Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೂನ್ 30 ರಂದು ಶಾಸಕ ಕೆ.ಸಿ.ವಿರೇಂದ್ರ ಅವರ 50ನೇ ಹುಟ್ಟು ಹಬ್ಬ, ಹಾಗೂ ಜಿ.ಎಸ್. ಮಂಜುನಾಥ್ ಅಭಿನಂದನಾ ಸಮಾರಂಭ : ಶಿವಕುಮಾರ್ ಮಾಹಿತಿ

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ, ಜೂ. 28: ಶ್ರಮ ಜೀವಿ ಕಟ್ಟಡ ಮತ್ತು ಕೂಲಿ ಕಾರ್ಮಿಕ ಸೇವಾ ಪಡೆಯ ರಾಜ್ಯ ಸಮಿತಿಯ ಸಂಘದ ನೂತನ ಕಚೇರಿಯ ಉದ್ಘಾಟನೆ, ಶಾಸಕರಾದ ಕೆ.ಸಿ.ವಿರೇಂದ್ರ ಪಪ್ಪಿಯವರ 50ನೇ ಹುಟ್ಟು ಹಬ್ಬ ಹಾಗೂ ಆದಿ ಜಾಂಬವ ಅಭೀವೃದ್ದಿ ನಿಗಮಕ್ಕೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜಿ.ಎಸ್.ಮಂಜುನಾಥ್ ರವರಿಗೆ ಅಭಿನಂದನಾ ಸಮಾರಂಭವೂ ಜೂ. 30ರ ಭಾನುವಾರ ಮಧ್ಯಾಹ್ನ 12ಕ್ಕೆ ನಗರದ ಮಜೆಸ್ಟಿಕ್ ಕಟ್ಟಡದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶ್ರಮ ಜೀವಿ ಕಟ್ಟಡ ಮತ್ತು ಕೂಲಿ ಕಾರ್ಮಿಕ ಸೇವಾ ಪಡೆಯ ಕಾರ್ಯದರ್ಶಿ ಶಿವಕುಮಾರ್ ತಿಳಿಸಿದರು.

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇಂದಿನ ದಿನಮಾನದಲ್ಲಿ ಕೂಲಿ ಕೆಲಸವನ್ನು ಮಾಡುವವರಿಗೆ ಸರಿಯಾದ ರೀತಿಯಲ್ಲಿ ನ್ಯಾಯ ಸಿಗುತ್ತಿಲ್ಲ, ಸರ್ಕಾರವೂ ಸಹಾ ಅವರ ಪರವಾಗಿ ಇಲ್ಲವಾಗಿದೆ, ಈ ಹಿನ್ನಲೆಯಲ್ಲಿ ನೂತನ ಸೇವಾ ಪಡೆಯನ್ನು ಅಸ್ಥಿತ್ವಕ್ಕೆ ತರಲಾಗಿದೆ ಇದರ ಮೂಲಕ ಕಟ್ಟಡ ಮತ್ತು ಕೂಲಿ ಕಾರ್ಮಿಕರಿಗೆ ನ್ಯಾಯವನ್ನು ಕೂಡಿಸುವ ಕಾರ್ಯವನ್ನು ಮಾಡಲಾಗುವುದು ಎಂದರು.

ಸಮಾರಂಭದ ಸಾನಿಧ್ಯವನ್ನು ಮುರುಘಾಮಠದ ಬಸವಪ್ರಭು ಶ್ರೀಗಳು, ಮಾದಾರಚನ್ನಯ್ಯ ಶ್ರೀಗಳು, ಕೃಷ್ಣಯಾದವಾನಂದ ಶ್ರೀಗಳು, ಮಡಿವಾಳ ಮಾಚಿದೇವ ಶ್ರೀಗಳು, ಬಸವನಾಗ್ತಿದೇವ ಶ್ರೀಗಳು, ಇಮ್ಮಡಿ ಮೇದಾರ ಕೇತೇಶ್ವರ ಶ್ರೀಗಳು, ಸರ್ದಾರ್ ಸೇವಾಲಾಲ್ ಶ್ರೀಗಳು, ಸಂಗಾಮನಂದ ಶ್ರೀಗಳು ವಹಿಸಲಿದ್ದಾರೆ.

ಈ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ನೇರವೇರಿಸಲಿದ್ದಾರೆ. ಶಾಸಕರುಗಳಾದ ಗೋವಿಂದಪ್ಪ, ರಘುಮೂರ್ತಿ, ವಿಧಾನ ಪರಿಷತ್ ಸದಸ್ಯರಾದ ಡಿ.ಟಿ.ಶ್ರೀನಿವಾಸ್, ಮಾಜಿ ಸಂಸದ ಚಂದ್ರಪ್ಪ, ಪತ್ರಕರ್ತರ ಸಂಘದ ಅಧ್ಯಕ್ಷರಾದ ದಿನೇಶ್ ಗೌಡಗೆರೆ, ಶ್ರಮ ಜೀವಿ ಕಟ್ಟಡ ಮತ್ತು ಕೂಲಿ ಕಾರ್ಮಿಕ ಸೇವಾ ಪಡೆಯ ರಾಜ್ಯಾಧ್ಯಕ್ಷರಾದ ಮಲ್ಲಿಕಾರ್ಜನ್, ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಲಲಿತಾ ಕೃಷ್ಣಮೂರ್ತಿ, ಶ್ರೀಮತಿ ಸವಿತಾ ರಘು, ತಾಜ್‍ಪೀರ್, ಶಿವುಯಾದವ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದರು.

ಗೋಷ್ಟಿಯಲ್ಲಿ ಶ್ರಮ ಜೀವಿ ಕಟ್ಟಡ ಮತ್ತು ಕೂಲಿ ಕಾರ್ಮಿಕ ಸೇವಾ ಪಡೆಯ ರಾಜ್ಯಾಧ್ಯಕ್ಷರಾದ ಮಲ್ಲಿಕಾರ್ಜನ್, ಉಪಾಧ್ಯಕ್ಷರಾದ ತಿಪ್ಪೇಸ್ವಾಮಿ, ಸಹ ಕಾರ್ಯದರ್ಶಿ ನಾಗರಾಜ್, ನಿರ್ದೇಶಕರಾದ ಸೋಮಶೇಖರ್ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...