ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ : ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿಗೆ ಚುನಾವಣೆಗಾಗಿ ವಾಹನ ವ್ಯವಸ್ಥೆ

 

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಮೇ.04) : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಇದೇ ಮೇ.10 ರಂದು ಮತದಾನ ನಡೆಯಲಿದ್ದು, ಈ ಸಂಬಂಧ ಮೇ 9ರಂದು ಮಸ್ಟರಿಂಗ್ ಹಾಗೂ ಮೇ 10ರಂದು ಡಿ-ಮಸ್ಟರಿಂಗ್ ದಿನಗಳಂದು ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿಗಳು ತಾಲ್ಲೂಕು ಕೇಂದ್ರದಿಂದ ಇತರೆ ತಾಲ್ಲೂಕು ಕೇಂದ್ರಗಳಿಗೆ ಹಾಗೂ ಮತಗಟ್ಟೆಗಳಿಗೆ ತೆರಳಲು ವಾಹನದ ವ್ಯವಸ್ಥೆ ಕಲ್ಪಿಸಲಾಗಿದೆ.

ಚುನಾವಣೆ ಕಾರ್ಯಗಳಿಗೆ ಒಟ್ಟು 310 ವಾಹನ ನಿಯೋಜಿಸಲಾಗಿದೆ. ಪ್ರತಿ ವಾಹನಗಳು ತೆರಳುವ ಮಾರ್ಗದ ಬಗ್ಗೆ ನಾಮಫಲಕಗಳನ್ನು ಹಾಕತಕ್ಕದ್ದು. ಮಸ್ಟರಿಂಗ್ ಕಾರ್ಯ ನಡೆಯುವ ಮೊಳಕಾಲ್ಮೂರು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಚಳ್ಳಕೆರೆ ಹೆಚ್.ಪಿ.ಪಿ.ಸಿ ಪ್ರಥಮ ದರ್ಜೆ ಕಾಲೇಜು, ಚಿತ್ರದುರ್ಗ ನಗರದ ಬಿ.ಡಿ. ರಸ್ತೆಯಲ್ಲಿನ ಸರ್ಕಾರಿ ಕಲಾ ಕಾಲೇಜು, ಹಿರಿಯೂರು ನಗರದ ಮುಖ್ಯರಸ್ತೆಯ ಬಸ್ ಸ್ಟ್ಯಾಂಡ್ ಬಳಿಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಹೊಸದುರ್ಗ ನಗರದ ಶ್ರೀಮತಿ ತಾಯಮ್ಮ ಎಡೆತೊರೆ ಸದ್ದಿವಾಲ್ ಲಿಂಗಯ್ಯ ಪದವಿ ಪೂರ್ವ ಕಾಲೇಜು, ಹೊಳಲ್ಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮುಂಜಾನೆ 6 ಗಂಟೆಗೆ ವಾಹನಗಳು ಸಿದ್ದವಿರಲಿವೆ.

ವಾಹನಗಳ  ಕಾರ್ಯಾಚರಣೆ ಕರ್ತವ್ಯಕ್ಕೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಹಿರಿಯ ಮೋಟಾರು ನಿರೀಕ್ಷಕರುಗಳಾದ ಜಿ.ಎಂ.ಶಂಭುಶೇಖರ್ (ಮೊಬೈಲ್ ಸಂಖ್ಯೆ 7204986700) ಹಾಗೂ ಟಿ.ಎಸ್.ಮಂಜುನಾಥ ಪ್ರಸಾದ್ (ಮೊಬೈಲ್ ಸಂಖ್ಯೆ 9911165819) ಅವರನ್ನು ನೇಮಿಸಲಾಗಿದೆ.

ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಅಧಿಕಾರಿ ಹಾಗೂ ಸಿಬ್ಬಂದಿಯೊಂದಿಗೆ ಮತ್ತು ಕೆ.ಎಸ್.ಆರ್.ಟಿ.ಸಿ ವಿಭಾಗೀಯ ಕಚೇರಿ ವಿಭಾಗೀಯ ಸಂಚಲನಾಧಿಕಾರಿ ಜಿ.ಬಿ.ಮಂಜುನಾಥ (ಮೊಬೈಲ್ ಸಂಖ್ಯೆ 9606908962) ಇವರೊಂದಿಗೆ ನಿರಂತರ ಸಂಪರ್ಕ ಹಾಗೂ ಸಮನ್ವಯ ಸಾಧಿಸಿ ಚುನಾವಣೆಯ ಕೆಲಸ ಕಟ್ಟುನಿಟ್ಟಾಗಿ ನಿರ್ವಹಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ತಿಳಿಸಿದ್ದಾರೆ.

suddionenews

Recent Posts

ಪರಮೇಶ್ವರ್ ಅಥವಾ ಮುನಿಯಪ್ಪನನ್ನು ಸಿಎಂ ಮಾಡಿ : ಗೋವಿಂದ ಕಾರಜೋಳ ಕಾಂಗ್ರೆಸ್ ಗೆ ಸಲಹೆ..!

ಬೆಳಗಾವಿ; ಕಾಂಗ್ರೆಸ್ ಸರ್ಕಾರದಲ್ಲಿ ಸದ್ಯ ಸಿಎಂ ಬದಲಾವಣೆ ಚರ್ಚೆ ಹಾಗೂ ಕೆಪಿಸಿಸಿ ಅಧ್ಯಕ್ಷರ ವಿಚಾರವಾಗಿ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್ ನಲ್ಲಿ…

2 hours ago

ಅಪ್ಪು 11 ಕ್ರಿಕೆಟ್ ಕಪ್ – 2025 : ವಿಜೇತರಾಗಿ ರಾಹುಲ್ ತಂಡ

ಸುದ್ದಿಒನ್, ಚಿತ್ರದುರ್ಗ, ಫೆ.23: ಚಿತ್ರದುರ್ಗ ಅಪ್ಪು ಗೆಳೆಯರ ಬಳಗ ವತಿಯಿಂದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವಕ ಸ್ವಾಮೀಜಿರವರ ನೇತೃತ್ವದಲ್ಲಿ, ಹಳೇ…

2 hours ago

ಮಾರ್ಚ್ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ : ಹೇಗಿದೆ ಇಲಾಖೆಯಿಂದ ತಯಾರಿ.. ಖಡಕ್ ರೂಲ್ಸ್ ಜಾರಿ..!

    ಬೆಂಗಳೂರು; ಇನ್ನೊಂದು ವಾರವಷ್ಟೇ ಶೈಕ್ಷಣಿಕ ವರ್ಷದ ಪರೀಕ್ಷೆಗಳು ಆರಂಭವಾಗುತ್ತವೆ. ಮಾರ್ಚ್ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿವೆ.…

5 hours ago

ಭಾರತ – ಪಾಕ್ ಪಂದ್ಯಕ್ಕೆ ಕ್ಷಣಗಣನೆ : ಗೆದ್ದು ಬಾ ಇಂಡಿಯಾ : ಗೆಲುವಿಗಾಗಿ ವಿಶೇಷ ಪೂಜೆ…!

ಇಂದು ಭಾರತ ವರ್ಸಸ್ ಪಾಕ್ ಪಂದ್ಯ ನಡೆಯಲಿದೆ. ಸಾಂಪ್ರಾದಾಯಿಕ ವೈರಿಗಳನ್ನು ಕಟ್ಟಿ ಹಾಕಲು ಭಾರತ ತಂಡ ಸಜ್ಜಾಗಿದೆ. ಈ ಪಂದ್ಯವನ್ನ…

5 hours ago

IND vs PAK: ಕೆಲಹೊತ್ತಿನಲ್ಲಿ ಭಾರತ-ಪಾಕ್ ಪಂದ್ಯ : ದುಬೈನಲ್ಲಿ ಹವಾಮಾನ ಹೇಗಿದೆ ? ಪಿಚ್ ವರದಿಯ ಸಂಪೂರ್ಣ ಮಾಹಿತಿ ಇಲ್ಲಿದೆ…!

ಸುದ್ದಿಒನ್ : ಪ್ರಪಂಚದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ಇಂದು ಮಧ್ಯಾನ್ಹ 2.30 ಕ್ಕೆ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಭಾರತ vs ಪಾಕಿಸ್ತಾನ…

8 hours ago

ಒಂದು ಕಪ್ ಬ್ಲಾಕ್ ಕಾಫಿಯಿಂದ ಹಲವು ಆರೋಗ್ಯ ಪ್ರಯೋಜನಗಳು..!

  ಸುದ್ದಿಒನ್ ಬ್ಲಾಕ್ ಕಾಫಿ ಹೃದಯದ ಆರೋಗ್ಯವನ್ನು ರಕ್ಷಿಸುವುದಲ್ಲದೆ, ಟೈಪ್ -2 ಮಧುಮೇಹದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.…

8 hours ago