ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ನವದೆಹಲಿ: ಲೋಕಸಭಾ ಚುನಾವಣೆಗೆ ಬಿಜೆಪಿ ಜೊತೆಗೆ ಜೆಡಿಎಸ್ ಕೈ ಜೋಡಿಸಿದೆ. ಈ ಬಾರಿ ಲೋಕಸಭೆಯಲ್ಲಿ ಕಾಂಗ್ರೆಸ್ ಮಣಿಸಲು ಮಾಸ್ಟರ್ ಪ್ಲ್ಯಾನ್ ಗಳನ್ನು ಮಾಡಲಾಗುತ್ತಿದೆ. ಅದರಲ್ಲೂ ಕುಮಾರಸ್ವಾಮಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿದ್ದಾರೆ. ಬಿಜೆಪಿಗಿಂತ ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರೇ ಹೆಚ್ಚಿನ ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಜೆಡಿಎಸ್ ನಾಯಕರು ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ತಮ್ಮ ನಿರ್ಧಾರವನ್ನು ಬದಲಾಯಿಸಿದ್ದಾರೆ ಎನ್ನಲಾಗುತ್ತಿದೆ.
ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಬಿಜೆಪಿ ಸ್ಪರ್ಧೆ ಮಾಡಿದ್ದಲ್ಲಿ ಜೆಡಿಎಸ್ ನಾಯಕರು, ಕಾರ್ಯಕರ್ತರು ಸಂಪೂರ್ಣ ಬೆಂಬಲ ನೀಡಲಿದ್ದಾರೆ. ಹಾಗೇ ತಾವೂ ಗೆದ್ದೇ ಗೆಲ್ಲುತ್ತೀವಿ ಎಂಬ ಕ್ಷೇತ್ರವನ್ನು ಜೆಡಿಎಸ್ ನಾಯಕರು ಆಯ್ಕೆ ಮಾಡಿಕೊಳ್ಳುತ್ತಾರೆ. ಅದರಲ್ಲಿ ಐದು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ಮಾತಿತ್ತು. ಇದೀಗ ಆ ಸಂಖ್ಯೆ ಕಡಿಮೆಯಾಗಿದೆ ಎನ್ನಲಾಗಿದೆ.
ಈಗಾಗಲೇ ದೆಹಲಿಯಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಅವರ ಜೊತೆಗೆ ಜೆಡಿಎಸ್ ಪ್ರಬಲ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಸೀಟು ಹಂಚಿಕೆಯ ಕುರಿತು ಮಹತ್ವದ ಸಭೆ ನಡೆಯುತ್ತಿದೆ. ಅದರಲ್ಲಿ ಜೆಡಿಎಸ್ ಭದ್ರಕೋಟೆಯ ಮೇಲೆ ಹೆಚ್ಚಿನ ಗಮನ ಹರಿಸಲು ಕುಮಾರಸ್ವಾಮಿ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.
ಅದರಲ್ಲೂ ಮಂಡ್ಯ, ಹಾಸನ, ಕೋಲಾರದಲ್ಲಿ ಮಾತ್ರ ಜೆಡಿಎಸ್ ಸ್ಪರ್ಧೆ ಮಾಡಲಿದೆ. ತಾವೂ ಸ್ಪರ್ಧೆ ಮಾಡಿದ ಕ್ಷೇತ್ರದಲ್ಲಿ ಶೇಕಡ 100ರಷ್ಟು ಫಲಿತಾಂಶ ಪಡೆಯಲೇಬೇಕೆಂಬ ಹಠ ಜೆಡಿಎಸ್ ನಾಯಕರದ್ದಾಗಿದೆ. ಈ ಮೂಲಕ ತಮಗೆ ಬಲ ಇರುವ ಕಡೆಯಲ್ಲಿ ಸ್ಪರ್ಧೆಗೆ ನಿಂತು, ಗೆಲುವಿನ ಕಡೆಗೆ ಗಮನ ಹರಿಸಲು ನಿರ್ಧಾರ ಮಾಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್