Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕನ್ನಡ ರಾಜ್ಯೋತ್ಸವ: ಎಲ್ಲಾ ಸರ್ಕಾರಿ ಅಧಿಕಾರಿಗಳು, ನೌಕರರು ಭಾಗವಹಿಸಲು ಸೂಚನೆ

Facebook
Twitter
Telegram
WhatsApp

ಚಿತ್ರದುರ್ಗ, (ಅಕ್ಟೋಬರ್. 30) : ನವೆಂಬರ್ 01ರಂದು ಕನ್ನಡ ರಾಜ್ಯೋತ್ಸವದ ಎಲ್ಲಾ ಕಾರ್ಯಕ್ರಮಗಳಲ್ಲಿ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಭಾಗವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ತಿಳಿಸಿದ್ದಾರೆ.

ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್ 01ರಂದು ಬೆಳಿಗ್ಗೆ 7 ಗಂಟೆಗೆ ಸರಿಯಾಗಿ ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಶ್ರೀನೀಲಕಂಠೇಶ್ವರ ದೇವಸ್ಥಾನದಿಂದ ಮೆರವಣಿಗೆಯು ಹೊರಟು ಕನ್ನಡ ತಾಯಿ ಭುವನೇಶ್ವರಿ ಭಾವಚಿತ್ರ, ವಿವಿಧ ಕಲಾ ತಂಡಗಳೊಂದಿಗೆ ಗಾಂಧಿ ವೃತ್ತ, ಸ್ಟೇಟ್ ಬ್ಯಾಂಕ್ ವೃತ್ತ, ಅಂಬೇಡ್ಕರ್ ವೃತ್ತ ಹಾಗೂ ಮದಕರಿ ವೃತ್ತ ಮುಖಾಂತರ ಪೊಲೀಸ್ ಕವಾಯತು ಮೈದಾನದಲ್ಲಿ ಸೇರುವುದು. ನಂತರ ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಕಚೇರಿ ಸಂಕೀರ್ಣದಲ್ಲಿರುವ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಮೇಲ್ಕಂಡ ಎಲ್ಲಾ ಕಾರ್ಯಕ್ರಮಗಳಲ್ಲಿ ಗೈರುಹಾಜರಾಗದಂತೆ ಕಡ್ಡಾಯವಾಗಿ ತಪ್ಪದೇ ಭಾಗವಹಿಸಲು ತಿಳಿಸಿದೆ ಹಾಗೂ ಸರ್ಕಾರದ ಕೋವಿಡ್-19ರ  ಮಾರ್ಗಸೂಚಿಯಂತೆ ಮುಂಜಾಗ್ರತಾ ಕ್ರಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೂವಿನ ಹಡಗಲಿ | ಬೂದನೂರಿನಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ವೀ­ರಭದ್ರೇಶ್ವರ ಜಾತ್ರೆ

ಸುದ್ದಿಒನ್, ವಿಜಯನಗರ, ಹೂವಿನ ಹಡಗಲಿ, ಮೇ. 09  : ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಗುರುವಾರ ಸಂಜೆ 5 ಗಂಟೆಗೆ ವೀ­ರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಹಾರಥೋತ್ಸವ ಅನೇಕ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ಜರುಗಿತು.

ನಾಳೆಯಿಂದ ಮೇ.17ರವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ..!

ಕಳೆದ ಮೂರ್ನಾಲ್ಕು ದಿನದಿಂದ ವರುಣರಾಯನ ದರ್ಶನವಾಗುತ್ತಿದೆ. ಆದರೂ ಕೆಲವೊಂದು ಕಡೆ ಬಿಸಿ ಗಾಳಿಯ ಅನುಭವ ಮಾತ್ರ ಕಡಿಮೆಯಾಗಿಲ್ಲ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇದರಿಂದ ವಾಹನ ಸವಾರರು, ಕೆಲಸಕ್ಕೆ

ಚಿತ್ರದುರ್ಗ | ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಎಸ್‌ಎಸ್‌ಎಲ್‌ಸಿ ಫಲಿತಾಂಶ : 100 ಕ್ಕೆ 100 ಫಲಿತಾಂಶ ಪಡೆದ 13 ಶಾಲೆಗಳು

ಸುದ್ದಿಒನ್, ಚಿತ್ರದುರ್ಗ, ಮೇ. 09 :   ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 35 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ ಮಾದರಿ ವಸತಿ ಶಾಲೆಗಳ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ

error: Content is protected !!