Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ದ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.29 : ಬೆಳೆ ಪರಿಹಾರ ಮತ್ತು ಬೆಳೆ ವಿಮೆ ಪಾವತಿಯಾಗದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ನಗರದಲ್ಲಿ ಸೋಮವಾರ ಭಿಕ್ಷಾಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿ ನಡೆಸಿ ಮನವಿ ಸಲ್ಲಿಸಿತು.

ಕಳೆದ ವರ್ಷ ಮುಂಗಾರು-ಹಿಂಗಾರು ಮಳೆ ಬಾರದ ಕಾರಣ ರೈತರು ಬಿತ್ತಿದ ಬೆಳೆಗಳು ಸಂಪೂರ್ಣವಾಗಿ ಒಣಗಿರುವುದರಿಂದ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಿಸಿದ್ದರೂ ಇದುವರೆವಿಗೂ ರೈತರಿಗೆ ಎಂ.ಡಿ.ಆರ್.ಎಫ್ ಹಾಗೂ ಬೆಳೆ ವಿಮೆ ಹಣ ಖಾತೆಗಳಿಗೆ ಜಮೆ ಆಗಿರುವುದಿಲ್ಲ. ಮಧ್ಯಂತರ ಬೆಳೆ ವಿಮೆ ಕೂಡ ರೈತರ ಕೈಸೇರಿಲ್ಲ ಎಂದು ಪ್ರತಿಭಟನಾ ನಿರತ ರೈತರು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಸಣ್ಣ ರೈತರ ಖಾತೆಗಳಿಗೆ ಪ್ರತಿ ತಿಂಗಳು ಎರಡು ಸಾವಿರ ರೂ.ಗಳನ್ನು ಜಮ ಮಾಡಿ ಅವಮಾನ ಮಾಡುವ ಬದಲು ಹೆಕ್ಟೇರ್‍ಗೆ 25 ಸಾವಿರ ರೂ.ಗಳನ್ನು ನೀಡಬೇಕು. ಇದಲ್ಲದೆ ಕೂಡಲೆ ಬೆಳೆ ವಿಮೆ ಪಾವತಿಸಿ ಸಂಕಷ್ಟದಲ್ಲಿರುವ ರೈತರನ್ನು ಪಾರು ಮಾಡುವಂತೆ ಒತ್ತಾಯಿಸಿದ ಪ್ರತಿಭಟನಾನಿರತ ರೈತರು ದನ-ಕರುಗಳಿಗೆ ಗೋಶಾಲೆಯನ್ನು ತೆರೆದು ಮೇವು ಮತ್ತು ನೀರು ಪೂರೈಸುವಂತೆ ಆಗ್ರಹಿಸಿದರು.

ರೈತರು ಸ್ವಂತ ಖರ್ಚಿನಲ್ಲಿ ಟಿಸಿ ಮತ್ತು ಕಂಬಗಳನ್ನು ಅಳವಡಿಸಿಕೊಳ್ಳುವಂತೆ ಕಳೆದ ಸೆಪ್ಟಂಬರ್‍ನಲ್ಲಿ ಕಾನೂನು ಜಾರಿಗೆ ತಂದಿದ್ದನ್ನು ಸರ್ಕಾರ ಹಿಂದಕ್ಕೆ ಪಡೆದು ಮೊದಲಿನಂತೆ ಅಕ್ರಮ-ಸಕ್ರಮದಡಿ ವಿದ್ಯುತ್ ಸಂಪರ್ಕ ಕಲ್ಪಿಸಿ ಎಲ್ಲಾ ಬ್ಯಾಂಕಿನಲ್ಲಿರುವ ಸಾಲ ಮನ್ನಾ ಮಾಡಿ ರೈತರಿ ನೆರವಿಗೆ ಧಾವಿಸುವಂತೆ ರೈತರು ಆಗ್ರಹಿಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಧನಂಜಯ, ಸಿ.ನಾಗರಾಜ ಮುದ್ದಾಪುರ, ಎಸ್.ಕೆ.ಕುಮಾರಸ್ವಾಮಿ, ಬಿ.ಕೆಂಚಪ್ಪ, ಬಿ.ಪಿ.ತಿಪ್ಪೇಸ್ವಾಮಿ, ಎಂ.ಎಸ್.ಪ್ರಭು, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಸಿದ್ದಪ್ಪ ಜಾನುಕೊಂಡ, ವೈ.ಎನ್.ಅಶೋಕ, ಪಾಪಯ್ಯ, ರಂಗೇಗೌಡ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ವಿಶೇಷ ತನಿಖಾ ತಂಡ ರಚನೆಗೆ ಸಿಎಂ ನಿರ್ಧಾರ

ಬೆಂಗಳೂರು: ಹಾಸನದಲ್ಲಿ ಕಳೆದ ಕೆಲವು ದಿನಗಳಿಂದ ಪೆನ್ ಡ್ರೈವ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಆ ಪೆನ್ ಡ್ರೈವ್ ನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಇರುವುದು ಬೆಳಕಿಗೆ ಬಂದಿದೆ. ಅದು ಒಂದಲ್ಲ ಎರಡಲ್ಲ ಸಾವಿರಾರು

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ. ಇನ್ನು ಅಡುಗೆ ಮನೆಯಲ್ಲಂತು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

error: Content is protected !!