ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಇಂದು ಕನ್ನಡ ರಾಜ್ಯೋತ್ಸವದ ಸಂಭ್ರಮ. 69ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಕನ್ನಡಿಗರು ಆಚರಣೆ ಮಾಡುತ್ತಿದ್ದಾರೆ. ನವೆಂಬರ್ ಪೂರ್ತಿ ಕನ್ನಡದ ಹಬ್ಬ ಇರಲಿದೆ. ಕನ್ನಡ ರಾಜ್ಯೋತ್ಸವದಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯ ಅವರು ಕನ್ನಡದ ಬಗ್ಗೆ ಕರೆ ನೀಡಿದ್ದಾರೆ.
ಕಂಠೀರವ ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆದಿದೆ. ಈ ವೇಳೆ ದ್ವಜಾರೋಹಣ ನೆರವೇರಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರು, ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ. ರಾಷ್ಟ್ರ ಧ್ವಜ ಹಾಗೂ ಕನ್ನಡದ ಧ್ವಜವನ್ನು ಈ ವೇಳೆ ಹಾರಿಸಿದ್ದಾರೆ. ಇದೇ ವೇಳೆ ಹಲವು ಶಾಲೆಗಳಿಂದ ಬಂದಿದ್ದ ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಕಾರ್ಯಕ್ರಮಕ್ಕೆ ಮೆರಗು ನೀಡಿದರು. ಕನ್ನಡ ಹಾಡುಗಳಿಗೆ ನೃತ್ಯ ಪ್ರದರ್ಶನ ಮಾಡಿದರು.
ಇದೆ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಹಾಗೂ ಕನ್ನಡಿಗರಿಗೆ ಹೀಯಾಳಿಸುವಂತ ಪ್ರವೃತ್ತಿ ಬೆಳೆಯುತ್ತಿದೆ. ಇದು ನಾಡ ದ್ರೋಹ ಆಗಿದೆ. ಅಂತವಹ ವಿರುದ್ಧ ಸರ್ಕಾರ ಮುಲಾಜಿಲ್ಲದೆ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ. ಕರ್ನಾಟಕ ಎಂದು ನಾಮಕರಣವಾಗಿ 51 ವರ್ಷ ತುಂಬುತ್ತಿದೆ. ಕನ್ನಡವನ್ನು ವ್ಯಾವಹಾರಿಕ ಭಾಷೆ ಮಾಡುವುದರ ಜೊತೆಗೆ ಬೇರೆ ಭಾಷೆಯವರ ಜೊತೆಗೂ ಕನ್ನಡದಲ್ಲಿಯೇ ಮಾತನಾಡುತ್ತೇವೆ ಎಂದು ಶಪಥ ಮಾಡಬೇಕು. ಬೇರೆ ಭಾಷೆಯವರಿಗೂ ಕನ್ನಡ ಕಲಿಸುವ ಪ್ರಯತ್ನವಾಗಬೇಕು ಎಂದಿದ್ದಾರೆ.
ಇದೆ ವೇಳೆ ಇಡೀ ದೇಶದಲ್ಲೇ ಕರ್ನಾಟಕ ಅತ್ಯಧಿಕ ತೆರಿಗೆ ಕಟ್ಟುತ್ತಿರುವ ಎರಡನೇ ರಾಜ್ಯವಾಗಿದೆ. 4 ಲಕ್ಷ ಕೋಟಿ ತೆರಿಗೆ ಕಟ್ಟಿದರೆ ಕೇಂದ್ರದಿಂದ ನಮಗೆ ಬರುವುದು 50-60 ಸಾವಿರ ಕೋಟ ಎಂದು ಕೇಂದ್ರದ ವಿರುದ್ಧ ಗರಂ ಆಗಿದ್ದಾರೆ.


ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್