Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದಿನಿಂದ Ju.NTR ‘ದೇವರ’ ರಿಲೀಸ್ : ಆಂಧ್ರ, ತೆಲಂಗಾಣದಲ್ಲಿ ಟಿಕೆಟ್ ಕಡಿಮೆ.. ಆದರೆ ನಮ್ಮಲ್ಲಿ..?

Facebook
Twitter
Telegram
WhatsApp

ನಮ್ಮಲ್ಲಿ ಸಿನಿಮಾ ನೋಡಬೇಕು ಅಂದ್ರೆ ಮಿಡಲ್ ಕ್ಲಾಸ್ ಮಂದಿ ಫ್ಯಾಮಿಲಿ ಸಮೇತ ಹೋಗುವುದಕ್ಕೆ ಸಾಧ್ಯವಿಲ್ಲ. ಟಿಕೆಟ್ ದರದ ಜೊತೆಗೆ ಮಲ್ಟಿಪ್ಲೆಕ್ಸ್ ಗಳಲ್ಲಿ ಪಾಪ್ ಕಾರ್ನ್ ದರವೂ ದುಬಾರಿ. ಆದರೆ ಪಕ್ಕದ ರಾಜ್ಯದಲ್ಲಿ ಟಿಕೆಟ್ ದರ ಪರವಾಗಿಲ್ಲ ಎನಿಸಿದೆ. ಬಹು ನಿರೀಕ್ಷಿತ ದೇವರ ಸಿನಿಮಾ ಇಂದಿನಿಂದ ರಿಲೀಸ್ ಆಗುತ್ತಿದೆ. ಈ ಸಿನಿಮಾದ ಸಕ್ಸಸ್ ನಿರ್ದೇಶಕ ಹಾಗೂ ನಟ ಇಬ್ಬರಿಗೂ ಬಹಳ ಮುಖ್ಯವಾಗಿದೆ.

ಜೂ.ಎನ್ಟಿಆರ್ ಸುಮಾರು 6 ವರ್ಷಗಳ ಬಳಿಕ ಸೋಲೋ ಹೀರೋ ಆಗಿ ಮಾಡಿರುವಂತ ಸಿನಿಮಾ ಇದು. ಪ್ಯಾನ್ ಇಂಡಿಯಾ ಸಿನಿಮಾ ಇದಾಗಿದ್ದು, ಜೂ.ಎನ್ಟಿಆರ್ ಅವರು ಅಗ್ನಿಪರೀಕ್ಷೆಗೆ ಇಳಿದಿದ್ದಾರೆ. ಹಾಗೇ ನಿರ್ದೇಶಕ ಕೊರಟಾಲ ಶಿವುಗು ಈ ಸಿನಿಮಾ ಒಂದು ರೀತಿಯಲ್ಲಿ ಅಗ್ನಿ ಪರೀಕ್ಷೆಯೇ ಸರಿ. ಯಾಕಂದ್ರೆ ಆಚಾರ್ಯ ಸಿನಿಮಾ ಸೋತು ಸುಣ್ಣವಾದ ಬಳಿಕ ದೇವರ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಹೀಗಾಗಿ ದೊಡ್ಡ ನಿರೀಕ್ಷೆಯನ್ನೇ ಸಿನಿಮಾ ಹುಟ್ಟು ಹಾಕಿದೆ.

ಈ ಸಿನಿಮಾಗೆ ಮ್ಯೂಸಿಕ್ ಪ್ಲಸ್ ಪಾಯಿಂಟ್ ಆಗಿದೆ. ಜೈಲರ್ ಮೂಲಕ ಬಾರಿ ಗಮನ ಸೆಳೆದಿದ್ದ ಅನಿರುದ್ ರವಿಚಂದರ್ ಮ್ಯೂಸಿಕ್ ಕಂಪೋಸ್ ಮಾಡಿದ್ದು ಎಲ್ಲರ ಚಿತ್ತ ಕದ್ದಿದೆ. ದೇವರ ಮೂಲಕ ಅನಿರುದ್ಧ್ ಮತ್ತೆ ಕಮಾಲ್ ಮಾಡುವುದಕ್ಕೆ ಹೊರಟಿದ್ದಾರೆ. ಇನ್ನು ಟಿಕೆಟ್ ದರವೂ ಮಿಡಲ್ ಕ್ಲಾಸ್ ಮಂದಿಗೂ ಎಟಕುವಂತಿದೆ. ಥಿಯೇಟರ್ ನಲ್ಲಿ 100 ರೂಪಾತಿ ಇದ್ದು ಮಲ್ಟಿಪ್ಲೆಕ್ಸ್ ಗಳಲ್ಲಿ 135 ರೂಪಾಯಿ ಇದೆ. ಈ ಮೂಲಕ ದೇವರ ಸಿನಿಮಾಗೆ ಜನರನ್ನು ಸೆಳೆಯುವ ಪ್ರಯತ್ನವೂ ನಡೆದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎರಡನೆ ದಿನಕ್ಕೆ ಕಾಲಿಟ್ಟ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಹೆಚ್ಚಿನ ಒತ್ತಡವಾಗುವುದು ಸೇರಿದಂತೆ

ಹಂಪಿ ಉತ್ಸವದಂತೆ ದುರ್ಗೋತ್ಸವ ಆಚರಿಸುವಂತೆ ಕರುನಾಡ ವಿಜಯಸೇನೆ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಐತಿಹಾಸಿಕ ಏಳು ಸುತ್ತಿನ ಕೋಟೆಯಿರುವ ಚಿತ್ರದುರ್ಗದಲ್ಲಿ ದುರ್ಗೋತ್ಸವ ಆಚರಿಸುವಂತೆ ಕರುನಾಡ ವಿಜಯಸೇನೆ

ಮೊಳಕಾಲ್ಮುರು ತಾ.ಪಂ ವ್ಯವಸ್ಥಾಪಕ ಅಮಾನತು

ಚಿತ್ರದುರ್ಗ. ಸೆ.27: ಪದೇ ಪದೇ ಕಚೇರಿ ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗುವುದು ಹಾಗೂ ಕರ್ತವ್ಯದಲ್ಲಿ ನಿರ್ಲಕ್ಷö್ಯ ತೋರಿದ ಕಾರಣಕ್ಕಾಗಿ ಮೊಳಕಾಲ್ಮುರು ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಅರುಣ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ

error: Content is protected !!