Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶ್ರೀ ನೀಲಕಂಠೇಶ್ವರಸ್ವಾಮಿ ದೇವಾಲಯದಲ್ಲಿ ವಿಜೃಂಭಣೆಯಿಂದ ನಡೆದ ಕಡೇ ಕಾರ್ತಿಕ ಮಹೋತ್ಸವ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 26 : ನಗರದ ಶ್ರೀ ನೀಲಕಂಠೇಶ್ವರಸ್ವಾಮಿಯ ಕಡೇ ಕಾರ್ತಿಕ ಮಹೋತ್ಸವವೂ ನಿನ್ನೆ (ಸೋಮವಾರ) ಸಂಜೆ ಸಕಲ ಬಿರುಧಾವಳಿಗಳಿಂದ ಅಸಂಖ್ಯಾತ ಭಕ್ತಾಧಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ಶ್ರೀ ನೀಲಕಂಠೇಶ್ವರಸ್ವಾಮಿಯ ಕಡೇ ಕಾರ್ತಿಕ ಮಹೋತ್ಸವದ ಅಂಗವಾಗಿ ಸ್ವಾಮಿಗೆ ವಿಶೇಷವಾದ ಆಲಂಕಾರವನ್ನು ಮಾಡಲಾಗಿತ್ತು. ನಂತರ ಕಡೇ ಕಾರ್ತಿಕ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ದೀಪಾರಾಧನೆಯನ್ನು ಸಮಾಜದ ಮುಖಂಡರು ನಡೆಸಿಕೊಟ್ಟರು.

ನಂತರ ಪಾರ್ವತಿ ಗಣೇಶ ಮತ್ತು ಸುಬ್ರಮಣ್ಯ ಸಮೇತರಾಗಿ ಆಸಿನರಾದ ಪರಶಿವನ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿ, ಅದಕ್ಕೆ ಅಲಂಕಾರವನ್ನು ಮಾಡಿ ಪೂಜೆಯನ್ನು ಸಲ್ಲಿಸಿ, ತದ ನಂತರ ದೇವಾಲಯದಿಂದ ಸಂತೇಪೇಟೆ ವೃತ್ತದವರೆಗೂ ಮೆರವಣಿಗೆಯನ್ನು ವೀರಗಾಸೆಯೊಂದಿಗೆ ನಡೆಸಲಾಯಿತು. ನಂತರ ಅಷ್ಟೋತ್ತರ ಬಿಲ್ವಾರ್ಚನೆ ಹಾಗೂ ಮಹಾ ಮಂಗಳಾರತಿ ನಂತರ ಪ್ರಸಾದ ವ್ಯವಸ್ಥೆ ಮಾಡಲಾಗಿತು.

ದೇವಾಲಯಕ್ಕೆ ಅಗಮಿಸಿದ ಭಕ್ತಾಧಿಗಳು ದೇವಾಲಯದ ಹೊರಗಡೆ ಇಟ್ಟಿದ್ದ ದೀಪಗಳನ್ನು ಹಚ್ಚುವುದರ ಮೂಲಕ ಕಾರ್ತಿಕ ಮಹೋತ್ಸವವನ್ನು ನಡೆಸಿಕೊಟ್ಟರು, ಧೇವಾಲಯದಲ್ಲಿ ಸಾಲಿನಲ್ಲಿ ಆಗಮಿಸಿದ ಭಕ್ತಾಧಿಗಳು ನೀಲಕಂಠೇಶ್ವರ ಸ್ವಾಮಿಯ ದರ್ಶನವನ್ನು ಪಡೆದರು.

ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಮಲ್ಲಿಕಾರ್ಜನಯ್ಯ, ಡಾ.ರಂಗನಾಥ್, ನಾಗರಾಜ್ ಸಂಗಂ, ಪರಮೇಶ್, ಕೋಟ್ರೇಶ್, ತಿಪ್ಪೇಸ್ವಾಮಿ, ವೀರಶೈವ ಸಮಾಜದ ಕಾರ್ಯದರ್ಶಿ ಎನ್.ಬಿ.ವಿಶ್ವನಾಥ್, ಖಂಚಾಚಿ ಷಡಾಕ್ಷರಯ್ಯ, ಶಶಿಧರ್ ಬಾಬು, ವಿರೇಶ್, ಚನ್ನಯ್ಯ, ಮುರುಗೇಶ್, ವೀರಭದ್ರಸ್ವಾಮಿ, ಕವಿತಾ ಸುರೇಶ್, ಸೇರಿದಂತೆ ವೀರಶೈವ ಸಮಾಜದ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

ಹೊಸದುರ್ಗ | ಕೃಷಿ‌ ಮಾರುಕಟ್ಟೆಯಲ್ಲಿ ಡಿ. ಗ್ರೂಪ್ ನೌಕರ ಆತ್ಮಹತ್ಯೆ..!

ಸುದ್ದಿಒನ್, ಹೊಸದುರ್ಗ, ಮೇ. 20 : ಕೃಷಿ ಮಾರುಕಟ್ಟೆಯಲ್ಲಿಯೇ ಡಿ ಗ್ರೂಪ್ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇದನ್ನು ಕಂಡು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಸಿಬ್ಬಂದಿ ಶಾಕ್ ಆಗಿದ್ದಾರೆ.

error: Content is protected !!