Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಜೆಟ್ ಲ್ಯಾಗ್ ಪಬ್ ಮಾಲೀಕ, ನಿರ್ಮಾಪಕ ಸೌಂದರ್ಯ ಆತ್ಮಹತ್ಯೆ ಮಾಡಿಕೊಂಡಿದ್ದು ಯಾಕೆ..?

---Advertisement---

 

ಇವತ್ತು ಬೆಳ್ಳಂ ಬೆಳಗ್ಗೆಯೇ ಸ್ಯಾಂಡಲ್ ವುಡ್ ಶಾಕ್ ಕಾದಿತ್ತು. ನಿರ್ಮಾಪಕ, ಉದ್ಯಮಿ, ಬಾಡಿ ಬಿಲ್ಡರ್ ಸೌಂದರ್ಯ ಜಗದೀಶ್ ನಿಧನದ ಸುದ್ದಿ ಎಲ್ಲೆಡೆ ಹಬ್ಬಿತ್ತು. ಇದನ್ನ ಕೆಲವರು ಆತ್ಮಹತ್ಯೆ ಅಂದರೆ, ಇನ್ನು ಹಲವರು ಹಾರ್ಟ್ ಅಟ್ಯಾಕ್ ಅಂತ ಹೇಳುತ್ತಿದ್ದರು. ಆದರೆ ಈಗ ಡಿಸಿಪಿ ಕೂಡ ಇದು ಆತ್ಮಹತ್ಯೆ ಎಂಬುದನ್ನು ಕನ್ಫರ್ಮ್ ಮಾಡಿದ್ದಾರೆ.

ಈ ಬಗ್ಗೆ ಡಿಸಿಪಿ ಸೈಯ್ಯದ್ ಉಲ್ಲಾ ಅದಾವತ್ ಮಾತನಾಡಿ, ಬೆಳಗ್ಗೆ 9.45ಕ್ಕೆ ಸೌಂದರ್ಯ ಜಗದೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಅವರ ಮಡದಿ ಈಗಾಗಲೇ ದೂರು ನೀಡಿದ್ದು, ಅವರು ಕೂಡ ಇದು ಆತ್ಮಹತ್ಯೆ ಎಂದೇ ತಿಳಿಸಿದ್ದಾರೆ‌. ಇತ್ತಿಚೆಗೆ‌ ಸೌಂದರ್ಯ ಜಗದೀಶ್ ಅವರು ಮಾನಸಿಕವಾಗಿ ತುಂಬಾ ನೊಂದಿದ್ದರಂತೆ. ಅತ್ತೆಯ ಜೊತೆಗೆ ಒಳ್ಳೆಯ ಬಾಂಧವ್ಯ ಹೊಂದಿದ್ದವರು. ಅವರ ನಿಧನದ ಬಳಿಕ ಕುಗ್ಗಿ ಹೋಗಿದ್ದರಂತೆ. ನಾವೂ ಕೇಸ್ ದಾಖಲಿಸಿಕೊಂಡಿದ್ದೇವೆ. ತನಿಖೆ ನಡೆಸುತ್ತಿದ್ದೇವೆ ಎಂದಿದ್ದಾರೆ.

ಜಗದೀಶ್‌ ಸ್ನೇಹಿತ ಶ್ರೇಯಸ್​ ಪ್ರತಿಕ್ರಿಯಿಸಿದ್ದಾರೆ. ಸೌಂದರ್ಯ ಜಗದೀಶ್ ಅವರಿಗೆ ಯಾವುದೇ ಆರೋಗ್ಯ ಸಂಬಂಧಿ ಕಾಯಿಲೆ ಇರಲಿಲ್ಲ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದು ನಿಜ. ಕೂಡಲೇ ನಾವು ಆಸ್ಪತ್ರೆಗೆ ಕರೆದುಕೊಂಡು ಬಂದ್ವಿ. ಅವರು ನಿಧನರಾಗಿದ್ದಾರೆ ಎಂದು ಆಸ್ಪತ್ರೆಯವರು ತಿಳಿಸಿದರು. ಈಗಲೇ ನಾವು ಏನು ಎಂಬುದನ್ನು ಹೇಳಲು ಆಗಲ್ಲ. ಹೃದಯಾಘಾತ ಆಗಿದೆ ಎಂದು ತಪ್ಪು ಮಾಹಿತಿ ನೀಡಿದ್ದಾರೆ. ಬ್ಯಾಂಕ್​ ನೋಟಿಸ್​ಗೂ ಆತ್ಮಹತ್ಯೆಗೂ ಸಂಬಂಧ ಇಲ್ಲ ಎಂದಿದ್ದಾರೆ.

ಇನ್ನು ಇತ್ತಿಚೆಗೆ ಕಾಟೇರ ಸಿನಿಮಾ ಸಕ್ಸಸ್ ದಿನ ಜೆಟ್ ಲ್ಯಾಗ್ ನಲ್ಲಿ ಅವಧಿಗೂ ಮೀರಿ ದರ್ಶನ್ ಹಾಗೂ ಸ್ನೇಹಿತರು ಪಾರ್ಟಿ ಮಾಡಿದ್ದರು. ಈ ವಿಚಾರ ಸಾಕಷ್ಟು ಸುದ್ದಿಯಾಗಿತ್ತು. ಇಪ್ಪತ್ತೈದು ದಿನಗಳ ಕಾಲ ಬಾರ್ ಲೈಸೆನ್ಸ್ ರದ್ದುಗೊಳಿಸಲಾಗಿತ್ತು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...