Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉದ್ಯೋಗ ವಾರ್ತೆ | ಮಿಷನ್ ಶಕ್ತಿ ಯೊಜನೆಯಡಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

Facebook
Twitter
Telegram
WhatsApp

 

ಚಿತ್ರದುರ್ಗ . ಫೆ.06: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಚಿತ್ರದುರ್ಗ ಜಿಲ್ಲೆಗೆ ಸಂಬಂಧಿಸಿದಂತೆ ಮಿಷನ್ ಶಕ್ತಿ ಯೋಜನೆಯಡಿ ಮಹಿಳಾ ಸಬಲೀಕರಣ ಘಟಕಕ್ಕೆ, 2023-24ನೇ ಸಾಲಿಗೆ ಗುತ್ತಿಗೆ ಆಧಾರದ ಮೇಲೆ ಸೇವೆ ಪಡೆಯಲು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

18 ವರ್ಷ ತುಂಬಿದ 45 ವರ್ಷ ಒಳಗಿನ ಅಭ್ಯರ್ಥಿಗಳು ದಿನಾಂಕ 20-02-2024ರ ಒಳಗಾಗಿ ಅರ್ಜಿಸಲ್ಲಿಸಬಹುದು.

ಜಿಲ್ಲಾ ಯೋಜನಾ ಸಂಯೋಜಕ (ಡಿಸ್ಟಿಕ್ಟ್ ಮಿಷನ್ ಕೋಆಡಿನೇಟರ್) ಒಂದು ಹುದ್ದೆ. ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಂಗೀಗೃತ ವಿಶ್ವವಿದ್ಯಾಲಯದಿಂದ ಸಾಮಾಜಿಕ ವಿಜ್ಞಾನ ಅಥವಾ ಜೀವ ವಿಜ್ಞಾನ, ಪೌಷ್ಠಿಕ, ವೈದ್ಯಕೀಯ, ಆರೋಗ್ಯ ನಿರ್ವಹಣೆ, ಸಮಾಜ ಕಾರ್ಯ, ಗ್ರಾಮೀಣ ಆಡಳಿತ ವಿಷಯಗಳಲ್ಲಿ ಯಾವುದಾದರು ಒಂದರಲ್ಲಿ ಪದವಿ ಪಡೆದಿರಬೇಕು.

ಸರ್ಕಾರಿ ಅಥವಾ ಸ್ವಯಂ ಸೇವಾ ಸಂಸ್ಥೆಗಳಲ್ಲಿ 3 ವರ್ಷದ ಯೋಜನೆ ನಿರ್ವಹಣೆ ಬಗ್ಗೆ ಅನುಭವ ಹೊಂದಿರಬೇಕು. ಆಯ್ಕೆ ಆಗುವ ಅಭ್ಯರ್ಥಿಗೆ ಮಾಸಿಕ ರೂ.50000/- ಗೌರವ ಧನ ನೀಡಲಾಗುವುದು.

ಲಿಂಗ ತಜ್ಞ (ಜೆಂಡರ್ ಸ್ಪೆಷಲಿಷ್ಟ್) ಒಂದು ಹುದ್ದೆ.
ಈ ಹುದ್ದೆಗೆ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಅಂಗೀಗೃತ ವಿಶ್ವವಿದ್ಯಾಲಯದಿಂದ ಸಾಮಾಜಿಕ ಕಾರ್ಯ ಅಥವಾ ಇತರೆ ಸಾಮಾಜಿಕ ವಿಭಾಗದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಸರ್ಕಾರಿ ಅಥವಾ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಲಿಂಗತ್ವ ಆಧಾರಿತ ವಿಷಯದ ಮೇಲೆ ಕನಿಷ್ಠ 3 ವರ್ಷದ ಅನುಭವ ಹೊಂದಿರಬೇಕು. ಆಯ್ಕೆ ಆಗುವ ಅಭ್ಯರ್ಥಿಗೆ ಮಾಸಿಕ ರೂ.35,000/- ಗೌರವ ಧನ ನೀಡಲಾಗುವುದು.

ಹಣಕಾಸು ಸಾಕ್ಷರತೆ ಹಾಗೂ ಲೆಕ್ಕಿಗ ತಜ್ಞ (ಸ್ಪೆಷಲಿಷ್ಟ್ ಇನ್ ಪಿನ್ಯಾಸಿಯಲ್ ಲಿಟ್ರಸಿ ಅಂಡ್ ಅಕೌಂಟೆಟ್) ಒಂದು ಹುದ್ದೆ. ಅಂಗೀಗೃತ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರ ಬ್ಯಾಂಕಿಂಗ್, ಇತರೆ ಸಂಖ್ಯಾ ಶಾಸ್ತç ವಿಷಯಗಳಲ್ಲಿ ಯಾವುದಾದರು ಒಂದರಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಸರ್ಕಾರಿ ಅಥವಾ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಪಿನ್ಯಾಸಿಯಲ್ ಲಿಟ್ರಸಿ ಅಂಡ್ ಅಕೌಂಟೆಟ್ ವಿಭಾಗದಲ್ಲಿ ಕನಿಷ್ಠ 3 ವರ್ಷದ ಅನುಭವ ಹೊಂದಿರಬೇಕು. ಆಯ್ಕೆ ಆಗುವ ಅಭ್ಯರ್ಥಿಗೆ ಮಾಸಿಕ ರೂ.28000/- ಗೌರವ ಧನ ನೀಡಲಾಗುವುದು.

ಅರ್ಜಿ ಸಲ್ಲಿಸಲು ಅಥವಾ ಹೆಚ್ಚಿನ ಮಾಹಿತಿಗಾಗಿ, ನಗರದ ಜಿಲ್ಲಾ ಬಾಲಭವನ ಆವರಣದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೆಶಕರ ಕಚೇರಿ ಭೇಟಿ ನೀಡಬಹುದು. ದೂರವಾಣಿ ಸಂಖ್ಯೆ 08194-235259 ಹಾಗೂ ಇ-ಮೇಲ್  [email protected]  ಸಂಪರ್ಕಿಸಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

ಭಾಷಣದಲ್ಲಿ ಯಡವಟ್ಟು : ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕುಮಾರಸ್ವಾಮಿ ದೂರು.. ಎಫ್ಐಆರ್ ದಾಖಲು..!

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣಾ ಕ್ಷೇತ್ರಕ್ಕೆ ಬಿಜೆಪಿ ಅದ್ಯಾವಾಗ ಮತ್ತೆ ಪ್ರಹ್ಲಾದ್ ಜೋಶಿ ಅವರಿಗೇನೆ ಟಿಕೆಟ್ ಕೊಟ್ಟಿತೇ ಅಂದಿನಿಂದಾನೇ ದಿಂಗಾಲೇಶ್ವರ ಸ್ವಾಮೀಜಿಗೆ ಬೇಸರ ಉಂಟಾಗಿತ್ತು. ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮನವಿ ಕೂಡ ಅಭ್ಯರ್ಥಿಯ ಬದಲಾವಣೆ

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

error: Content is protected !!