Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಗತ್ ಸಿಂಗ್ ರ ಕನಸಿನ ಸಮಾಜವಾದಿ ಭಾರತಕ್ಕೆ ಕೈಜೋಡಿಸಿ : ರವಿಕುಮಾರ್

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 28 : ಬಿಳಿಯರು ತೊಲಗಬಹದು, ನಮ್ಮವರೇ ನಮ್ಮನ್ನು ಆಳ್ವಿಕೆ ಮಾಡಿ ಜನರ ಶೋಷಣೆ ನಿಲ್ಲುವುದಿಲ್ಲ’ ಎಂದು ಭಗತ್ ಸಿಂಗ್ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ನುಡಿದ್ದರು. ಅವರು ಹೇಳಿದ ಒಂದು ಮಾತು ಇಂದಿಗೂ ಸತ್ಯ. ಆದ್ದರಿಂದ ನಾವು ಅವರ ವಿಚಾರ ಅರ್ಥಮಾಡಿಕೊಂಡು ಮಾನವನಿಂದ ಮಾನವನ ಮೇಲೆ ಜರುಗುವ ಶೋಷಣೆಯನ್ನು ತೊಲಗಿಸಿ ನೊಂದ ಜನ ಗೌರವದಿಂದ ತಲೆಯೆತ್ತಿ ಜೀವಿಸುವ ಭಗತ್ ಸಿಂಗ್ ರ ಕನಸಿನ ಸಮಾಜವಾದಿ ಭಾರತಕ್ಕೆ ಕೈಜೋಡಿಸಬೇಕು ಎಂದು ಸಾಮಾಜಿಕ ಹೋರಾಟಗಾರ ರವಿಕುಮಾರ್ ಹೇಳಿದರು.

ನಗರದ ಓನಕೆ ಓಬವ್ವ ಜಿಲ್ಲಾ ಕ್ರೀಡಾಂಗಣ ಹಾಗೂ ಧೀರ ಹುತಾತ್ಮ ಭಗತ್ ಸಿಂಗ್ ಉದ್ಯಾನವನದಲ್ಲಿ
ಸ್ವಾತಂತ್ರ್ಯ ಸಂಗ್ರಾಮದ ಧೀರ ಹುತಾತ್ಮ, ಮಹಾನ್ ಕ್ರಾಂತಿಕಾರಿ ಭಗತ್ ಸಿಂಗ್ ರವರ 117ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಎಐಡಿಎಸ್ಓ ಜಿಲ್ಲಾ ಮುಖಂಡ ಕೆ.ಈರಣ್ಣ ಅವರು ಮಾತನಾಡುತ್ತಾ ಜಾತಿ – ಧರ್ಮಗಳ ಗಡಿಯನ್ನು ಮೀರಿ ಎಲ್ಲರೂ ಭಾರತವೆಂಬ ಒಂದೇ ಸೂರಿಡಿಯಲ್ಲಿ ಎಲ್ಲರೂ ನೆಮ್ಮದಿಯಿಂದ ಬದುಕುವಂತಾಗಬೇಕು, ಬ್ರಿಟೀಷ್ ಸಾಮ್ರಾಜ್ಯಶಾಹಿಗಳ ವಿರುದ್ಧ ರಾಜಿರಹಿತ ಹೋರಾಟ ನಡೆಸಿದ ನಗುನಗುತ್ತಾ ಗಲ್ಗಂಬವನ್ನೀರಿದ ಭಗತ್ ಸಿಂಗ್. ಈ ಸಮಾಜದಲ್ಲಿ ಶಿಕ್ಷಣ ವ್ಯಾಪಾರೀಕರಣ, ನಿರುದ್ಯೋಗ, ಜಾತಿ ಹಾಗೂ ಕೋಮುವಾದದ ವಿರುದ್ಧ ದ್ವನಿ ಎತ್ತಲು ಭಗತ್ ಸಿಂಗ್ ರವರ ವಿಚಾರಗಳು ಸ್ಫೂರ್ತಿಯಾಗಬೇಕಿದೆ. ಭಗತ್ ಸಿಂಗ್ ರ ಜೀವನ ಸಂಘರ್ಷ ಹಾಗೂ ವಿಚಾರಗಳನ್ನು ಸ್ಫೂರ್ತಿಯಾಗಿಸಿಕೊಂಡು ಅವರ ಕನಸಿನ ಸಮಾಜವಾದಿ ಭಾರತ ಕಟ್ಟುಲು ವಿದ್ಯಾರ್ಥಿಗಳು ಸಂಕಲ್ಪವನ್ನು ತೆಗೆದುಕೊಳ್ಳಬೇಕು ಶಿಕ್ಷಣ – ಸಂಸ್ಕೃತಿ – ಮಾನವತೆ ಉಳಿಸಲು ವಿದ್ಯಾರ್ಥಿ-ಯುವಜನತೆ ಒಂದಾಗಬೇಕು ಎಂದು ಕರೆ ನೀಡಿದರು.

ಈ‌ ಕಾರ್ಯಕ್ರಮವನ್ನು ಎಐಡಿಎಸ್‌ಓ ಚಿತ್ರದುರ್ಗ ಮತ್ತು ಇನ್ನಿತರೆ ಶಾಲಾ ಕಾಲೇಜು, ಹಾಸ್ಟೆಲ್ ನಲ್ಲಿ ಭಗತ್ ಸಿಂಗ್ ರವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮ ಮಾಡಲಾಯಿತು.

ಈ ಸಂದರ್ಭದಲ್ಲಿ ಎಐಡಿಎಸ್‌ಓ ಸದಸ್ಯರು ಹೇಮಂತ್, ಪವನ್, ನಿಶಾನ್ ಮತ್ತು ವಿದ್ಯಾರ್ಥಿಗಳು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮನು ಕುಲದ ಆಯಸ್ಸನ್ನು ಹೆಚ್ಚಿಸಿದ್ದು ವೈದ್ಯರು: ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ

ಮೈಸೂರು ಸೆ 28 : ವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರ ಮನುಕುಲದ ಆಯಸ್ಸನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ ವ್ಯಕ್ತಪಡಿಸಿದರು.   ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶತಮಾನೋತ್ಸವದ ಸಮಾರೋಪ

ಈ ಬಾರಿಯ ಬಿಗ್ ಬಾಸ್ ಗೆ ಹೋಗ್ತಿದ್ದಾರೆ ಈ ಸ್ಟಾರ್ ಗಳು : ಕನ್ಫರ್ಮ್ ಸುದ್ದಿ ಇದು..!

ಬೆಂಗಳೂರು : ಬಿಗ್ ಬಾಸ್ ಕನ್ನಡ‌ ಸೀಸನ್ 11ಗೆ ಕ್ಷಣಗಣನೆ ಶುರುವಾಗಿದೆ. ಬಿಗ್ ಬಾಸ್ ಮನೆಯೊಳಗೆ ಹೋಗೋದು ಯಾರು ಎಂಬ ಕುತೂಹಲ ಇಡೀ ಕರ್ನಾಟಕದ ಜನತೆಗೆ ಇದೆ. ಇಂದು ಸಂಜೆ ಅದಕ್ಕೆ ಕೊಂಚ ತೆರೆ

ಅಜೀಂ ಪ್ರೇಮ್‍ಜಿ ಫೌಂಡೇಶನ್ ಕಾರ್ಯ ಪ್ರಪಂಚಕ್ಕೆ ಮಾದರಿ: ಕೆ.ರಾಜಶೇಖರ ಹಿಟ್ನಾಳ

  ಸುದ್ದಿಒನ್, ಕೊಪ್ಪಳ, ಸೆಪ್ಟೆಂಬರ್. 28 : ಅಜೀಂ ಪ್ರೇಮ್‍ಜಿ ಫೌಂಡೇಶನ ಮಾಡುತ್ತಿರುವ ಸೇವಾ ಕಾರ್ಯವು ಪ್ರಪಂಚಕ್ಕೆ ಮಾದರಿಯಾಗಿದೆ ಎಂದು ಲೋಕಸಭಾ ಸದಸ್ಯರಾದ ಕೆ.ರಾಜಶೇಖರ ಹಿಟ್ನಾಳ ಹೇಳಿದರು. ಅವರು ನಗರದ ಸಿ.ಪಿ.ಎಸ್.ಶಾಲೆಯಲ್ಲಿ ಅಜೀಂ ಪ್ರೇಮ್‍ಜಿ

error: Content is protected !!