Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅದ್ದೂರಿಯಾಗಿ ನಡೆದ ಶ್ರೀ ಚೌಡೇಶ್ವರಿ ದೇವಿಯ ಕಡೇ ಕಾರ್ತಿಕ

Facebook
Twitter
Telegram
WhatsApp

ಚಿತ್ರದುರ್ಗ(ಡಿ.24) :  ನಗರದ ದೊಡ್ಡಪೇಟೆಯ ಜೈನ್ ದೇವಾಲಯದ ಹಿಂಭಾಗದ ಜವಳೇರ ಬೀದಿಯಲ್ಲಿ  ಶ್ರೀ ಚೌಡೇಶ್ವರಿ ಅಭಿವೃದ್ದಿ ಸೇವಾ ಸಮಿತಿಯವತಿಯಿಂದ ಶುಕ್ರವಾರ ರಾತ್ರಿ ಶ್ರೀ ಚೌಡೇಶ್ವರಿ ದೇವಿಯ ಕಡೇ ಕಾರ್ತಿಕ ಮಹೋತ್ಸವ ದೀಪರಾಧನೆ ಮತ್ತು ಮಹಾಮಂಗಳಾರತಿ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ ಭಾಗವಹಿಸಿ ಶ್ರೀ ಚೌಡೇಶ್ವರಿ ದೇವಿಗೆ ಪೂಜೆಯನ್ನು ನೇರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿ, ಈ ಭಾಗದ ಜನತೆಗೆ ಕುಡಿಯುವ ನೀರು, ಬೀದಿ ದೀಪ ಮತ್ತು ಉತ್ತಮವಾದ ರಸ್ತೆಯನ್ನು ನಿರ್ಮಾಣ ಮಾಡಿಕೊಡಲಾಗಿದೆ.

ಈಗ ದೇವಾಲಯದ ಅಭಿವೃದ್ದಿಗೆ ಧನ ಸಹಾಯವನ್ನು ಕೇಳುತ್ತಿದ್ದಾರೆ. ಆದರೆ ಈಗ ಡಿಸೆಂಬರ್ ಮಾಹೆ ಸಾಗುತ್ತಿದ್ದು ಈಗ ಶಾಸಕರ ನಿಧಿಯಲ್ಲಿ ನೀಡಲು ಹಣ ಇಲ್ಲ ಈಗಾಗಲೇ 4 ಕೋಟಿ ಹಣವನ್ನು ವಿವಿಧ ದೇವಾಲಯಗಳ ಅಭಿವೃದ್ಧಿಗೆ ನೀಡಿದ್ದೇನೆ. ಆಗ ನೀವು ಬಾರಲಿಲ್ಲ ಈಗ ಬಂದಿದ್ದೀರಾ ನಿಮಗೆ ಸುಳ್ಳು ಹೇಳುವುದಿಲ್ಲ. ಈ ಬಾರಿ ಆಗುವುದಿಲ್ಲ ಮುಂದಿನ ಬಾರಿ ನಾನೇ ಶಾಸಕನಾದರೆ ಹಣವನ್ನು ನೀಡುತ್ತೇನೆ ಎಂದು ಭರವಸೆಯನ್ನು ನೀಡಿದರು.

ಮುಂದಿನ ಬಾರಿ ಚುನಾವಣೆಯಲ್ಲಿ ಚೌಡಮ್ಮ ದೇವಿಯ ಆರ್ಶೀವಾದಕ್ಕಿಂತ ಮತದಾರರ ಆರ್ಶಿವಾದ ಅಗತ್ಯವಾಗಿದೆ. ಅವರು ಆರ್ಶೀವಾದ ಮಾಡಿದರೆ ನಾನು ಆಯ್ಕೆಯಾಗಲು ಸಾಧ್ಯವಿದೆ. ಈಗಗಾಲೇ ನಗರದಲ್ಲಿ ಸಿಮೆಂಟ್ ರಸ್ತೆಯನ್ನು ನಿರ್ಮಾಣ ಮಾಡಲಾಗಿದೆ ಇವುಗಳ ಮಧ್ಯೆದಲ್ಲಿ ಗಿಡಗಳನ್ನು ನೆಡಲು ಸುಮಾರು 28000 ಗಿಡಗಳನ್ನು ಬೆಂಗಳೂರಿನಿಂದ ತರಿಸಲಾಗಿದೆ.

ಮುಂದಿನ ದಿನದಲ್ಲಿ ಚಿತ್ರದುರ್ಗವನ್ನು ಸುಂದರ ನಗರವನ್ನಾಗಿ ಮಾಡಲಾಗುವುದು. ಮುಂದಿನ ಬಾರಿ ನಾನೇ ಶಾಸಕನಾಗಿ ಬಂದರೆ ದೇವಾಲಯದ ಅಭೀವೃದ್ದಿಗೆ 10 ಲಕ್ಷ ರೂಗಳನ್ನು ನೀಡುವುದಾಗಿ ಭರವಸೆಯನ್ನು ತಿಪ್ಪಾರೆಡ್ಡಿ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಚೌಡೇಶ್ವರಿ ಅಭೀವೃದ್ದಿ ಸೇವಾ ಸಮಿತಿಯ ಅದ್ಯಕ್ಷರಾದ ರಾಘವೇಂದ್ರ, ಪದಾಧಿಕಾರಿಗಳಾದ ನಾಗಣ್ಣ, ವಿರೂಪಾಕ್ಷಪ್ಪ, ಬಸವರಾಜು, ಶಂಕರ್, ಗಣೇಶ್ ಯೋಗೀಶ್ ಉಪಸ್ಥಿತರಿದ್ದರು ಕಾರ್ತಿಕ ಮಹೋತ್ಸವದ ಅಂಗವಾಗಿ ನಾಗರೀಕರು ದೀಪಗಳನ್ನು ಹಚ್ಚುವುದರ ಮೂಲಕ ದೇವಿಯ ಕೃಪೆಗೆ ಪಾತ್ರರಾದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ

error: Content is protected !!