Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೆಡಿಎಸ್ ಗೆ ಜಮೀರ್ ಅವಶ್ಯಕತೆ ಇಲ್ಲ : ನಿಖಿಲ್ ಕುಮಾರಸ್ವಾಮಿ

---Advertisement---

ಬೆಂಗಳೂರು: ಇತ್ತೀಚೆಗಷ್ಟೇ ಜಮೀರ್ ಮತ್ತೆ ಜೆಡೊಎಸ್ ವಾಪಾಸ್ ಹೋಗ್ತಾರೆ ಎಂಬ ಬಗ್ಗೆ ಚರ್ಚೆ ಶುರುವಾಗಿತ್ತು. ಅದಾದ್ಮೇಲೆ ಜಮೀರ್ ಅವರು ಕೂಡ ಕ್ಲಾರಿಟಿ ಕೊಟ್ಟಿದ್ದರು. ಇದೀಗ ನಿಖಿಲ್ ಕುಮಾರಸ್ವಾಮಿ ಅವರು ಈ ಬಗ್ಗೆ ಮಾತನ್ನಾಡಿ, ಜಮೀರ್ ಅವರು ಜೆಡಿಎಸ್ ಬರುವ ಅವಶ್ಯಕತೆ ಏನು ಇಲ್ಲ ಎಂಬ ಮಾತನ್ನ ಹೇಳಿದ್ದಾರೆ.

ಪಕ್ಷ ಕಟ್ಟುವುದಕ್ಕೆ ಕಾರ್ಯಕರ್ತರು ಸಿದ್ಧರಾಗಿದ್ದಾರೆ. ಜಮೀರ್ ಅವರು ಜೆಡಿಎಸ್ ಗೆ ಬರುವ ಅವಶ್ಯಜತೆ ಇಲ್ಲ. ಸುಮ್ಮನೆ ಮಾಧ್ಯಮದಲ್ಲಿ ಬರುತ್ತಿರುವ ವಿಚಾರ ಅದು. ಈಗಾಗಲೇ ಅವರು ಕೂಡ ಈ ಸಂಬಂಧ ಸ್ಪಷ್ಟೀಕರಣ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಸ್ಥಾನಮಾನ ಕೊಟ್ಟಿದೆ. ಅವರ ಬಗ್ಗೆ ಚರ್ಚೆ ಬೇಡ. ನಮ್ಮ ಪಾರ್ಟಿ ಕಟ್ಟೋಕೆ ಕಾರ್ಯಕರ್ತರು ಇದ್ದಾರೆ. ನಮ್ಮ ಕಾರ್ಯಕರ್ತರು ಹೋರಾಟಕ್ಕೆ ಸಿದ್ಧರಿದ್ದಾರೆ. ಪಕ್ಷ ಯಾರನ್ನು ಕೂಡ ನೆಚ್ಚಿಕೊಂಡಿಲ್ಲ ಎಂದಿದ್ದಾರೆ.

ಇನ್ನು ದಾವಣಗೆರೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಡದೆ ಇದ್ದ ಕಾರಣಕ್ಕೆ ಮುನಿಸು ಇನ್ನು ಹಾಗೇ ಇದೆ ಎಂಬ ಚರ್ಚೆ ನಡೀತಾ ಇದೆ. ಅಲ್ಪಸಂಖ್ಯಾತರು ಜೆಡಿಎಸ್ ಕಡೆ ಮುಖ ಮಾಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಸಿಎಂ ಯಾವಾಗಲೂ ಅಹಿಂದ ರಾಜಕಾರಣಿ ಅಂತ ಹೇಳ್ತಾರೆ. ಅಹಿಂದದಲ್ಲಿ ಅ ಮತ್ತು ದ ಅನ್ನೋದು ಉರುಳಿ ಹೋಗಿದೆ. ರಾಜಣ್ಣ, ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಾಗಿದೆ. ಕಬ್ಬಾರ್, ನಜೀರ್ ತಲೆದಂಡ ಆಗಿದೆಮ ದಾವಣಗೆರೆಯಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿದ್ದಾರೆ. ಆ ಕ್ಷೇತ್ರದಲ್ಲಿ ಮುಸ್ಲಿಂ ಬಾಂಧವರಿಗೆ ಟಿಕೆಟ್ ಕೊಡಬೇಕಿತ್ತು. ಅಲ್ಲಿ ಜಬ್ಬಾರ್, ನಜೀರ್ ಕೈ ಬಿಟ್ಟಿದ್ದಾರೆ. ಅಹಿಂದದಲ್ಲಿ ಅ – ಅಲ್ಪಸಂಖ್ಯಾತ, ದ – ದಲಿತ ಹೋಗಿದೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...