Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿನೆಮಾ ಸೆಟ್ಟೇರುವ ಮೊದಲೇ ಕ್ರೇಜ್ ಹುಟ್ಟಿಸಿದ ಹೊಸಬರ ‘ಜುಗಲ್ ಬಂದಿ’

Facebook
Twitter
Telegram
WhatsApp

ಬೆಂಗಳೂರು :  ಈಗಂತೂ ತರಹೇವಾರಿ ಕಥಾಹಂದರ ಹೊತ್ತ ಹೊಸಬರ ಸಿನೆಮಾಗಳು ಸೆಟ್ಟೇರುತ್ತಲೇ ಇರ್ತಾವೆ. ಎಲ್ಲಾ ಸಿನಿಮಾಗಳು ಸೌಂಡ್ ಮಾಡ್ತಾವೆ ಅನ್ನೋಕೆ ಆಗೊಲ್ಲ. ಆದ್ರೆ ಕೆಲ ಸಿನಿಮಾಗಳು ಶುರುವಾಗೋ ಮುಂಚೆನೇ ಸಖತ್ ಡಿಮ್ಯಾಂಡ್ ಸೃಷ್ಟಿಸಿರುತ್ತೆ. ಆ ಸಾಲಿಗೆ ಸೇರುವ ಸಿನಿಮಾ ಜುಗಲ್ ಬಂದಿ. ಇತ್ತೀಚೆಗಷ್ಟೇ ಫಸ್ಟ್ ಲುಕ್ ರಿಲೀಸ್ ಮಾಡಿ ಭರವಸೆ ಹುಟ್ಟು ಹಾಕಿದ್ದ ಹೊಸಬರ ಜುಗಲ್ ಬಂದಿ ಸಿನೆಮಾ ಸೆಟ್ಟೇರುವ ಮುಂಚೆ ಆಡಿಯೋ ರೈಟ್ಸ್ ಸೋಲ್ಡ್ ಔಟ್ ಮಾಡಿಕೊಂಡಿರುವ ಸಂತಸದಲ್ಲಿದೆ.

ಹೌದು, ಈ ಹಿಂದೆ ಹಲವು ಸಿನಿಮಾಗಳಿಗೆ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ನಿರ್ವಹಿಸಿದ್ದ ಡಿಂಡಿಮ ದಿವಾಕರ್ ಈಗ ಜುಗಲ್ ಬಂದಿ ಸಿನಿಮಾ ಮೂಲಕ ಸ್ವತಂತ್ರ ನಿರ್ದೇಶಕನಾಗಿ ಬಡ್ತಿ ಪಡೆಯೋದ್ರ ಜೊತೆಗೆ ಡಿಂಡಿಮ ಪ್ರೊಡಕ್ಷನ್ ನಡಿ ತಯಾರಾಗ್ತಿರೋ ಸಿನೆಮಾಗೆ ಬಂಡವಾಳವನ್ನೂ ಹೂಡುತ್ತಿದ್ದಾರೆ.

ಇತ್ತೀಚೆಗಷ್ಟೇ ಬೆಂಗಳೂರಿನ ವರಸಿದ್ದಿ ವಿನಾಯಕ ದೇಗುಲದಲ್ಲಿ  ಸಿನಿಮಾ ಮುಹೂರ್ತ ನೆರೆವೇರಿಸಿಕೊಂಡಿದ್ದು, ಈ ಅದ್ದೂರಿ ಕಾರ್ಯಕ್ರಮದಲ್ಲಿ  ಚಿತ್ರದ ನಾಯಕ ಯಶ್ ಶೆಟ್ಟಿ, ಸಂತೋಷ್ ಅಶ್ರಯ್, ಅಶ್ವಿನ್  ರಾವ್ ಪಲ್ಲಕ್ಕಿ, ಅರ್ಚನಾ ಕೊಟ್ಟಿಗೆ, ಮಾನಸಿ ಸುಧೀರ್, ನಿರ್ದೇಶಕ ದಿವಾಕರ್ ಡಿಂಡಿಮ ಮುಂತಾದವರು ಭಾಗಿಯಾಗಿದ್ದರು. ಥ್ರಿಲ್ಲರ್ ಕಥಾಹಂದರ ಹೊಂದಿರುವ ಜುಗಲ್ ಬಂದಿ ಸಿನಿಮಾ ಇದೇ ತಿಂಗಳಿನಿಂದ ಶೂಟಿಂಗ್ ಆರಂಭಿಸಲು ಪ್ಲಾನ್ ಮಾಡಿಕೊಂಡಿದೆ. ಚಿತ್ರಕ್ಕೆ ಪ್ರದ್ಯೋತನ್ ಸಂಗೀತ ನಿರ್ದೇಶನ, ಎಸ್. ಕೆ ರಾವ್ ಛಾಯಾಗ್ರಹಣ ಇರಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!