Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಮಲ್ ಹಾಸನ್ ಕನ್ನಡಿಗರ ಕ್ಷಮೆಯಾಚಿಸಲಿ : ಕೆ. ಅಭಿನಂದನ್ ಒತ್ತಾಯ

---Advertisement---

 

ಸುದ್ದಿಒನ್, ಹಿರಿಯೂರು, ಜೂನ್. 03 : ಕನ್ನಡ ತಮಿಳಿನಿಂದ ಹುಟ್ಟಿಕೊಂಡಿದೆ ಎಂದು ನಟ ಕಮಲ್ ಹಾಸನ್ ಹೇಳಿಕೆಯಿಂದ ಕನ್ನಡಿಗರ ಭಾವನೆಗಳಿಗೆ ಧಕ್ಕೆಯುಂಟು ಮಾಡಿದೆ ಕೂಡಲೇ ಕಮಲ್ ಹಾಸನ್ ಕನ್ನಡಿಗರ ಕ್ಷಮೆಯಾಚನೆ ಮಾಡಬೇಕು ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಕೆ ಅಭಿನಂದನ್ ಒತ್ತಾಯಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ಕನ್ನಡ ಭಾಷೆಗೆ ತನ್ನದೇ ಆದ ಶಾಸ್ತ್ರೀಯ ಸ್ಥಾನಮಾನ, ಇತಿಹಾಸ ಇದೆ. ಇಂತಹ ಭಾಷೆ ಬಗ್ಗೆ ಕಮಲ್ ಹಾಸನ್ ಹೇಳಿಕೆ ನೀಡಿರುವುದು ವಿಪಾರ್ಯಸವಾಗಿದೆ. ಕನ್ನಡ ಭಾಷೆ ಬಗ್ಗೆ ಮಾತಾಡಲು ಕಮಲ್ ಹಾಸನ್ ಭಾಷಾಜ್ಞಾನಿ ಅಲ್ಲ ಅಥವಾ ವಿಜ್ಞಾನಿಯು ಅಲ್ಲ. ಕನ್ನಡ ಭಾಷೆ ಬಗ್ಗೆ ತಪ್ಪು ಹೇಳಿಕೆ ನೀಡಿ, ಕ್ಷಮೆ ಕೇಳುವುದಿಲ್ಲ ಎಂದು ಉದ್ದಟತನ ಮೆರೆದಿದ್ದಾರೆ. ಇಂತವರ ಚಿತ್ರಗಳನ್ನು ರಾಜ್ಯದಲ್ಲಿ ಪ್ರದರ್ಶಿಸಬಾರದು. ಜೊತೆಗೆ ಭಾಷಾ ವಿರೋಧಿಗಳನ್ನು ರಾಜ್ಯದೊಳಗೆ ಸೇರಿಸಬಾರದು. ಚಿತ್ರರಂಗದಲ್ಲಿ ಕಮಲ್ ಹಾಸನ್ ಯಶಸ್ವಿಯಾಗಲು ಕರುನಾಡಿನ ಶ್ರಮವಿದೆ ಎಂಬುದನ್ನು ಅವರು ಮರೆಯಬಾರದು. ಕೂಡಲೇ ಕ್ಷಮೆ ಕೇಳಿ ಕನ್ನಡಾಭಿಮಾನ ಮೆರೆಯಬೇಕು ಎಂದು ಆಗ್ರಹಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...