ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು.
ಇಲ್ಲಿ ನಡೆದ ಪ್ರಜಾಧ್ವನಿ-2 ಯಾತ್ರೆಯಲ್ಲಿ ಬೃಹತ್ ಜನಸಮಾವೇಶದಲ್ಲಿ ಮಾತನಾಡಿದರು.
ಕಾಡುಗೊಲ್ಲ ಸಮುದಾಯವನ್ನು ST ಪಟ್ಟಿಗೆ ಸೇರಿಸಬೇಕು ಎನ್ನುವ ಬೇಡಿಕೆಗೆ ನಾವು ಸಂಪೂರ್ಣವಾಗಿ ಸ್ಪಂದಿಸಿದ್ದೇವೆ. ಈ ಬಗ್ಗೆ ಕೇಂದ್ರಕ್ಕೂ ಶಿಫಾರಸ್ಸು ಮಾಡಿದ್ದಾಗಿದೆ. ಆದರೆ ಈ ವರೆಗೂ ಇದಕ್ಕೆ ಏಕೆ ಸ್ಪಂದಿಸುತ್ತಿಲ್ಲ ಎಂದು ಸಿಎಂ ಪ್ರಶ್ನಿಸಿದರು.
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ. ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ಆಗ್ರಹಕ್ಕೆ ಧ್ವನಿಗೂಡಿಸಿ ಸಹಮತ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿಯವರು, ತಮ್ಮ ಭಾಷಣದಲ್ಲೂ ಇದೇ ಮಾತನ್ನು ಪುನರುಚ್ಛರಿಸಿದರು.
ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ ಎಂದು ಭರವಸೆ ನೀಡಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












