Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಲುವೆಹಳ್ಳಿ ಪ್ರಕರಣ | ಆರೋಪಿಗಳನ್ನು ಬಂಧಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ : ಡಾ.ಹೆಚ್.ಪ್ರಕಾಶ್ ಬೀರಾವರ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 03 : ಚಳ್ಳಕೆರೆ ತಾಲ್ಲೂಕು ಕಾಲುವೆಹಳ್ಳಿಯಲ್ಲಿ ಇತ್ತೀಚೆಗೆ ಮಾದಿಗ ಸಮುದಾಯದ ಮೇಲೆ ನಡೆದ ದಬ್ಬಾಳಿಕೆಗೆ ಸಂಬಂಧಿಸಿದಂತೆ ನೆಪ ಮಾತ್ರಕ್ಕೆ ಒಬ್ಬನನ್ನು ಬಂಧಿಸಿ ಪ್ರಮುಖ ಆರೋಪಿಗಳಾದ ನಾಲ್ವರನ್ನು ಇನ್ನು ಬಂಧಿಸಿಲ್ಲ, ಇನ್ನೆರಡು ದಿನಗಳಲ್ಲಿ ಪತ್ತೆ ಹಚ್ಚಿ ಬಂಧಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಉಗ್ರ ಹೋರಾಟ ನಡೆಸಬೇಕಾಗುತ್ತದೆಂದು ಭಾರತೀಯ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಡಾ.ಹೆಚ್.ಪ್ರಕಾಶ್ ಬೀರಾವರ ಪೊಲೀಸ್ ಇಲಾಖೆಗೆ ಗಡುವು ನೀಡಿದ್ದಾರೆ.

ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅನೇಕ ವರ್ಷಗಳಿಂದಲೂ ಕಾಲುವೆಹಳ್ಳಿಯಲ್ಲಿ ಅಸ್ಪøಶ್ಯತೆ ತಾಂಡವವಾಡುತ್ತಿದೆ. ಏಳುನೂರು ಮಂದಿ ನಾಯಕ ಜನಾಂಗದವರಿದ್ದು, ಕೇವಲ 25 ಜನ ಮಾದಿಗರಿದ್ದಾರೆ. ಕ್ಷೌರ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾದಿಗರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಪ್ರಕರಣ ದಾಖಲಾಗಿ ಎಂಟು ದಿನಗಳಾಗಿದ್ದರೂ ಪ್ರಮುಖ ಆರೋಪಿಗಳನ್ನು ಇನ್ನು ಬಂಧಿಸಿಲ್ಲ. ನೆಪ ಮಾತ್ರ ಕ್ಷೌರಿಕನೊಬ್ಬನನ್ನು ಪೊಲೀಸರು ಬಂಧಿಸಿ ನಿರ್ಲಕ್ಷೆ ವಹಿಸಿದ್ದಾರೆ. ಚಳ್ಳಕೆರೆ ಡಿ.ವೈ.ಎಸ್ಪಿ. ವೃತ್ತ ನಿರೀಕ್ಷಕ ಇವರುಗಳನ್ನು ಕೂಡಲೆ ಅಮಾನತ್ತುಗೊಳಿಸಬೇಕು. ಇಲ್ಲವಾದಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಮಾದಿಗರನ್ನು ಕರೆಸಿ ಚಿತ್ರದುರ್ಗದಲ್ಲಿ ಬೃಹತ್ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದರು.

 

ಮಾದಿಗರನ್ನು ನಾವು ಸಂಬಳಕ್ಕಿಟ್ಟುಕೊಂಡಿದ್ದೇವೆ. ಅವರುಗಳಿಗೆ ನೀವು ಯಾವುದೇ ಕಾರಣಕ್ಕೂ ಕ್ಷೌರ ಮಾಡಬಾರದೆಂದು ಬೆದರಿಕೆ ಹಾಕುತ್ತಿರುವ ನಾಯಕ ಜನಾಂಗದ ನಾಲ್ವರನ್ನು ಮೊದಲು ಬಂಧಿಸಬೇಕು. ಕೆಲವು ಆರ್.ಎಸ್.ಎಸ್.ನವರು, ರೈತರ ಮುಖಂಡರುಗಳು ಚಿತ್ರದುರ್ಗದಕ್ಕೆ ಬಂದು ಪ್ರಜಾಪ್ರಭುತ್ವ ಸಂವಿಧಾನದ ಬಗ್ಗೆ ಮಾತನಾಡುತ್ತಾರೆ. ಅವರ ಊರುಗಳಲ್ಲಿಯೇ ಅಸ್ಪøಶ್ಯತೆ ಇನ್ನು ಜೀವಂತವಾಗಿದೆ. ಪ್ರಮುಖ ನಾಲ್ವರನ್ನು ಬಂಧಿಸದಂತೆ ರಾಜಕೀಯ ಒತ್ತಡವಿರುಬಹುದೆಂದು ಡಾ.ಹೆಚ್.ಪ್ರಕಾಶ್ ಬೀರಾವರ ಆರೋಪಿಸಿದರು.

 

ದಲಿತ ಮುಖಂಡ ಚಿಕ್ಕಗೊಂಡನಹಳ್ಳಿ ಮಲ್ಲಿಕಾರ್ಜುನ್ ಮಾತನಾಡಿ ಸಮನ್ವಯ ಸಮಿತಿ ರಚಿಸಿ ಕಾಲುವೆಹಳ್ಳಿಯಲ್ಲಿ ಸಹೋದರತ್ವ ಬೆಸೆಯುವ ಕೆಲಸವಾಗಬೇಕು. ಮಾದಿಗರು ಮತ್ತು ನಾಯಕ ಜನಾಂಗದರು ಅಣ್ಣ-ತಮ್ಮಂದಿರಂತೆ ಬದುಕುವುದು ನಮಗೆ ಬೇಕಾಗಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು 77 ವರ್ಷಗಳಾಗಿದ್ದರೂ ಇನ್ನು ಮಾದಿಗರ ಮೇಲಿನ ಅಸ್ಪøಶ್ಯತೆ ನಿಂತಿಲ್ಲ ಎನ್ನುವುದೇ ನಮಗೆ ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

 

ದಲಿತ ಸಂಘಟನೆ ಒಕ್ಕೂಟದ ಉಪಾಧ್ಯಕ್ಷ ಕೆ.ರಾಜಣ್ಣ ಮಾತನಾಡುತ್ತ ಸಹೋದರ ಸಮಾಜದಿಂದಲೇ ನಮ್ಮ ಮೇಲೆ ಅಸ್ಪøಶ್ಯತೆ ನಡೆಯುವುದಾದರೆ ಇನ್ನು ಸವರ್ಣಿಯರು ಮಾದಿಗರನ್ನು ಅಸ್ಪøಶ್ಯರನ್ನಾಗಿ ಕಾಣದಿರುತ್ತಾರೆಯೇ ಎಂದು ಪ್ರಶ್ನಿಸಿದರು?

ದಲಿತ ಮುಖಂಡರುಗಳಾದ ಎಂ.ಆರ್.ಶಿವರಾಜ್, ಜೆ.ಜೆ.ಹಟ್ಟಿ ಶಿವಣ್ಣ, ಬಂಗಾರಪ್ಪ, ಪ್ರಕಾಶ್ ಜಿ.ಎಂ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment