Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕನ್ನಡದ ಬಗ್ಗೆ ಕಮಲ್ ಹಾಸನ ವಿವಾದ : ಶಿವಣ್ಣ ಫಸ್ಟ್ ರಿಯಾಕ್ಷನ್ ಏನು..?

---Advertisement---

ಬೆಂಗಳೂರು; ತಮಿಳು ನಟ ಕಮಲ್ ಹಾಸನ್ ತಮ್ಮ ಸಿನಿಮಾದ ಪ್ರಚಾರದ ವೇಳೆ ಕನ್ನಡದ ಬಗ್ಗೆ ಮಾತನಾಡಿ ವಿವಾದಕ್ಕೆ ಗುರಿಯಾಗಿದ್ದರು. ಕಮಲ್ ಹಾಸನ್ ಮಾತಿಗೆ ಕರ್ನಾಟಕ ಜನತೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ಕಮಲ್ ಹಾಸನ್ ಕ್ಷಮೆ ಕೇಳಬೇಕು, ಅದರಲ್ಲೂ ಶಿವಣ್ಣನ ಮುಂದೆ ನಿಂತು ಕ್ಷಮೆ ಕೇಳಬೇಕು ಎಂದು ಕನ್ನಡಪರ ಸಂಘಟನೆಗಳು ಆಗ್ರಹ ಮಾಡಿವೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಶಿವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದು, ಕಮಲ್ ಹಾಸನ್ ನನಗೆ ಬಹಳ ಇಷ್ಟ. ನನಗೆ ಅವರು ಫೇವರಿಟ್. ನನ್ನ ತಂದೆ ಮತ್ತು ಕಮಲ್ ಅವರ ಸಂಬಂಧ ಬೇರೆ. ಅದಕ್ಕಾಗಿ ನಾನು ಅವರ ಅಭಿಮಾನಿಯಲ್ಲ. ನಾನು ಕಮಲ್ ಅವರನ್ನ ನನಗೆ ಸ್ಪೂರ್ತಿ ಅಂತ ಭಾವಿಸಿದ್ದೀನಿ. ನಾವೂ ಅವರ ಕಾರ್ಯಕ್ರಮಕ್ಕೆ ಹೋದ್ವಿ ಅಷ್ಟೇ. ಕನ್ನಡದ ಬಗ್ಗೆ ಕಮಲ್ ಹಾಸನ್ ಅವರಿಗೂ ಪ್ರೀತಿ ಇದೆ. ಕಮಲ್ ಹಾಸನ್ ಅವರು ಬೆಂಗಳೂರಿಗೆ ಬಂದಾಗ ಕೇಳಬಹುದಿತ್ತು. ಈಗ ಯಾಕೆ ಅದನ್ನ ದೊಡ್ಡ ವಿಚಾರ ಮಾಡುತ್ತೀರಾ..?

ಬರೀ ಬಾಯಲ್ಲಿ ಮಾತ್ರ ಕನ್ನಡ ಕನ್ನಡ ಅನ್ನಬಾರದು. ಕನ್ನಡಕ್ಕಾಗಿ ನಾನು ಹೋರಾಟ ಮಾಡುತ್ತೀನಿ. ಕನ್ನಡಕ್ಕಾಗಿ ನಾನು ಸಾಯುತ್ತೀನಿ. ಕನ್ನಡ ಅಂತೀರಾ ಸ್ಟಾರ್ ನಟರಿಗೆ ಮಾತ್ರ ಬೆಂಬಲಸೋದು, ಹೊಸಬರನ್ನು ಕೂಡ ಬೆಳೆಸಬೇಕು. ಕಮಲ್ ಹಾಸನ್ ಅವರಿಗೆ ಇದೆಲ್ಲಾ ಗೊತ್ತಾಗುತ್ತೆ. ಅವರೇ ಇದೆಲ್ಲವನ್ನು ಸರಿ ಮಾಡಿಕೊಳ್ಳುತ್ತಾರೆ ಎಂದಿದ್ದಾರೆ. ಶಿವಣ್ಣ ಅವರ ಈ ಮೃದು ಗುಣಕ್ಕೆ ಫ್ಯಾನ್ಸ್ ಮತ್ತೆ ಫಿದಾ ಆಗಿದ್ದಾರೆ. ಶಿವಣ್ಣರನ್ನು ಹಾಡಿ ಕೊಂಡಾಡಿದ್ದಾರೆ. ಆದರೆ ಅತ್ತ ಕಮಲ್ ಹಾಸನ್ ಗೆ ಕ್ಲಾಸ್ ಕೂಡ ತೆಗೆದುಕೊಂಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment