Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗಕ್ಕೆ ಆಗಮಿಸಿದ ಕರ್ನಾಟಕ ನಿವೃತ್ತ ನೌಕರರ ವೇದಿಕೆಯ ಜಾಥ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 05 :  ಏಳನೆ ವೇತನ ಆಯೋಗದ ಪರಿಷ್ಕøತ ವೇತನ ಶ್ರೇಣಿಯಲ್ಲಿ ನಿವೃತ್ತಿ ಸೌಲಭ್ಯವನ್ನು ನೀಡದಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಬೆಳಗಾಂನಿಂದ ಹೊರಟು ಬೆಂಗಳೂರು ತಲುಪಲಿರುವ ಕರ್ನಾಟಕ ನಿವೃತ್ತ ನೌಕರರ ವೇದಿಕೆಯ ಜಾಥ ಗುರುವಾರ ಚಿತ್ರದುರ್ಗಕ್ಕೆ ಆಗಮಿಸಿತು.

ಒನಕೆ ಓವವ್ವ ವೃತ್ತಕ್ಕೆ ಆಗಮಿಸಿದ ಜಾಥದಲ್ಲಿ ದಿನಾಂಕ : 1-7-2022 ರಿಂದ 31-7-2024 ರ ಅವಧಿಯಲ್ಲಿ ನಿವೃತ್ತರಾದ ಅಧಿಕಾರಿ/ನೌಕರರಿಗೆ ಪರಿಷ್ಕøತ ವೇತನ ಶ್ರೇಣಿಯನ್ವಯ ಸೌಲಭ್ಯ ನೀಡದೆ ನಿವೃತ್ತರನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸುತ್ತಿರುವುದನ್ನು ವಿರೋಧಿಸಿ ಧಿಕ್ಕಾರಗಳನ್ನು ಕೂಗಿದರು.

ವೇತನ ಶ್ರೇಣಿಗಳ ಪರಿಷ್ಕರಣೆಯ ಕಾರಣದಿಂದಾಗಿ ವೇತನ ಮತ್ತು ಭತ್ಯೆಗಳ ಹೆಚ್ಚಳವನ್ನು 1-8-2024 ರಿಂದ ನಗದಾಗಿ ಪಾವತಿ ಮಾಡತಕ್ಕದ್ದು, ಸೇವೆಯಿಂದ ನಿವೃತ್ತರಾದ ಅಥವಾ ಸೇವೆಯಲ್ಲಿರುವಾಗಲೆ ಮರಣ ಹೊಂದಿದ/ಸೇವೆಯಲ್ಲಿರುವುದು ಸಮಾಪ್ತಿಗೊಂಡ ಸರ್ಕಾರಿ ಪ್ರಕರಣಗಳಲ್ಲಿ ಪರಿಷ್ಕøತ ವೇತನ ಶ್ರೇಣಿಯಲ್ಲಿ ನಿಗಧಿಪಡಿಸಲಾದ ಕಾಲ್ಪನಿಕ ವೇತನ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಲೆಕ್ಕಚಾರವಾಗಿ ಪರಿಗಣಿಸಬೇಕೆಂದು ಹೊರಟಿರುವ ಜಾಥ ಬೆಂಗಳೂರು ತಲುಪಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಲಿದೆ.

ಕರ್ನಾಟಕ ನಿವೃತ್ತ ನೌಕರರ ವೇದಿಕೆಯ ರಾಜ್ಯ ಸಂಚಾಲಕರಾದ ಹೆಚ್.ಗೋವಿಂದಯ್ಯ, ಜಿಲ್ಲಾ ಪ್ರಧಾನ ಸಂಚಾಲಕರಾದ ಟಿ.ಡಿ.ಜಗನ್ನಾಥ್, ರಮೇಶ್ ಮದರಿ, ಸಂಚಾಲಕರುಗಳಾದ ಹನುಮಂತಪ್ಪ ಬಿ.ಕೆ. ಲಕ್ಷ್ಮಯ್ಯ ಆರ್. ಪಂಚಾಕ್ಷರಯ್ಯ ಜಿ.ಬಿ. ದಯಾನಂದ ಡಿ. ರಾಮಚಂದ್ರಪ್ಪ ಕೆ. ಗುರುಮೂರ್ತಿ ಎಂ. ಸೈಯದ್ ಸಿರಾಜುದ್ದಿನ್, ತಿಪ್ಪೇಸ್ವಾಮಿ, ಜಿಲ್ಲೆಯ ಆರು ತಾಲ್ಲೂಕುಗಳ ಸಂಚಾಲಕರು, ಗೌರವ ಸಂಚಾಲಕರಾದ ಸುಗೇಂದ್ರ ಹೆಚ್. ಈ ಸಂದರ್ಭದಲ್ಲಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment