Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

---Advertisement---

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು.

ಇಲ್ಲಿ ನಡೆದ ಪ್ರಜಾಧ್ವನಿ-2 ಯಾತ್ರೆಯಲ್ಲಿ ಬೃಹತ್ ಜನಸಮಾವೇಶದಲ್ಲಿ ಮಾತನಾಡಿದರು.

ಕಾಡುಗೊಲ್ಲ ಸಮುದಾಯವನ್ನು ST ಪಟ್ಟಿಗೆ ಸೇರಿಸಬೇಕು ಎನ್ನುವ ಬೇಡಿಕೆಗೆ ನಾವು ಸಂಪೂರ್ಣವಾಗಿ ಸ್ಪಂದಿಸಿದ್ದೇವೆ. ಈ ಬಗ್ಗೆ ಕೇಂದ್ರಕ್ಕೂ ಶಿಫಾರಸ್ಸು ಮಾಡಿದ್ದಾಗಿದೆ. ಆದರೆ ಈ ವರೆಗೂ ಇದಕ್ಕೆ ಏಕೆ ಸ್ಪಂದಿಸುತ್ತಿಲ್ಲ ಎಂದು ಸಿಎಂ ಪ್ರಶ್ನಿಸಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ. ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ಆಗ್ರಹಕ್ಕೆ ಧ್ವನಿಗೂಡಿಸಿ ಸಹಮತ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿಯವರು, ತಮ್ಮ ಭಾಷಣದಲ್ಲೂ ಇದೇ ಮಾತನ್ನು ಪುನರುಚ್ಛರಿಸಿದರು.

ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ ಎಂದು ಭರವಸೆ ನೀಡಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment