Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಕಲೆಕ್ಷನ್ ‘ ಕೈ ‘ ಚಳಕ ಜೋರಾಗಿದೆ, ಪಂಚರಾಜ್ಯಗಳ ಪಾಲಿಗೆ ಕರ್ನಾಟಕ ಸಮೃದ್ಧ ಎಟಿಎಮ್ : ಐಟಿ ರೇಡ್ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ

---Advertisement---

 

ಬೆಂಗಳೂರು: ಇಂದು ಐಟಿ ರೇಡ್ ವೇಳೆ ಗುತ್ತಿಗೆದಾರನ ಮನೆಯಲ್ಲಿ 42 ಕೋಟಿ ಹಣ ಸಿಕ್ಕಿದೆ. ಈ ಬಗ್ಗೆ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಪಂಚರಾಜ್ಯ ಚುನಾವಣೆ ಘೋಷಣೆ ಆಗಿದ್ದೇ ತಡ, ರಾಜ್ಯದಲ್ಲಿ ಕುರುಡು ಕಾಂಚಾಣ ಕಂತೆ ಕಂತೆಯಾಗಿ ಬಾಕ್ಸ್ ಗಳಲ್ಲಿ ಕುಣಿಯುತ್ತಿದೆ! ಅದೂ ಮಂಚದ ಕೆಳಗೆ ಎಂದಿದ್ದಾರೆ.

ಐಟಿದಾಳಿ ವೇಳೆ ಗುತ್ತಿಗೆದಾರನ ಮನೆಯಲ್ಲಿ ಪತ್ತೆಯಾದ ಹಣ ಯಾರದ್ದು? ಯಾರ ಹೆಣದ ಮೇಲೆ ಸಂಗ್ರಹಿಸಿದ ಪಾಪದ ಹಣವಿದು? ಈ ಪ್ರಶ್ನೆಗಳಿಗೆ ಉತ್ತರ ಬೇಕಿದೆ. ಆಯ್ದ ಗುತ್ತಿಗೆದಾರರಿಗೆ ಬಿಬಿಎಂಪಿಯಿಂದ 650 ಕೋಟಿ ರೂ. ಬಿಡುಗಡೆಯಾದ ಬೆನ್ನಲ್ಲೇ ಈ 42 ಕೋಟಿ ರೂ. ಐಟಿ ಅಧಿಕಾರಿಗಳಿಗೆ ಸಿಕ್ಕಿಬೀಳುತ್ತದೆ. ಅಲ್ಲಿಗೆ ಕಲೆಕ್ಷನ್ ನಿಜ ಎಂದಾಯಿತು. ಅದು ಎಷ್ಟು ಪರ್ಸಂಟೇಜ್ ? ಅದರ ಹಿಂದೆ ಅಡಗಿ ಕೂತಿರುವ ಆದಿಪುರುಷರು ಯಾರು ?

23 ಬಾಕ್ಸ್ ಗಳಲ್ಲಿ ತುಂಬಿಡಲಾಗಿದ್ದ ಈ ಇಡುಗಂಟು ಪಕ್ಕದ ತೆಲಂಗಾಣಕ್ಕೆ ಹೊರಟು ನಿಂತಿತ್ತು ಎನ್ನುವುದು ಮಾಹಿತಿ. ಅಲ್ಲಿಗೆ ಚುನಾವಣೆಗಾಗಿ ಈ ಹಣವನ್ನು ಸಂಗ್ರಹ ಮಾಡಲಾಗಿತ್ತು ಎನ್ನುವುದು ಸತ್ಯ. ಈ ಕನಕ ಮಹಾಲಕ್ಷ್ಮಿಯ ಕಲೆಕ್ಷನ್ ಗೆ ‘ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ’ಯ ಕೈ ಕರಾಮತ್ತು ಅಂತ ಇನ್ನೊಂದು ಮಾಹಿತಿ. ಅಷ್ಟರಲ್ಲಿ ಐಟಿ ಇಲಾಖೆ ಮುಗಿಬಿದ್ದ ಪರಿಣಾಮ, ಗುಟ್ಟು ರಟ್ಟಾಗಿದೆ. ಅಲ್ಲಿಗೆ @INCKarnataka ಸರಕಾರದಲ್ಲಿ ಪರ್ಸಂಟೇಜ್ ಪಾರಮ್ಯ ಅವ್ಯಾಹತ ಎಂದಾಯಿತು?

ಈಗ ಹೇಳಿ ಸನ್ಮಾನ್ಯ @siddaramaiah ನವರೇ.. 42 ಕೋಟಿ ರೂ. ಬಗ್ಗೆ ಯಾವ ತನಿಖೆ ಮಾಡಿಸುತ್ತೀರಿ? ಸಿಬಿಐ, ಈಡಿ, ಹಾಲಿ ನ್ಯಾಯಾಧೀಶರು, ನಿವೃತ್ತ ನ್ಯಾಯಾಧೀಶರು..? ದಯಮಾಡಿ ಹೇಳಿ. ರೈತರು ಬರ, ವಿದ್ಯುತ್ ಬಿಕ್ಕಟ್ಟಿನಿಂದ ಕಂಗೆಟ್ಟಿದ್ದಾರೆ. ಗುತ್ತಿಗೆದಾರರು ಅಯೋಮಯ ಸ್ಥಿತಿಯಲ್ಲಿದ್ದಾರೆ. ಆದರೂ ಕಲೆಕ್ಷನ್ ‘ ಕೈ ‘ ಚಳಕ ಜೋರಾಗಿದೆ. ಪಂಚರಾಜ್ಯಗಳ ಪಾಲಿಗೆ ಕರ್ನಾಟಕ ಸಮೃದ್ಧ ಎಟಿಎಮ್. ಕಾವೇರಿ ನೀರು  ತಮಿಳುನಾಡಿಗೆ ನಿರಂತರ ಹರಿಯುತ್ತಿದ್ದರೆ, ಕನ್ನಡಿಗರ ತೆರಿಗೆಲಕ್ಷ್ಮೀ ಎಲೆಕ್ಷನ್ ರಾಜ್ಯಗಳ ಪಾಲಾಗುತ್ತಿದ್ದಾಳೆ.

ಆದಿಯಿಂದಲೂ ಇದೇ ಕಥೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೈಕಮಾಂಡ್ ಗೆ ಹಬ್ಬ. ಈಗಲೂ ಅದೇ ಆಗುತ್ತಿದೆ. ಪಂಚರಾಜ್ಯಗಳ ಚುನಾವಣೆಗಾಗಿ ಕರ್ನಾಟಕಕ್ಕೆ ಕನ್ನ ಹೊಡೆಯಲಾಗಿದೆ. ವೋಟು ಕೊಟ್ಟ ತಪ್ಪಿಗೆ ಕಾಂಗ್ರೆಸ್ ಉಂಡು ಹೋಗುತ್ತಿದೆ, ಕೊಂಡು ಹೋಗುತ್ತಿದೆ. ಇದು ಕನ್ನಡಿಗರ ಕರ್ಮ ಎಂದು ಹೇಳಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...