Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉದ್ಯೋಗ ಮಾಹಿತಿ : ಚಿತ್ರದುರ್ಗದ ರುಡ್‌ಸೆಟ್ ನಲ್ಲಿ ಉಚಿತ ತರಬೇತಿ

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ. 01 : ಸಾಕಷ್ಟು ಜನರಿಗೆ ಏನಾದರೊಂದು ಸ್ಚಂತ ಉದ್ಯೋಗ ಮಾಡಬೇಕೆಂಬ ಹಂಬಲವಿರುತ್ತೆ. ಆದರೆ ಅದಕ್ಕೆ ಪೂರಕವಾಗಿ ಬೇಕಾದ ತರಬೇತಿಯಾಗಲಿ ಅಥವಾ ಯಾವ ವ್ಯವಹಾರ ಮಾಡಬೇಕೆಂಬ ಐಡಿಯಾ ಆಗಲಿ ಅವರ ಬಳಿ ಇರೋದಿಲ್ಲ. ಅಂತಹವರಿಗಾಗಿ ಇದೀಗ ಚಿತ್ರದುರ್ಗದಲ್ಲಿ ಉದ್ಯೋಗ ತರಬೇತಿಯನ್ನು ಆರಂಭಿಸಲಾಗುತ್ತಿದೆ.


ರುಡ್‌ಸೆಟ್ ಈ ಉದ್ಯೋಗ ತರಬೇತಿಯನ್ನು ಆಯೋಜನೆ ಮಾಡಿದೆ. ನೇರ ಸ್ವಉದ್ಯೋಗ ತರಬೇತಿಗೆ ಚಿತ್ರದುರ್ಗದಲ್ಲಿ. ನಿರುದ್ಯೋಗಿ ಯುವಕ/ಯುವತಿಯರು ಅಥವಾ ಸ್ವಂತ ಉದ್ಯೋಗ ಮಾಡಬೇಕೆಂದುಕೊಂಡಿರುವವರು ಈ ಸ್ವ ಉದ್ಯೋಗ ತರಬೇತಿಗೆ ಸೇರಬಹುದು.‌ ಸ್ವ ಉದ್ಯೋಗ ಮಾಡಲು ರುಡ್‌ಸೆಟ್ ಸಂಸ್ಥೆ ಕಡೆಯಿಂದಾನೇ 13 ದಿನಗಳ ಕಾಲ ತರಬೇತಿಯನ್ನು ನೀಡಲಾಗುತ್ತದೆ. ಇದರಲ್ಲಿ ಜ್ಯೂಟ್ ಬ್ಯಾಗ್ ತಯಾರಿಕೆಯನ್ನು ಕಲಿಸಿ ಕೊಡುತ್ತಾರೆ.

3-1-2025ರಂದು ನೀವೂ ಈ ಕಾರ್ಯಕ್ರಮದಲ್ಲಿ ಭಾಗಿಯಾಗಬಹುದು. ಇದು ಚಿತ್ರದುರ್ಗದಲ್ಲಿರುವ ರುಡ್‌ಸೆಟ್ ಸಂಸ್ಥೆಯ ಆವರಣದಲ್ಲಿ ನಡೆಯಲಿದೆ. ಮೊದಲು ಭಾಗಿಯಾಗಿ ಎಲ್ಲಾ ವಿವರಗಳನ್ನು ತಿಳಿದಕೊಳ್ಳಿ. ಈ ತರಬೇತಿಯಲ್ಲಿ ಭಾಗಿಯಾಗುವುದಕ್ಕೆ ಆಸಕ್ತಿರಿರುವ ಅಭ್ಯರ್ಥಿಗಳಿಗೆ ಈ ಅರ್ಹತೆ ಇರಲೇಬೇಕು.
* 19 ರಿಂದ 45 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.

* ಕನ್ನಡ ಓದು ಬರಹ ಬಲ್ಲವರಾಗಿರಬೇಕು.

* ಈ ತರಬೇತಿಗೆ ಸಂಬಂದಪಟ್ಟ ಕೌಶಲ್ಯ ಕುರಿತು ಪ್ರಾಥಮಿಕ ಜ್ಞಾನ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

* ತರಬೇತಿಯು ಊಟ ಮತ್ತು ವಸತಿ ಸಹಿತವಾಗಿ ಸಂಪೂರ್ಣ ಉಚಿತವಾಗಿರುತ್ತದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಫೋನ್/ಮೊಬೈಲ್ ನಂಬರ್‌ವುಳ್ಳ ಸ್ವವಿಳಾಸದ ಅರ್ಜಿಯೊಂದಿಗೆ ದಿನಾಂಕ *03.01.2025* ರಂದು ಚಿತ್ರದುರ್ಗ ರುಡ್‌ಸೆಟ್ ಸಂಸ್ಥೆಯ ಕಛೇರಿಯಲ್ಲಿ ನೇರ ತರಬೇತಿಯಲ್ಲಿ ಭಾಗವಹಿಸಲು ಈ ಮೂಲಕ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 8618282445, 9449732805/ 08194- 223505

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment