Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕನ್ನಡಕ್ಕೆ ತನ್ನದೇ‌‌ ಆದ ಅಂತರ್ಗತ ಶಕ್ತಿ ಇದೆ: ಸಿಎಂ

Facebook
Twitter
Telegram
WhatsApp

ಬೆಂಗಳೂರು: ಕನ್ನಡಕ್ಕೆ ತನ್ನದೇ‌‌ ಆದ ಅಂತರ್ಗತ ಶಕ್ತಿ ಇದೆ,ಅದನ್ನು ಕಡಿಮೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು 66 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಲವು ರಾಜರು ನಮ್ಮನ್ನು ಆಳಿದರೂ ಕನ್ನಡ ತನ್ನ ಅಸ್ತಿತ್ವ ಕಾಪಾಡಿಕೊಂಡು ಗಟ್ಟಿಯಾಗಿ ನಿಂತಿದೆ. ಹಲವು ದಾಳಿಗಳನ್ನು ಕನ್ನಡ ಎದುರಿಸಿ ನಿಂತಿದೆ. ಕನ್ನಡಕ್ಕೆ ತನ್ನದೇ ಆದ ಅಂತರ್ಗತ ಶಕ್ತಿ ಇದೆ.‌ ಇದನ್ನು ಕಡಿಮೆ ಮಾಡಲು ಯಾವ ಶಕ್ತಿಗೂ ಸಾಧ್ಯವಿಲ್ಲ ಎಂದರು.

ಕೋವಿಡ್ ಹಿನ್ನೆಲೆಯಲ್ಲಿ ಕನ್ನಡದ ರಾಜ್ಯೋತ್ಸವವನ್ನು ಸೀಮಿತವಾಗಿ ಆಚರಣೆ ಮಾಡಬೇಕಾಗಿ ಬಂದಿದೆ ಎಂದ ಅವರು, ಕನ್ನಡ ನಮ್ಮೆಲ್ಲರನ್ನು ಒಗ್ಗೂಡಿಸಿದೆ. ಅದು ಬೇರು ಇದ್ದಂತೆ. ಈ ತಾಯಿ ಬೇರನ್ನು ಸಂರಕ್ಷಣೆ ಮಾಡಿ ಅದರ ಮೂಲಕ ಪ್ರಪಂಚದಲ್ಲಿ ಅತೀ ದೊಡ್ಡ ಮರವನ್ನಾಗಿ ಮಾಡಬೇಕಿದೆ ಎಂದರು.

ಮನಕುಲಕ್ಕೆ ಕನ್ನಡದ ಮಹತ್ವ ಪ್ರಯೋಜನ ಹಾಗೂ ಸ್ವಾಭಿಮಾನ ತಿಳಿಸುವ ಶತಮಾನ 21 ನೇ ಶತಮಾನಾಗಿದೆ ಎಂದು ಹೇಳಿದರು.
ಕನ್ನಡಕ್ಕೆ ದೊಡ್ಡ ಇತಿಹಾಸ ಇದೆ. ಭಾಷೆ ಬದುಕನ್ನು ರೂಪಿಸುವ ಅಸ್ತ್ರವಾಗಿದೆ. ಭಾಷೆ ಗಟ್ಟಿ ಆದಷ್ಟು ನಾಡು ಶಕ್ತಿಶಾಲಿ‌ ಆಗಿರುತ್ತದೆ. ಕನ್ನಡವನ್ನು ಎಲ್ಲಾ ಆಯಾಮಗಳಲ್ಲಿ ವಿಸ್ತರಣೆ ಮಾಡಬೇಕಿದೆ. ಕನ್ನಡವನ್ನು ಗಡಿಗಳಿಗೆ ಸೀಮಿತಗೊಳಿಸಿ ನೋಡಬಾರದು. ಹೈದರಾಬಾದ್ ಕರ್ನಾಟಕ ಕಲ್ಯಾಣ ಕರ್ನಾಟಕ ಎಂದು ಹೆಸರಿಡಲಾಯಿತು, ಮುಂದಿನ ಸಚಿವ ಸಂಪುಟದಲ್ಲಿ ಮುಂಬಯಿ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ಬಳಕೆ ಮಾಡಲು ನಿರ್ಣಯ ಕೈಗೊಳ್ಳಲಾಗುವುದು ಎಂದು‌ ತಿಳಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Summer Migraine: ಬಿಸಿಲಿಗೆ ಹೋದಾಗ ಈ ನಿಯಮಗಳನ್ನು ಪಾಲಿಸಿ : ಮೈಗ್ರೇನ್‌ ನಿಂದ ದೂರವಿರಿ….!

ಸುದ್ದಿಒನ್ : ಈ ಬೇಸಿಗೆಯಲ್ಲಿ ಬಿಸಿಲು ಜೋರಾಗಿದೆ. ತಾಪಮಾನವು 37 ರಿಂದ 40 ಡಿಗ್ರಿ  ಆಸುಪಾಸಿನಲ್ಲಿದೆ. ವಿಪರೀತ ಬಿಸಿಲಿನಿಂದ ಮಕ್ಕಳಿಂದ ವೃದ್ಧರವರೆಗೆ ಬಹುತೇಕ ಎಲ್ಲರೂ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಆದರೆ ಮೈಗ್ರೇನ್ ಪೀಡಿತರು ಸ್ವಲ್ಪ ಹೆಚ್ಚು

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ, ಈ ರಾಶಿಯವರ ಉದ್ಯೋಗದಲ್ಲಿ ತುಂಬಾ ಸಮಸ್ಯೆ ಅದರ ಜೊತೆ ಹಣಕಾಸಿನ ಸಮಸ್ಯೆ ಕಾಡಲಿದೆ, ಬುಧವಾರ ರಾಶಿ ಭವಿಷ್ಯ -ಏಪ್ರಿಲ್-24,2024 ಸೂರ್ಯೋದಯ: 05:57,

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

error: Content is protected !!