Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸದಸ್ಯರು ಮತ ಹಾಕಲು ಆಸಕ್ತಿಯಿದ್ದರು ಜೆಡಿಎಸ್ ಕಿರುಕುಳ ನೀಡ್ತಿದೆ : ಕಾಂಗ್ರೆಸ್ ಅಭ್ಯರ್ಥಿ ಶಂಕರ್..!

Facebook
Twitter
Telegram
WhatsApp

ಹಾಸನ : ಪರಿಷತ್ ಚುನಾವಣೆಯ ಅಬ್ಬರ ಜೋರಾಗಿ ನಡೆಯುತ್ತಿದೆ. ಇದೇ ತಿಂಗಳು 10 ರಂದು ಪರಿಷತ್ ಚುನಾವಣೆ ನಡೆಯಲಿದೆ. ಹೀಗಾಗಿ ಪಕ್ಷದ ಮುಖಂಡರುಗಳು ಕೂಡ ತಮ್ಮ ತಮ್ಮ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿದ್ದಾರೆ. ಪ್ರಚಾರದ ಬೆನ್ನಲ್ಲೇ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿ ಜೆಡಿಎಸ್ ಮುಖಂಡರ ಮೇಲೆ ಗಂಭೀರವಾದ ಆರೋಪ ಹೊರಿಸಿದ್ದಾರೆ.

ಕಾಂಗ್ರೆಸ್ ಎಂಎಲ್ಎ ಅಭ್ಯರ್ಥಿ ಶಂಕರ್ ಈ ರೀತಿ ಆರೋಪ ಮಾಡಿದ್ದು, ನನಗೆ ಮತ ಹಾಕೋದಕ್ಕೆ ಗ್ರಾ.ಪಂ ಸದಸ್ಯರಿಗೆ ಆಸಕ್ತಿ ಇದೆ. ಆದ್ರೆ ಜೆಡಿಎಸ್ ನವರ ಕಿರುಕುಳದಿಂದ ಅವರಿಗೆ ಹಾಕಲು ಸಾಧ್ಯವಾಗ್ತಿಲ್ಲ ಎಂದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಜೆಡಿಎಸ್ ನವರು ನಮಗೆ ಬೆದರಿಕೆ ಒಡ್ಡುತ್ತಿದ್ದಾರೆಂದು ಗ್ರಾಮ ಪಂಚಾಯತ್ ಸದಸ್ಯರು ಹೇಳುತ್ತಿದ್ದಾರೆ. ನಮಗೆ ಮತ ಹಾಕಬೇಕು. ನಮ್ಮವರು ಅಲ್ಲಿಯೇ ಓಡಾಡುತ್ತಿರುತ್ತಾರೆ. ನೀವೂ ಬೇರೆಯವರಿಗೆ ಮತ ಹಾಕಿದ್ರೆ ಗೊತ್ತಾಗುತ್ತೆ ಎನ್ನುತ್ತಿದ್ದಾರಂತೆ.

ಅಲ್ಲದೇ ಮಹಿಳಾ ಮತದಾರರ ಮನೆಗೂ ಬಂದು ಒತ್ತಾಯ ಮಾಡುತ್ತಿದ್ದಾರಂತೆ. ಈ ಕಾರಣ ಅವರೆಲ್ಲಾ ನನಗೆ ಮತ ಹಾಕಲು ಹೆದರುತ್ತಿದ್ದಾರೆ. ಜೆಡಿಎಸ್ ನವರು ಹೀಗೆ ಬೆದರಿಕೆಯನ್ನ ಮುಂದುವರೆಸಿದ್ರೆ ನಾನು ದೂರು ಕೊಡುತ್ತೇನೆಂದು ಶಂಕರ್ ಅವರು ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

ಮಾಜಿ ಸಿಎಂ ಬಿಎಸ್ವೈ ವಿರುದ್ದ ಸಮರ ಸಾರಿದ್ರಾ ಪರಮಾಪ್ತ ಶಾಸಕ ಎಂ.ಚಂದ್ರಪ್ಪ. ?

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಮಾ.28 : ಪುತ್ರನಿಗೆ ಬಿಜೆಪಿ ಟಿಕೇಟ್ ಕೈ ತಪ್ಪಿದ ಹಿನ್ನಲೆ ಶಾಸಕ ಎಂ ಚಂದ್ರಪ್ಪ ಅಸಮಧಾನ ವ್ಯಕ್ತಪಡಿಸಿದ್ದು,

error: Content is protected !!