Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಂತಾರ-1 ಜೂನಿಯರ್ ಆರ್ಟಿಸ್ಟ್ ಸಾವು ; ತನಿಖೆಗೆ ಒತ್ತಾಯ ಬೆನ್ನಲ್ಲೇ ಹೊಂಬಾಳೆಯಿಂದ ಮನವಿ

---Advertisement---

ಕಾಂತಾರ ಸಿನಿಮಾ ಇಡೀ ದೇಶದಾದ್ಯಂತ ಯಶಸ್ವಿ ಪ್ರದರ್ಶನ ಕಂಡಿತ್ತು. ಬಳಿಕ ಅದರ ಪ್ರೀಕ್ವೆಲ್ ಕೂಡ ಶುರು ಮಾಡಿದ್ರು. ಆದರೆ ಅದ್ಯಾಕೋ ಏನೋ ಒಂದರ ಹಿಂದೆ ಒಂದರಂತೆ ಸಮಸ್ಯೆಗಳು ಸಿನಿಮಾ ತಂಡಕ್ಕೆ ಕಾಡ್ತಾನೆ ಇದೆ. ಈಚೆಗಷ್ಟೇ ಸಿನಿಮಾದ ಜೂನಿಯರ್ ಆರ್ಟಿಸ್ಟ್ ಸಾವನ್ನಪ್ಪಿದ್ದಾರೆ. ಕೇರಳ ಮೂಲದ ಕಪಿಲ್ ಸೌಪರ್ಣಿಕಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಆಲ್ ಇಂಡಿಯಾ ಸಿನಿ ವರ್ಕರ್ಸ್ ಅಸೋಸಿಯೇಷನ್ ತನಿಖೆಗೆ ಒತ್ತಾಯ ಹಾಕಿದೆ.

ಇಲ್ಲಿ ಸಹ ಕಲಾವಿದನ ಬಗ್ಗೆ ಸೂಕ್ತ ತನಿಖೆ ನಡೆಯಬೇಕು. ಮೃತರ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದೆ. ಅಷ್ಟೇ ಅಲ್ಲದೆ ಸಿನಿಮಾ ಸೆಟ್ ಗಳಲ್ಲಿ ಕಲಾವಿದರು, ತಂತ್ರಜ್ಞರು, ಕಲಾವಿದರ ಸಾವಿನ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಇಂಡಿಯನ್ 2, ಸರ್ದಾರ್ 2 ಈಗ ಕಾಂತಾರ 1 ಸೆಟ್ ನಲ್ಲಿ ಆಗಿರುವ ಘಟನೆಗಳ ಬಗ್ಗೆ ಆತಂಕ ವ್ಯಕ್ತವಾಗಿದೆ. ಇಂತಹ ಘಟನೆಗಳು ನಡೆದಾಗ ನಿರ್ಮಾಣ ಸಂಸ್ಥೆಗಳು ಮುಚ್ಚಿ ಹಾಕುವ ಪ್ರಯತ್ನ ಮಾಡ್ತಾರೆ. ಹೀಗಾಗಿ ಸೂಕ್ತ ತನಿಖೆಯಾಗಬೇಕು ಎಂದು ಮನವಿ ಮಾಡಿದ್ದಾರೆ.

ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಹೊಂಬಾಳೆ ಕೂಡ ಮನವಿ ಮಾಡಿದೆ. ಎಂ.ಎಫ್. ಕಪಿಲ್ ಅವರ ನಿಧನಕ್ಕೆ ನಮ್ಮ ಆಗಾದವಾದ ಸಂತಾಪಗಳು. ಅವರ ಕುಟುಂಬಕ್ಕೆ ಮತ್ತು ಆತ್ಮೀಯರಿಗೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ. ಈ ಕಷ್ಟದ ಸಮಯದಲ್ಲಿ ನಮ್ಮೆಲ್ಲರ ಸಹಾನುಭೂತಿ ಅವರೊಂದಿಗಿದೆ.

ಈ ಹಿನ್ನೆಲೆಯಲ್ಲಿ, ಈ ಘಟನೆ ಕಾಂತಾರ ಚಿತ್ರೀಕರಣದ ಸ್ಥಳದಲ್ಲಿ ಸಂಭವಿಸಿಲ್ಲ ಎಂದು ನಾವು ಸ್ಪಷ್ಟಪಡಿಸಲು ಬಯಸುತ್ತೇವೆ. ಆ ದಿನ ಯಾವುದೇ ಚಿತ್ರೀಕರಣ ನಿಗದಿಯಾಗಿರಲಿಲ್ಲ, ಮತ್ತು ಈ ಘಟನೆ ಅವರ ವೈಯಕ್ತಿಕ ಕಾರ್ಯಕ್ರಮದಲ್ಲಿ, ಚಲನಚಿತ್ರ ಸಂಬಂಧಿತ ಚಟುವಟಿಕೆಗಳ ವ್ಯಾಪ್ತಿಯ ಹೊರಗೆ ಸಂಭವಿಸಿದೆ. ದಯವಿಟ್ಟು ಈ ಘಟನೆಯನ್ನು ಕಾಂತಾರ ಚಿತ್ರ ಅಥವಾ ಅದರ ಸಿಬ್ಬಂದಿಯೊಂದಿಗೆ ಯಾವುದೇ ಸಂಬಂಧವನ್ನು ಕಲ್ಪಿಸಬಾರದು ಎಂದು ನಾವು ವಿನಂತಿಸುತ್ತೇವೆ ಎಂದು ಪತ್ರದ ಮೂಲಕ ಕೇಳಿಕೊಂಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment