Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕ ಬಂದ್ ; ಸಾರಿಗೆ ಸಂಘಟನೆಗಳಿಗೆ ಪೊಲೀಸ್ ಇಲಾಖೆ ನೋಟೀಸ್

---Advertisement---

ಬೆಂಗಳೂರು; ಬೆಳಗಾವಿ ಗಡಿಯಲ್ಲಿ ಎಂಇಎಸ್ ಪುಂಡರ ಪದೇ ಪದೇ ಪುಂಡಾಟ ಮೆರೆಯುತ್ತಿರುವ ಹಿನ್ನೆಲೆ ಮರಾಠಿಗರ ವಿರುದ್ಧ ಕನ್ನಡಿಗರು ಆಕ್ರೋಶ ಹೊರ ಹಾಕಿದ್ದಾರೆ. ಹೀಗಾಗಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ಕೊಟ್ಟಿವೆ. ನಾಳೆ ಬಂದ್ ನಡೆಯಲಿದ್ದು, ಹಲವು ಸಂಘ ಸಂಸ್ಥೆಗಳು ಬಂದ್ ಗೆ ಬೆಂಬಲ ನೀಡಿವೆ. ಖಾಸಗಿ ಸಾರಿಗೆ ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿವೆ. ಹೀಗಾಗಿ ಪೊಲೀಸ್ ಇಲಾಖೆ ಸಾರಿಗೆ ಇಲಾಖೆಗೆ ನೋಟೀಸ್ ನೀಡಿದೆ.

ನಾಳೆ ಕನ್ನಡಪರ ಸಂಘಟನೆಗಳು ಮತ್ತು ರಾಜ್ಯದ ವಿವಿಧ ಸಂಘಟನೆಗಳ ವತಿಯಿಂದ ಮರಾಠಿಗರ ಪುಂಡಾಟಿಕೆ, ಎಂಇಎಸ್ ನಿಷೇಧ, ಕಳಸಾ ಬಂಡೂರಿ ಮಹಾದಾಯಿ ಯೋಜನೆ ಆರಂಭ,‌ಕಲ್ಯಣ ಕರ್ನಾಟಕ ಅಭಿವೃದ್ಧಿ, ಕಂಡಕ್ಟರ್ ಮೇಲೆ ಮರಾಠಿಗರ ದಾಳಿ ಸಮಗ್ರವತನಿಖೆಗೆ ಒತ್ತಾಯಿಸಿ ಕರ್ನಾಟಕ ಬಂದ್ ಗೆ ಕರೆ ಕೊಡಲಾಗಿದೆ. ಈ ಹಿನ್ನಲೆಯಲ್ಲಿ ಪ್ರತಿಭಟನೆ, ಮೆರವಣಿಗೆ, ಮುಷ್ಕರವನ್ನು ಹಮ್ಮಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.

ಅದರ ಭಾಗವಾಗಿ ಹೆಚ್ಚಿನ ಸಂಖ್ಯೆಯಲ್ಲಿ ನೀವೂ ಕಾರ್ಯಕರ್ತರನ್ನು ಸೇರಿಸಿಕೊಂಡು ಟೌನ್ ಹಾಲ್ ಮುಂಭಾಗದಿಂದ ಫ್ರೀಡಂ ಪಾರ್ಕ್ ಗೆ ಮೆರವಣಿಗೆ ಹಮ್ಮಿಕೊಂಡಿರುವುದು ತಿಳಿದು ಬಂದಿದೆ. ಫ್ರೀಡಂ ಪಾರ್ಕ್ ಹೊರತು ಪಡಿಸಿ, ನಗರದ ಉಳಿದ ಕಡೆಗಳಲ್ಲಿ ಸಾರ್ವಜನಿಕ ಸಂಚಾರ ಹಾಗೂ ನೆಮ್ಮದಿಗೆ ಭಂಗವಾಗುವಂತೆ ಪ್ರತಿಭಟನೆ, ಮುಷ್ಕರ, ಮೆರವಣಿಗೆ ಮಾಡುವಂತಿಲ್ಲ. ಈ ಕುರಿತು ಹೈಕೋರ್ಟ್ ಕುಇಡ ಆದೇಶ ನೀಡಿದೆ‌. ಒಂದು ವೇಳೆ ನ್ಯಾಯಾಲಯದ ಆದೇಶವನ್ನು ಉಲ್ಲಂಗಹಿಸಿದರೆ ತಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಸಂಘ ಸಂಸ್ಥೆಗಳಿಗೆ ನೋಟೀಸ್ ಜಾರಿ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment