Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

“ಜೆಇಇ” ಮೈನ್ಸ್‌ ಪರೀಕ್ಷೆ ಫಲಿತಾಂಶ | ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳ ಐತಿಹಾಸಿಕ ದಾಖಲೆ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.13 :  ನಗರದ ಎಸ್‌. ಆರ್‌. ಎಸ್‌. ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಜನವರಿಯಲ್ಲಿ ನಡೆದ “ಜೆಇಇ ಮೈನ್ಸ್‌” ನ ಮೊದಲ ಸ್ಲಾಟ್‌ ಪರೀಕ್ಷೆಯಲ್ಲಿ  (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಅತ್ಯುತ್ತಮ  ಫಲಿತಾಂಶ ದಾಖಲಿಸಿದ್ದಾರೆ.

ಒಟ್ಟು 34 ವಿದ್ಯಾರ್ಥಿಗಳು 90ಕ್ಕಿಂತ ಹೆಚ್ಚಿನ ಪರ್ಸಂಟೈಲ್‌ ಗಳಿಸಿರುವುದು ಹೊಸ ದಾಖಲೆ.  ಕಾಲೇಜಿನ ವಿದ್ಯಾರ್ಥಿ ಮನೋಜ್‌ ಎಸ್‌. ಎಂ. ಶೇಕಡ 98.23 ಪರ್ಸಂಟೈಲ್‌ ಗಳಿಸಿ ಹೊಸ ದಾಖಲೆಯೊಂದಿಗೆ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಎನ್‌. ಮದನ್‌, 97.93, ಜೀವಿಕ ಇ, 95.37, ಗಳಿಸಿ ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.  ಒಂದೇ ಕಾಲೇಜಿನ 34 ವಿದ್ಯಾರ್ಥಿಗಳು 90ಕ್ಕಿಂತ ಹೆಚ್ಚಿನ ಪರ್ಸಂಟೈಲ್‌ ಗಳಿಸಿರುವುದು SRS ನ ಗುಣಮಟ್ಟದ ತರಬೇತಿಗೆ ಸಾಕ್ಷಿ.  ಒಟ್ಟು 70 ವಿದ್ಯಾರ್ಥಿಗಳು “ಜೆಇಇ ಮೈನ್ಸ್‌” ಮೊದಲ ಸ್ಲಾಟ್‌ನಲ್ಲಿ ಅತ್ಯುತ್ತಮ ಅಂಕಗಳಿಸಿ ʼಜಿಇಇ ಅಡ್ವಾನ್ಸ್ಡ್‌ ಗೆ ಅರ್ಹತೆ ಗಳಿಸಿದ್ದಾರೆ.  SRS ಪಿಯು ಕಾಲೇಜು ಜೆಇಇ ಮೈನ್ಸ್‌ ಮತ್ತು ಅಡ್ವಾನ್ಸ್ಡ್ ವಿದ್ಯಾರ್ಥಿಗಳಿಗೆ ವಿಶೇಷ ಸ್ಟಾರ್‌ ಬ್ಯಾಚ್‌ಗಳನ್ನು ಹೊಂದಿದ್ದು, ಜೆಇಇ ಪರಿಣಿತ ಉಪನ್ಯಾಸಕರ ಮಾರ್ಗದರ್ಶನದಲ್ಲಿ ಸಮಯೋಚಿತ ತರಬೇತಿ ನೀಡಲಾಗಿದೆ.

ಉತ್ತರ ಭಾರತ ಹಾಗೂ ಹೈದರಾಬಾದ್‌ನಿಂದ ವಿಷಯ ತಜ್ಞರು ಬರುತ್ತಿದ್ದು, ಈ ವರ್ಷದಿಂದ SRS ನಲ್ಲಿಯೇ ಪೂರ್ಣಪ್ರಮಾಣದಲ್ಲಿ ಲಭ್ಯವಿರುತ್ತಾರೆ.  ಈ ಭಾಗದ ಜೆಇಇ ಅಕಾಂಕ್ಷಿಗಳಿಗೆ ಇದು ಆಶಾದಾಯಕ ಬೆಳವಣಿಗೆಯಾಗಿದ್ದು, SRS ಸರ್ವರೀತಿಯ ತರಬೇತಿಗೆ ತಯಾರಾಗಿರುವುದು ವಿಶೇಷ.

