Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮದಕರಿಪುರದಲ್ಲಿ ಸೇವಾಲಾಲ್ ಮರಿಯಮ್ಮ ಜಾತ್ರೆಗೆ ನ್ಯಾಯಾಧೀಶ ವೆಂಕಟೇಶ್‍ನಾಯ್ಕರಿಂದ ಚಾಲನೆ

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 19 : ನಾಲ್ಕು ವರ್ಷಗಳಿಗೊಮ್ಮೆ ಮದಕರಿಪುರದಲ್ಲಿ ನಡೆಯುವ ಸೇವಾಲಾಲ್ ಮರಿಯಮ್ಮ ಜಾತ್ರೆಗೆ ಹೈಕೋರ್ಟ್ ನ್ಯಾಯಾಧೀಶರಾದ ವೆಂಕಟೇಶ್‍ನಾಯ್ಕ ಬುಧವಾರ ಚಾಲನೆ ನೀಡಿದರು.

ಗೋಧಿ ಮೊಳಕೆ(ಥೀಸ್) ಕೀಳುವ ಮೂಲಕ ಜಾತ್ರೆಗೆ ಚಾಲನೆ ನೀಡಿ ಮಾತನಾಡಿದ ನ್ಯಾಯಾಧೀಶರಾದ ವೆಂಕಟೇಶ್‍ನಾಯ್ಕ 4 ವರ್ಷಗಳಿಗೊಮ್ಮೆ ಮದಕರಿಪುರದಲ್ಲಿ ಸೇವಾಲಾಲ್ ಮರಿಯಮ್ಮ ಜಾತ್ರೆ ಅತ್ಯಂತ ವಿಜೃಂಭಣೆ ಹಾಗೂ ಶ್ರದ್ದಾ ಭಕ್ತಿಯಿಂದ ನಡೆಯಲಿದೆ. ಅವಿವಾಹಿತ ಯುವತಿಯರು ಹತ್ತು ದಿನಗಳ ಕಾಲ ವ್ರತ ಆಚರಿಸಿ ಬೆಳೆಸುವ ಗೋಧಿ ಮೊಳಕೆ ಹಸಿರು ಪ್ರಕೃತಿಯ ಸಂಕೇತ. ಪರಿಸರ ಹಚ್ಚ ಹಸಿರಿನಿಂದ ಕೂಡಿದ್ದರೆ ಸಕಲ ಜೀವರಾಶಿಗಳು ನೆಮ್ಮದಿಯಿಂದ ಬದುಕುತ್ತವೆ ಎಂದು ಹೇಳಿದರು.

ಸೇವಾಲಾಲ್ ಮರಿಯಮ್ಮ ದೇವಸ್ಥಾನದ ಧರ್ಮದರ್ಶಿ ಕಮಿಟಿ ಗೌರವಾಧ್ಯಕ್ಷ ಹಾಲಾನಾಯ್ಕ, ಶಿವಾನಾಯ್ಕ, ಶ್ರೀನಿವಾಸ್‍ನಾಯ್ಕ, ಗಂಗಾನಾಯ್ಕ, ಯಂಕಾನಾಯ್ಕ, ಜಯಾನಾಯ್ಕ, ಚಂದ್ರನಾಯ್ಕ, ರಮೇಶ್‍ನಾಯ್ಕ ಸೇರಿದಂತ ಬಂಜಾರ ಸಮಾಜದ ಅನೇಕ ಪ್ರಮುಖರು ಸೇವಾಲಾಲ್ ಮರಿಯಮ್ಮ ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...