Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶ್ರೀ ನೀಲಕಂಠೇಶ್ವರಸ್ವಾಮಿ ದೇವಾಲಯದಲ್ಲಿ ವಿಜೃಂಭಣೆಯಿಂದ ನಡೆದ ಕಡೇ ಕಾರ್ತಿಕ ಮಹೋತ್ಸವ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 26 : ನಗರದ ಶ್ರೀ ನೀಲಕಂಠೇಶ್ವರಸ್ವಾಮಿಯ ಕಡೇ ಕಾರ್ತಿಕ ಮಹೋತ್ಸವವೂ ನಿನ್ನೆ (ಸೋಮವಾರ) ಸಂಜೆ ಸಕಲ ಬಿರುಧಾವಳಿಗಳಿಂದ ಅಸಂಖ್ಯಾತ ಭಕ್ತಾಧಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ಶ್ರೀ ನೀಲಕಂಠೇಶ್ವರಸ್ವಾಮಿಯ ಕಡೇ ಕಾರ್ತಿಕ ಮಹೋತ್ಸವದ ಅಂಗವಾಗಿ ಸ್ವಾಮಿಗೆ ವಿಶೇಷವಾದ ಆಲಂಕಾರವನ್ನು ಮಾಡಲಾಗಿತ್ತು. ನಂತರ ಕಡೇ ಕಾರ್ತಿಕ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ದೀಪಾರಾಧನೆಯನ್ನು ಸಮಾಜದ ಮುಖಂಡರು ನಡೆಸಿಕೊಟ್ಟರು.

ನಂತರ ಪಾರ್ವತಿ ಗಣೇಶ ಮತ್ತು ಸುಬ್ರಮಣ್ಯ ಸಮೇತರಾಗಿ ಆಸಿನರಾದ ಪರಶಿವನ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿ, ಅದಕ್ಕೆ ಅಲಂಕಾರವನ್ನು ಮಾಡಿ ಪೂಜೆಯನ್ನು ಸಲ್ಲಿಸಿ, ತದ ನಂತರ ದೇವಾಲಯದಿಂದ ಸಂತೇಪೇಟೆ ವೃತ್ತದವರೆಗೂ ಮೆರವಣಿಗೆಯನ್ನು ವೀರಗಾಸೆಯೊಂದಿಗೆ ನಡೆಸಲಾಯಿತು. ನಂತರ ಅಷ್ಟೋತ್ತರ ಬಿಲ್ವಾರ್ಚನೆ ಹಾಗೂ ಮಹಾ ಮಂಗಳಾರತಿ ನಂತರ ಪ್ರಸಾದ ವ್ಯವಸ್ಥೆ ಮಾಡಲಾಗಿತು.

ದೇವಾಲಯಕ್ಕೆ ಅಗಮಿಸಿದ ಭಕ್ತಾಧಿಗಳು ದೇವಾಲಯದ ಹೊರಗಡೆ ಇಟ್ಟಿದ್ದ ದೀಪಗಳನ್ನು ಹಚ್ಚುವುದರ ಮೂಲಕ ಕಾರ್ತಿಕ ಮಹೋತ್ಸವವನ್ನು ನಡೆಸಿಕೊಟ್ಟರು, ಧೇವಾಲಯದಲ್ಲಿ ಸಾಲಿನಲ್ಲಿ ಆಗಮಿಸಿದ ಭಕ್ತಾಧಿಗಳು ನೀಲಕಂಠೇಶ್ವರ ಸ್ವಾಮಿಯ ದರ್ಶನವನ್ನು ಪಡೆದರು.

ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಮಲ್ಲಿಕಾರ್ಜನಯ್ಯ, ಡಾ.ರಂಗನಾಥ್, ನಾಗರಾಜ್ ಸಂಗಂ, ಪರಮೇಶ್, ಕೋಟ್ರೇಶ್, ತಿಪ್ಪೇಸ್ವಾಮಿ, ವೀರಶೈವ ಸಮಾಜದ ಕಾರ್ಯದರ್ಶಿ ಎನ್.ಬಿ.ವಿಶ್ವನಾಥ್, ಖಂಚಾಚಿ ಷಡಾಕ್ಷರಯ್ಯ, ಶಶಿಧರ್ ಬಾಬು, ವಿರೇಶ್, ಚನ್ನಯ್ಯ, ಮುರುಗೇಶ್, ವೀರಭದ್ರಸ್ವಾಮಿ, ಕವಿತಾ ಸುರೇಶ್, ಸೇರಿದಂತೆ ವೀರಶೈವ ಸಮಾಜದ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...