Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿನ್ನದ ಪದಕ ಮಿಸ್.. ನೀರಜ್ ಚೋಪ್ರಾ ಬೆಳ್ಳಿ ಗೆದ್ದಿದ್ದಕ್ಕೆ ಏನಂದ್ರು ತಂದೆ-ತಾಯಿ..!

Facebook
Twitter
Telegram
WhatsApp

 

 

ಪ್ಯಾರೀಸ್ ಒಲಂಪಿಕ್ ನಲ್ಲಿ ಭಾರತಕ್ಕೆ 5ನೇ‌ ಪದಕ ಲಭಿಸಿದೆ. ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಚಿನ್ನದ ಪದಕದ ಕಡೆಗೆ ಗಮನ ನೀಡಿದ್ದರು. ಆದರೆ ಈ ಬಾರಿ ಮಿಸ್ ಆಗಿದೆ. ಪಾಕಿಸ್ತಾನಿ ಅಥ್ಲಿಟ್ ಅರ್ಷದ್ ನದೀಮ್ ಚಿನ್ನದ ಪದಕ ಗೆದ್ದಿದ್ದಾರೆ. ಅಂದ ಹಾಗೇ ನೀರಜ್ ಚೋಪ್ರಾ ಹಾಗೂ ನದೀಮ್ ನಡುವೆ 2016ರಿಂದಾನೂ ಪೈಪೋಟಿ ನಡೆಯುತ್ತಿದೆ. 2022ರಲ್ಲೂ ನದೀಮ್ ಅವರನ್ನು ಸೋಲಿಸಿದ್ದರು. ಆದರೆ ಈ ಬಾರಿ, ನದೀಮ್ ಚಿನ್ನದ ಪದಕ ಗೆದ್ದು ಬಿಟ್ಟಿದ್ದಾರೆ.

ಈ ಬಗ್ಗೆ ನೀರಜ್ ಚೋಪ್ರಾ ತಂದೆ ಸತೀಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಪ್ರತಿಯೊಬ್ಬರಿಗೂ ಒಂದು ದಿನವಿದೆ. ಇಂದು ಪಾಕಿಸ್ತಾನದ ದಿನ. ಆದರೆ ನಾವೂ ಬೆಳ್ಳಿ ಪದಕ ಗೆದ್ದಿರುವುದು ಹೆಮ್ಮೆ ತಂದಿದೆ. ಮಗನಿಗೆ ಮೊದಲೇ ಗಾಯವಾಗಿತ್ತು. ಆ ಗಾಯದಿಂದ ಚಿನ್ನ ಗೆಲ್ಲಲು ಹಿನ್ನಡೆಯಾಗಿರಬಹುದು. ನಮಗೆ ತುಂಬಾ ಖುಷಿಯಾಗುತ್ತಿದೆ. ನಮಗೆ ಬೆಳ್ಳಿಯೂ ಬಂಗಾರಕ್ಕೆ ಸಮಾನ ಎಂದಿದ್ದಾರೆ.

ಇನ್ನು ನೀರಜ್ ಚೋಪ್ರಾ ತಾಯಿ ಸರೋಜಾ ದೇವಿ ಮಾತನಾಡಿ, ನಾವೂ ಬೆಳ್ಳಿಯಿಂದ ಸಂತೋಷವಾಗಿದ್ದೇವೆ. ಚಿನ್ನ ಪಡೆದವನು ಕೂಡ ನಮ್ಮ ಮಗನೆ ಎಂದಿದ್ದಾರೆ. ನೀರಜ್ ಚೋಪ್ರಾ ಭಾರತಕ್ಕೆ ಚಿನ್ನ ತರಲೆಂದು ಸತತ ಎರಡು ವರ್ಷಗಳಿಂದ ಪ್ರಯತ್ನ ಮಾಡುತ್ತಿದ್ದಾರೆ. ಫಿನ್ ಲ್ಯಾಂಡ್ ಹಾಗೂ ಜರ್ಮನಿಯಲ್ಲೂ ತಯಾರಿ ನಡೆಸಿದ್ದರು. ಆದರೆ ಕಡೆ ಗಳಿಗೆಯಲ್ಲಿ ಚಿನ್ನ ಮಿಸ್ ಆಗಿದೆ. ಬೆಳ್ಳಿ ಬಂದಿದ್ದಕ್ಕೆ ಮನೆಯವರೆಲ್ಲ ಸಂಭ್ರಮಾಚರಣೆ ಮಾಡಿದ್ದಾರೆ. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಇನ್ನು ಪಾಕಿಸ್ತಾನ ಈ ಬಾರಿಯ ಒಲಂಪಿಕ್ಸ್ ನಲ್ಲಿ ಮೊದಲ ಚಿನ್ನವನ್ನು ಗೆದ್ದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!