Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ : 18 ಕಡೆ ಚೆಕ್ ಪೋಸ್ಟ್ ನಿರ್ಮಾಣ ಮಾಡಿದ್ದೇಕೆ..?

Facebook
Twitter
Telegram
WhatsApp

 

ಬೆಳಗಾವಿ: ಇಂದು 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ. ನಾಡಿನೆಲ್ಲೆಡೆ ಸಂಭ್ರಮದಿಂದ ರಾಜ್ಯೋತ್ಸವ ಆಚರಿಸಿ, ಕನ್ನಡಾಂಭೆಗೆ ಜೈ ಎಂದಿದ್ದಾರೆ. ಬೆಳಗಾವಿ ಜಿಲ್ಲೆ ಮಧುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಬೀದಿ ಬೀದಿಗಳಲ್ಲೂ ಕನ್ನಡದ ಕಂಪು ಸೂಸುವ ಬ್ಯಾನರ್ ಅಳವಡಿಸಲಾಗಿದೆ. ಇದರ ಜೊತೆಗೆ 18 ಕಡೆ ಚೆಕ್‌ಪೋಸ್ಟ್ ನಿರ್ಮಾಣ ಮಾಡಲಾಗಿದೆ.

ಚನ್ನಮ್ಮ ವೃತ್ತದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ತಯಾರಿ ನಡೆದಿದ್ದು, ಐದು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಜನ ಸೇರುವ ನಿರೀಕ್ಷೆ ಇದೆ. ರಾಜ್ಯೋತ್ಸವದ ತಯಾರಿಯನ್ನು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಮಹಾನಗರ ಪಾಲಿಕೆ ಆಯುಕ್ತ ಅಶೋಕ್ ದುಡಗುಂಟಿ ವೀಕ್ಷಿಸಿ ರಾಜ್ಯೋತ್ಸವಕ್ಕೆ ಸಕಲ ರೀತಿ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಆಯುಕ್ತರ ನೇತೃತ್ವದಲ್ಲಿ 2 ಡಿಸಿಪಿ, 12 ಡಿವೈಎಸ್‌ಪಿ, 120ಕ್ಕೂ ಹೆಚ್ಚು ಪಿ​ಐ, 300 ಜನ ಪಿಎಸ್‌ಐ, 2,000 ಪೊಲೀಸ್ ಸಿಬ್ಬಂದಿ, 500 ಹೋಮ್ ಗಾರ್ಡ್ ಅನ್ನು ಭದ್ರತೆ ದೃಷ್ಟಿಯಿಂದ ನಿಯೋಜನೆ ಮಾಡಲಾಗಿದೆ. ಮಾರ್ಗದುದ್ದಕ್ಕೂ 300 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುತ್ತಿದ್ದರೆ, ಅತ್ತ ಎಂಇಎಸ್ ಪುಂಡರಿಂದ ಕರಾಳ ದಿನದ ಆಚರಣೆಯಾಗುತ್ತಿದೆ. ಆದರೆ ಇದಕ್ಕೆ ಜಿಲ್ಲಾಡಳಿತ ಅನುಮತಿ ನೀಡಿಲ್ಲ. ಹೀಗಾಗಿ ಮಹಾರಾಷ್ಟ್ರದ ಸಂಸದರು, ಸಚಿವರು ಗಡಿ ಪ್ರವೇಶ ಮಾಡದಂತೆ ನಿಷೇಧ ಹೇರಲಾಗಿದೆ. ಜದರ ಭಾಗವಾಗಿಯೇ 18 ಕಡೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ. ಈ ಮೂಲಕ ಬೆಳಗಾವಿಗೆ ಪ್ರವೇಶ ಪಡೆಯದಂತೆ ಎಚ್ಚರಿಕೆ ವಹಿಸಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

error: Content is protected !!