Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉದ್ಯೋಗ ವಾರ್ತೆ : ಚಿತ್ರದುರ್ಗ ಜಿಲ್ಲಾ  ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ವ್ಯವಸ್ಥಾಪಕರು, FDA, SDA ಸೇರಿದಂತೆ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ :  ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಚಿತ್ರದುರ್ಗ ಇದರ ವಿವಿಧ ವೃಂದಗಳಲ್ಲಿ ಖಾಲಿ ಇರುವ ಈ ಕೆಳಕಂಡ 68 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್  ಮುಖಾಂತರ ((Online)) ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಕೋರಿಯರ್/ಖುದ್ದಾಗಿ/ಅಂಚೆ ಮೂಲಕ ಪ್ರತ್ಯೇಕವಾಗಿ ಕಳುಹಿಸಲು ಅವಕಾಶವಿರುವುದಿಲ್ಲ ಎಂದು ಈ ಮೂಲಕ ಸ್ಟಷ್ಟಪಡಿಸಿದೆ. ನೇರ ನೇಮಕಾತಿಗೆ ಸಂಬಂಧಿಸಿದ ಮಾಹಿತಿಗಳಾದ ಅರ್ಜಿ ನಮೂನೆ, ಅರ್ಜಿ ಸಲ್ಲಿಸುವ ವಿಧಾನ, ಮೀಸಲಾತಿ ವರ್ಗೀಕರಣ, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ ಹಾಗೂ ಅರ್ಜಿ ಶುಲ್ಕ, ಸಲ್ಲಿಸಬೇಕಾದ ದಾಖಲೆಗಳು, ಆಯ್ಕೆ ವಿಧಾನ, ಸೂಚನೆಗಳು ಇತ್ಯಾದಿ ಎಲ್ಲಾ ಹೆಚ್ಚಿನ ವಿವರಗಳನ್ನು ಬ್ಯಾಂಕ್ ಅಧಿಕೃತ ವೆಬ್ ಸೈಟ್ www.chitradurgadccbank.com ರಲ್ಲಿ ನೀಡಲಾಗಿದೆ. ಹುದ್ದೆಗಳ ವಿವರ ಈ ಕೆಳಕಂಡಂತಿದೆ.

ಕ್ರ. ಸಂ.ಹುದ್ದೆಗಳ ಹೆಸರು ಮತ್ತು ಖಾಲಿ ಇರುವ ಹುದ್ದೆಗಳ ಸಂಖ್ಯೆ

1.  ಸಹಾಯಕ ಪ್ರಧಾನ ವ್ಯವಸ್ಥಾಪಕರು- 06
2.  ಪ್ರಥಮ ದರ್ಜೆ ಗುಮಾಸ್ತರು – 09
3.   ದ್ವಿತೀಯ ದರ್ಜೆ ಗುಮಾಸ್ತರು – 35
4.   ಕಂಪ್ಯೂಟರ್ ಇಂಜೀನಿಯರ್ – 02
5.   ವಾಹನ ಚಾಲಕರು – 02
6.   ಅಟೆಂಡರ್/ಸಹಾಯಕರು -14

ಒಟ್ಟು 68 ಹುದ್ದೆಗಳು ಖಾಲಿ ಇದ್ದು ಅನ್ ಲೈನ್ ಮೂಲಕ ಅರ್ಜಿಯನ್ನು ದಿನಾಂಕ:15.09.2023 ರಿಂದ ದಿನಾಂಕ:16.10.2023 ರವರೆಗೆ ಸಲ್ಲಿಸಬಹುದಾಗಿರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬ್ಯಾಂಕಿನ ಅಧಿಕೃತ ವೆಬ್ ಸೈಟ್ www.chitradurgadccbank.com ರಲ್ಲಿ ಲಭ್ಯವಿದ್ದು, ಆಸಕ್ತಿವುಳ್ಳ ಅಭ್ಯರ್ಥಿಗಳು ಬ್ಯಾಂಕ್ ವೆಬ್‍ಸೈಟ್‍ಗೆ ಭೇಟಿ ನೀಡಿ ಅನ್‍ಲೈನ್ ಮೂಲಕ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಎಂದು
ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ. ಚಿತ್ರದುರ್ಗ, ಇದರ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :
ಚಿತ್ರದುರ್ಗ ಜಿಲ್ಲಾ  ಸಹಕಾರ ಕೇಂದ್ರ ಬ್ಯಾಂಕ್ ನಿ., ಚಿತ್ರದುರ್ಗ
ಪ್ರಧಾನ ಕಛೇರಿ, ಜಿಲ್ಲಾಧಿಕಾರಿಗಳ ರಸ್ತೆ ,                  ಚಿತ್ರದುರ್ಗ -577501.
Email. ID : [email protected]
ದೂರವಾಣಿ ಸಂಖ್ಯೆ :08194 – 222546.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!