Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೆ. ಹನುಮಯ್ಯ ನಿಧನ : ಕೇಂದ್ರ ಸಚಿವರ ಸಂತಾಪ

Facebook
Twitter
Telegram
WhatsApp

ಚಿತ್ರದುರ್ಗ, ಸೆಪ್ಟೆಂಬರ್.17 : ನಗರದ ಕೆಳಗೋಟೆ ವಾಸಿ ನಿವೃತ್ತ ಶಿಕ್ಷಕ ಕೆ. ಹನುಮಯ್ಯ (74ವರ್ಷ ) ಶನಿವಾರ ರಾತ್ರಿ 8:00 ಗಂಟೆಗೆ ನಿಧನರಾದರು. ಇವರು ಕೇಂದ್ರ ಸಚಿವ ಎ. ನಾರಾಯಣಸ್ವಾಮಿಯವರ ಆಪ್ತ ಕಾರ್ಯದರ್ಶಿ ಮೋಹನ್ ಕುಮಾರ್‌ ಅವರ ತಂದೆ.

ಪತ್ನಿ, ಮೂವರು ಗಂಡು ಮಕ್ಕಳು ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.‌ ಕೆಳಗೋಟೆಯ ನಿವಾಸದಲ್ಲಿ ಅಂತಿಮ ದರ್ಶನದ ನಂತರ ಅಂತ್ಯಕ್ರಿಯೆಯನ್ನು ಇಂದು (ಭಾನುವಾರ) ಅವರ ಸ್ವಗ್ರಾಮವಾದ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿಯ ಗಜ್ಜುಗಾನಹಳ್ಳಿಯಲ್ಲಿ ಮದ್ಯಾಹ್ನ 3 ಗಂಟೆಗೆ ನೆರವೇರಲಿದೆ‌ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕೇಂದ್ರ ಸಚಿವರ ಸಂತಾಪ : ಕೆ.ಹನುಮಯ್ಯ ಅವರ ನಿಧನಕ್ಕೆ ಕೇಂದ್ರ ಸಚಿವ ಎ. ನಾರಾಯಣಸ್ವಾಮಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ. ಅವರ ಕುಟುಂಬದವರಿಗೆ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

ಗಣ್ಯರ ಸಂತಾಪ : ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಹೊಸದುರ್ಗದ ಶ್ರೀ ಶಾಂತವೀರ ಸ್ವಾಮೀಜಿ,  ಸೇರಿದಂತೆ ಜಿಲ್ಲೆಯ ಹಲವು  ಮಠಾಧೀಶರು ಶೋಕ ವ್ಯಕ್ತಪಡಿಸಿ ತೀವ್ರ ಭಗವಂತನು ಅವರ ನಿಧನದಿಂದ ದುಃಖಿತರಾಗಿರುವ ಕುಟುಂಬದವರಿಗೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.

ಎಂ.ಎಲ್.ಸಿ. ನವೀನ್, ಮಾಜಿ ಶಾಸಕ ಜಿ. ಹೆಚ್.ತಿಪ್ಪಾರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ,  ಬಿಜೆಪಿ ಪಕ್ಷದ ಮುಖಂಡರು ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಪ್ರಮುಖ ಗಣ್ಯರು ಸಂತಾಪ ಸೂಚಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!