ಇದೇ ಸಂದರ್ಭದಲ್ಲಿ 2022-23ನೇ ಫಲಿತಾಂಶವು ಅತ್ಯುತ್ತಮವಾಗಿದ್ದು SRS ಪಿಯು ಕಾಲೇಜಿನ ಒಟ್ಟು 8 ಜನ ವಿದ್ಯಾರ್ಥಿಗಳು IIT, IIIT, ಮತ್ತು NIT ಗಳಿಗೆ ಹಾಗೂ ಪ್ರತಿಷ್ಟಿತ AIIMS ಗೆ ಇಬ್ಬರೂ JIPMER ಗೆ ಒಬ್ಬ ವಿದ್ಯಾರ್ಥಿ ಮೆಡಿಕಲ್‌ಗೆ ಆಯ್ಕೆಯಾದುದ್ದನ್ನು ಸ್ಮರಿಸಬಹುದು.


ಈ ಬಾರಿಯ ಫಲಿತಾಂಶ ಕಳೆದ ಬಾರಿಯ ಫಲಿತಾಂಶಕ್ಕಿಂತಲು ಉತ್ತುಮವಾಗಿದ್ದು, ಹೆಚ್ಚಿನ ವಿದ್ಯಾರ್ಥಿಗಳು IIT ಗಳಿಗೆ ಆಯ್ಕೆಯಾಗುವುದರಲ್ಲಿ ಅನುಮಾನವಿಲ್ಲ.  ವರ್ಷದಿಂದ ವರ್ಷಕ್ಕೆ ಗುಣಮಟ್ಟ ಉತ್ತಮಗೊಳಿಸಿಕೊಳ್ಳುತ್ತಿರುವುದಕ್ಕೆ ಇದು ಸಾಕ್ಷಿಯಾಗಿದೆ.  ಬಯಲು ಸೀಮೆ ಚಿತ್ರದುರ್ಗದಂತಹ ಪ್ರದೇಶದಲ್ಲಿ  ಗುಣಮಟ್ಟದ ಶಿಕ್ಷಣ ನೀಡುತ್ತಿದೆ.

ಕಾಲೇಜಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಬಿ ಎ ಲಿಂಗಾರೆಡ್ಡಿ, ಕಾರ್ಯದರ್ಶಿಗಳಾದ ಶ್ರೀಮತಿ ಸುಜಾತ ಲಿಂಗಾರೆಡ್ಡಿ, ಆಡಳಿತಾಧಿಕಾರಿಗಳಾದ ಡಾ. ರವಿ ಟಿ ಎಸ್‌, ಪ್ರಾಂಶುಪಾಲರಾದ ಗಂಗಾಧರ್‌ ಈ. ಹಾಗೂ ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಮೇ 20: ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ

ಬೆಂಗಳೂರಿನಲ್ಲಿ ನಟ-ನಟಿಯರ ರೇವ್ ಪಾರ್ಟಿಯಲ್ಲಿ ಸಿಕ್ಕಿದ್ದೇನು..?

  ಬೆಂಗಳೂರು: ಇಂದು ಬೆಳಗಿನ ಜಾವ 3 ಗಂಟೆ ವೇಳೆಗೆ ಎಲೆಕ್ಟ್ರಾನಿಕ್ ಸಿಟಿ ಬಳಿಯ ಫಾರ್ಮ್ ಹೌಸ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ತೆಲುಗು

ಸವಾಲುಗಳ ನಡುವೆಯೇ ಜಯಭೇರಿ ಬಾರಿಸಿದ ಸಿದ್ದರಾಮಯ್ಯ ಸರ್ಕಾರ : ಇಂದಿಗೆ ಒಂದು ವರ್ಷ

  2023 ಮೇ 20ರಂದು ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡಿತ್ತು, ಸಿದ್ದರಾಮಯ್ಯ ಅವರು ಸಿಎಂ ಆಗಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದರು. ಇಂದಿಗೆ ಆ ಸಂಭ್ರಮದ ದಿನಕ್ಕೆ ವರ್ಷದ ಸಂಭ್ರಮ. ಸಿದ್ದರಾಮಯ್ಯ ಸರ್ಕಾರ

error: Content is protected !!