ಮೇಕೆದಾಟು ಯೋಜನೆ ಕಾಂಗ್ರೆಸ್ ದೇ, ಜೆಡಿಎಸ್ ಶಾಸಕ ಹೇಳಿದ್ದೇನು ?

suddionenews
1 Min Read

 

ಕೋಲಾರ: ಕಾಂಗ್ರೆಸ್ ನಾಯಕರು ಮೇಕೆದಾಟು ಯೋಜನೆಗೆ ಒತ್ತಾಯಿಸಿ, ಜನವರಿ 9 ರಂದು ಪಾದಯಾತ್ರೆ ಮಾಡಲು ಸಜ್ಜಾಗಿದ್ದಾರೆ. ಈ ಬಗ್ಗೆ ಶಾಸಕ ಶ್ರೀನಿವಾಸ ಗೌಡ ಮಾತನಾಡಿದ್ದು, ಮೇಕೆದಾಟು ಯೋಜನೆ ಕಾಂಗ್ರೆಸ್ ನವರದ್ದೇ ಎಂದು ಹೇಳಿದ್ದಾರೆ.

ಜೆಡಿಎಸ್ ಅವರು ಏನೇನೋ ಹೇಳ್ತಾರೆ. ಡಿಕೆಶಿ ಅವರು ಒಳ್ಳೆಯ ಯೋಜನೆ ಹಮ್ಮಿಕೊಂಡಿದ್ದಾರೆ. ಜೆಡಿಎಸ್ ಅವರು ಹೇಳುವುದಕ್ಕೆ ಹೆಚ್ಚಿನ ಆದ್ಯತೆ ಕೊಡುವ ಅಗತ್ಯವಿಲ್ಲ. ಜೆಡಿಎಸ್ ನಲ್ಲಿ ದೇವೇಗೌಡ ಅವರೇ ಅವರ ಮಕ್ಕಳನ್ನ ನಂಬಲ್ಲ. ಅವರ ಮೇಲೆ ನಂಬಿಕೆ ಕಳೆದು ಕೊಂಡಿದ್ದಾರೆ. ಎಂದಿದ್ದಾರೆ.

ಇನ್ನು ಮುಂದಿನ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಟಿಕೆಟ್ ಸಿಕ್ಕರೆ ಸ್ಪರ್ಧಿಸುತ್ತೇನೆ. ಇಲ್ಲವಾದಲ್ಲಿ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಎಂಎಲ್‍ಸಿ ಚುನಾವಣೆಯಲ್ಲಿ ಹಾಸನದಲ್ಲಿ ಒಂದೇ ಒಂದು ಸ್ಥಾನ ಗೆದ್ದಿರುವ ಜೆಡಿಎಸ್‍ನವರು ಮುಂದೆ ರಾಜ್ಯದಲ್ಲಿ 132 ಸ್ಥಾನ ಗೆಲ್ಲುತ್ತಾರೆ. ದೇವೇಗೌಡರಿಗೆ ಅವರ ಮಕ್ಕಳ ಮೇಲೆ ನಂಬಿಕೆ ಹೋಗಿರುವುದರಿಂದ, ದೇವೇಗೌಡರೆ ರಾಜ್ಯದಲ್ಲಿ ಸಂಚಾರ ಮಾಡುತ್ತೇನೆ ಎಂದು ಹೇಳಿದ್ದಾರೆ. ಇನ್ನು ಸಮ್ಮಿಶ್ರ ಸರ್ಕಾರ ಇದ್ದಾಗ ಕುಣಿಲಾರದೆ ನೆಲ ಡೊಂಕು ಎನ್ನುವಂತೆ ಆಡಳಿತ ಮಾಡಿದ್ದರು ಎಂದು ಕಿಡಿಕಾರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *