Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

---Advertisement---

 

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು ಸಲಹೆಗಾರ ಹಾಗೂ ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ ಸೇರಿದಂತೆ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕದಲ್ಲಿಯೇ ಹುದ್ದೆಗಳು ಖಾಲಿ ಇವೆ. 47 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಯಾವುದೇ ರೀತಿಯ ಶುಲ್ಕ ಇರುವುದಿಲ್ಲ. ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ದಾಖಲಾತಿ ಪರಿಶೀಲನೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಪಡೆದಿರಬೇಕು.

BCA, BE, BTech, MCA, MSW, MA, MBA, M.COM ಪದವಿಯನ್ನು ಮಾನ್ಯತೆ ಪಡೆದ ಸಂಸ್ಥೆಯ ಮೂಲಕ ಪಡೆದಿರಬೇಕಾಗುತ್ತದೆ. ಇನ್ನು ಈಗಾಗಲೇ ಇದಕ್ಕೆ ಸಂಬಂಧಿಸಿದ ವೃತ್ತಿಯ ಅನುಭವ ಪಡೆದವರಿಗೆ ಮೊದಲ ಆದ್ಯತೆ ಇರಲಿದೆ. ಈ ಹುದ್ದೆಗೆ ಅರ್ಜಿಬಸಲ್ಲಿಸುವ ಅಭ್ಯರ್ಥಿಗಳಿಗೆ 50 ವರ್ಷ ವಯಸ್ಸು ಮೀರಿರಬಾರದು. ನಿಮ್ಮ ಡಾಕ್ಯುಮೆಂಟ್ಸ್ ನಲ್ಲಿ ವಯಸ್ಸನ್ನು ನೋಡಿಕೊಂಡು ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ. ಇನ್ನು ವೇತನ ಶ್ರೇಣಿಯೂ ಹುದ್ದೆಗಳಿಗೆ ಅನುಗುಣವಾಗಿ ಇರಲಿದೆ. ಅಂದ್ರೆ 15 ಸಾವಿರದಿಂದ 75 ಸಾವಿರದ ತನಕ ಇರಲಿದೆ. ಅರ್ಜಿ ಸಲ್ಲಿಸಲು ಈಗಾಗಲೇ ದಿನಾಂಕ ಶುರುವಾಗಿದ್ದು, ಅಕ್ಟೋಬರ್ 23 ಕೊನೆಯ ದಿನಾಂಕವಾಗಿದೆ. https://english.swachhamevajayate.org/ ಈ ವೆಬ್ಸೈಟ್ ನಲ್ಲಿ ನಿಮಗೆ ಬೇಕಾದ ಮಾಹಿತಿ ಲಭ್ಯವಿದೆ.ಅರ್ಹ ಅಭ್ಯರ್ಥಿಗಳು ಇಂದೇ ಅರ್ಜಿ ಸಲ್ಲಿಸಿ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...