Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉಪ ರಾಷ್ಟ್ರಪತಿ ರೇಸ್ ನಲ್ಲಿ ಕರ್ನಾಟಕ ರಾಜ್ಯದ ರಾಜ್ಯಪಾಲರು..!

---Advertisement---

ನವದೆಹಲಿ: ದೇಶದಲ್ಲಿ ಉಪ ರಾಷ್ಟ್ರಪತಿ ಹುದ್ದೆ ಖಾಲಿಯಾಗಿದೆ. ಇದೀಗ ಆ ಉಪ ರಾಷ್ಟ್ರಪತಿ ಹುದ್ದೆಗೆ ಸೆಪ್ಟೆಂಬರ್ ನಲ್ಲಿ ಚುನಾವಣೆ ನಡೆಯಲಿದೆ. ಮುಂದಿನ ಉಪ ರಾಷ್ಟ್ರಪತಿಗಾಗಿ ಹಲವರು ರೇಸ್ ನಲ್ಲಿದ್ದಾರೆ. ಅದರಲ್ಲೂ ನಮ್ಮ ಕರ್ನಾಟಕದ ರಾಜ್ಯಪಾಲರ ಹೆಸರು ಕೂಡ ಕೇಳಿ ಬಂದಿದೆ. ಈ ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್ಡಿಎ ಹಾಗೂ ಇಂಡಿಯಾ ಮೈತ್ರಿಕೂಟಗಳು ಸ್ಪರ್ಧೆ ನಡೆಸಲಿವೆ. ಈ ಸ್ಪರ್ಧೆಯಲ್ಲಿ ಎನ್ಡಿಎ ಅಭ್ಯರ್ಥಿಯೇ ಗೆಲ್ಲುವ ಎಲ್ಲಾ ಸಾಧ್ಯತೆಗಳು ಇದೆ.

ಅನೇಕ ರಾಜ್ಯದ ರಾಜ್ಯಪಾಲರು ಉಪ ರಾಷ್ಟ್ರಪತಿ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ. ಹಲವರು ಈಗಾಗಲೇ ಪ್ರಧಾನಿ ಮೋದಿ, ಅಮಿತ್ ಶಾ ಅವರನ್ನು ಭೇಟಿಯಾಗಿ ಮನವಿಯನ್ನು ಮಾಡಿದ್ದಾರೆ. ಬಿಜೆಪಿ ಕೂಡ ಈಗಾಗಲೇ ಉಪ ರಾಷ್ಟ್ರಪತಿ ಯಾರಾಗಬಹುದು ಎಂಬುದನ್ನ ಸ್ಪಷ್ಟಪಡಿಸಿದೆ. ಅಂದ್ರೆ ಬಿಜೆಪಿಯ ತತ್ವ, ಸಿದ್ಧಾಂತಗಳಿಗೆ ಬದ್ಧರಾಗಿರುವವರನ್ನೇ ಉಪ ರಾಷ್ಟ್ರಪತಿಯನ್ನಾಗಿಸುತ್ತೇವೆ ಎಂಬುದನ್ನ ಸ್ಪಷ್ಟಪಡಿಸಿದ್ದಾರೆ.

ಈ ಹಿನ್ನೆಲೆ ಬಿಜೆಪಿಯಲ್ಲಿಯೇ ಚರ್ಚಿತವಾಗುತ್ತಿರುವ ಹೆಸರು ಅಂದ್ರೆ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ, ಬಿಹಾರ ಗವರ್ನರ್ ಆರೀಫ್ ಮೊಹಮ್ಮದ್ ಖಾನ್, ಗುಹರಾತ್ ಗವರ್ನರ್ ಆಚಾರ್ಯ ದೇವವ್ರತ್, ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಕ್ಕಿಂ ಗವರ್ನರ್ ಓಂ ಮಾಥೂರ್, ಜಮ್ಮು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಆರ್ ಎಸ್ಎಸ್ ನ ಶೇಷಾದ್ರಿ ಚಾರಿ ಹೆಸರು ಕೂಡ ಚಾಲ್ತಿಯಲ್ಲಿದೆ. ಅಷ್ಟೇ ಅಲ್ಲ ಜೆಡಿಯು ಪಕ್ಷದವರ ಹೆಸರು ಕೂಡ ಉಪ ರಾಷ್ಟ್ರಪತಿ ಸ್ಥಾನಕ್ಕೆ ಓಡಾಡ್ತಾ ಇದೆ. ರಾಜ್ಯಸಭೆಯ ಹಾಲಿ ಉಪಸಭಾಪತಿ ಹರಿವಂಶ ರಾಯ್ ಅವರ ಹೆಸರು ಕೂಡ ಕೇಳಿ ಬರುತ್ತಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment