ಟಿಬಿ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ : ಡಾ.ಕಾವ್ಯ

ಚಿತ್ರದುರ್ಗ. ಫೆ.06: ಎಲ್ಲರೂ ಕೈಜೋಡಿಸಿ ಟಿಬಿ ಮುಕ್ತ ಸಮಾಜ ನಿರ್ಮಾಣ ಮಾಡೋಣ ಎಂದು ಕಾಸವರಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಕಾವ್ಯ ಹೇಳಿದರು.

ಚಿತ್ರದುರ್ಗ ತಾಲ್ಲೂಕಿನ ಕಾಸವರಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ದಂಡಿನ ಕುರುಬರಹಟ್ಟಿ ಗೇಟ್ ಬಳಿ ಇರುವ ಸಿಟಿ ಫೂಟ್ ವೇರ್ ಕಂಪನಿಯ ಆವರಣದಲ್ಲಿ 100 ದಿನಗಳ ಕ್ಷಯ ರೋಗ ನಿರ್ಮೂಲನ ತೀವ್ರ ಪ್ರಚಾರಾದೋಂಲನದಲ್ಲಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಟಿಬಿ ರೋಗವು ಒಂದು ಸಾಂಕ್ರಾಮಿಕ ರೋಗ. ಬ್ಯಾಕ್ಟೀರಿಯಾ ಸೋಂಕಿನಿಂದ ಹರಡುವ ಕಾಯಿಲೆಯಾಗಿದೆ. ರೋಗಿಯು ಕೆಮ್ಮಿದಾಗ,  ಸೀನಿದಾಗ ಆತನಿಂದ ಉತ್ಪತ್ತಿಯಾದ ತುಂತುರು ಹನಿಗಳು ವಾತಾವರಣಕ್ಕೆ ಸೇರುತ್ತª.  ಆ ಉಸಿರನ್ನು ಆರೋಗ್ಯವಂತನು ಸೇವಿಸಿದಾಗ ಆತನಿಗೆ ಟಿಬಿ ರೋಗವು ಬರುವ ಸಂಭವವಿರುತ್ತದೆ ಎಂದರು.

ರಾಷ್ಟ್ರೀಯ ಕ್ಷಯರೋಗ ನಿರ್ಮೂಲನೆ ಕಾರ್ಯಕ್ರಮದ ಅಡಿಯಲ್ಲಿ ನೂರು ದಿನಗಳ ತೀವ್ರ ಪ್ರಚಾರ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಟಿಬಿ ರೋಗ ಪತ್ತೆ ಹಚ್ಚುವುದು ಚಿಕಿತ್ಸೆ ನೀಡುವುದು ಪ್ರಮುಖವಾಗಿರುತ್ತದೆ ಎಂದರು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್ ಮಾತನಾಡಿ,  ಒಬ್ಬ ಕ್ಷಯ ರೋಗಿಯು 14 ಆರೋಗ್ಯವಂತ ಜನರಿಗೆ ಟಿಬಿ ರೋಗ ಅಂಟಿಸಬಹುದಾಗಿದೆ. ಹಾಗಾಗಿ ಸಮುದಾಯದಲ್ಲಿ ರೋಗವನ್ನು ಶೀಘ್ರ ಪತ್ತೆ ಮತ್ತು ತ್ವರಿತ ಚಿಕಿತ್ಸೆಗೆ ಒಳಪಡಿಸುವುದು ಪ್ರಮುಖವಾಗಿರುತ್ತದೆ. ಭಾರತದಲ್ಲಿ ಟಿಬಿ ರೋಗವು ಸಾರ್ವಜನಿಕ ಆರೋಗ್ಯ ಸಮಸ್ಯೆಯಾಗಿದೆ ಕೆಮ್ಮುವಾಗ ಸೀನುವಾಗ ಕರವಸ್ತ್ರ ಬಳಸುವ ಅಭ್ಯಾಸ ರೂಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯ ರೋಗ ವಿಭಾಗದ ಮೇಲ್ವಿಚಾರಕ ಮಹೇಂದ್ರ ಕುಮಾರ್,  ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ತುಕಾರಾಂ, ಹಿರಿಯ ಆರೋಗ್ಯ ಸುರಕ್ಷತಾ ಅಧಿಕಾರಿ ಕಾತ್ಯಾನಮ್ಮ, ತಾಲ್ಲೂಕು ಆಶಾ ಬೋಧಕಿ ತಬಿತಾ,  ಕಂಪನಿ ವ್ಯವಸ್ಥಾಪಕರು,  200ಕ್ಕೂ ಹೆಚ್ಚು ಕಾರ್ಮಿಕರು ಉಪಸ್ಥಿತರಿದ್ದರು.

suddionenews

Recent Posts

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

5 minutes ago

ಧರ್ಮಪುರ ಹಾಲು ಉತ್ಪಾದಕ ಸಹಕಾರ ಸಂಘ ಅತ್ಯುತ್ತಮ ಕಾರ್ಯ ನಿರ್ವಹಣೆ : ಬಿಸಿ ಸಂಜೀವ ಮೂರ್ತಿ ಮೆಚ್ಚುಗೆ

ಹಿರಿಯೂರು : ಜಿಲ್ಲೆಯಲ್ಲಿಯೇ ಧರ್ಮಪುರ ಹಾಲು ಉತ್ಪಾದಕ ಸಹಕಾರ ಸಂಘ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಶಿಮುಲ್ ನಿರ್ದೇಶಕ ಬಿಸಿ…

51 minutes ago

ಡಾ. ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡದ ಕಾಂಗ್ರೆಸ್ ಇಂದು ಜೈ ಭೀಮ್ ಎನ್ನುತ್ತಿದೆ : ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ

  ಸುದ್ದಿಒನ್ ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ವೇಳೆ ಪ್ರಧಾನಿ ಮೋದಿಯವರು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ…

2 hours ago

ಚಿತ್ರದುರ್ಗಕ್ಕೆ ಆಗಮಿಸಿದ ಕರ್ನಾಟಕ ಶ್ರಮಿಕ್ ಸಮ್ಮಾನ್ ಯಾತ್ರೆ : ಫೆ.25 ರಂದು ನವದೆಹಲಿಯಲ್ಲಿ ಬೃಹತ್ ಸಮಾವೇಶ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

2 hours ago

ಫೆಬ್ರವರಿ 08 ರಂದು ಶ್ರೀ ಜೋಳ ಸಿದ್ದಿವಿನಾಯಕ ದೇವಾಲಯ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 06 :…

3 hours ago

ಚಿತ್ರದುರ್ಗ ಜಿಲ್ಲಾಸ್ಪತ್ರೆ ಕಾರ್ಯವೈಖರಿಗೆ ಡಾ.ನಾಗಲಕ್ಷ್ಮೀ ಚೌಧರಿ ಬೇಸರ

ಚಿತ್ರದುರ್ಗ, ಫೆಬ್ರವರಿ. 06 : ಜಿಲ್ಲಾಸ್ಪತ್ರೆಯ ಕಾರ್ಯವೈಖರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಬೇಸರ ವ್ಯಕ್ತಪಡಿಸಿದರು. ನಗರದ…

3 hours ago