ್ ರಾಹುಲ್ ಈ ಬಾರಿ ತಂಡದಿಂದಾನೇ ಔಟ್..!

ಟ20 ವೇಳೆ ಶ್ವಕಪ್ ಟೂರ್ನಿಗೆ ಆಟಗಾರರನ್ನು ಆಯ್ಕೆ ಮಾಡಲಾಗಿದ್ದಿ, ಕನ್ನಡಿಗ ಕೆ ಎಲ್ ರಾಹುಲ್ ಗೆ ಸ್ಥಾನವನ್ನೇ ನೀಡಿಲ್ಲ. ತಂಡಿದಿಂದ ಹೊರಗೆ ಉಳಿದಿದ್ದಾರೆ. ಈ ಬಾರಿಯ ಐಪಿಎಲ್ ಮ್ಯಾಚ್ ನೆಲ್ಲಾ ಯಾರೆಲ್ಲಾ ಉತ್ತಮ ಪ್ರದರ್ಶ‌

ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ಹಾಗೂ ರೇವಣ್ಣರಿಗೆ ನೋಟೀಸ್ ನೀಡಿದ ಎಸ್ಐಟಿ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದೆ. ವಿಡಿಯೋದಲ್ಲಿ ಗುರುತು ಸಿಕ್ಕವರನ್ನು ಕರೆಸಿ , ವಿಚಾರಣೆ ನಡೆಸುತ್ತಿದ್ದಾರೆ. ರಾಜಕೀಯ ನಾಯಕರ ಕೆಸೆರೆಚಾಟದ ನಡುವೆ ತನಿಖೆ ತೀವ್ರಗೊಂಡಿದೆ. ಎಡಿಜಿಪಿ ಬಿಜಯ್

ಚಿತ್ರದುರ್ಗ | ಮೇ 1ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ. ಏ.30: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ

error: Content is protected !!