Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ದ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.29 : ಬೆಳೆ ಪರಿಹಾರ ಮತ್ತು ಬೆಳೆ ವಿಮೆ ಪಾವತಿಯಾಗದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ನಗರದಲ್ಲಿ ಸೋಮವಾರ ಭಿಕ್ಷಾಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿ ನಡೆಸಿ ಮನವಿ ಸಲ್ಲಿಸಿತು.

ಕಳೆದ ವರ್ಷ ಮುಂಗಾರು-ಹಿಂಗಾರು ಮಳೆ ಬಾರದ ಕಾರಣ ರೈತರು ಬಿತ್ತಿದ ಬೆಳೆಗಳು ಸಂಪೂರ್ಣವಾಗಿ ಒಣಗಿರುವುದರಿಂದ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಿಸಿದ್ದರೂ ಇದುವರೆವಿಗೂ ರೈತರಿಗೆ ಎಂ.ಡಿ.ಆರ್.ಎಫ್ ಹಾಗೂ ಬೆಳೆ ವಿಮೆ ಹಣ ಖಾತೆಗಳಿಗೆ ಜಮೆ ಆಗಿರುವುದಿಲ್ಲ. ಮಧ್ಯಂತರ ಬೆಳೆ ವಿಮೆ ಕೂಡ ರೈತರ ಕೈಸೇರಿಲ್ಲ ಎಂದು ಪ್ರತಿಭಟನಾ ನಿರತ ರೈತರು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಸಣ್ಣ ರೈತರ ಖಾತೆಗಳಿಗೆ ಪ್ರತಿ ತಿಂಗಳು ಎರಡು ಸಾವಿರ ರೂ.ಗಳನ್ನು ಜಮ ಮಾಡಿ ಅವಮಾನ ಮಾಡುವ ಬದಲು ಹೆಕ್ಟೇರ್‍ಗೆ 25 ಸಾವಿರ ರೂ.ಗಳನ್ನು ನೀಡಬೇಕು. ಇದಲ್ಲದೆ ಕೂಡಲೆ ಬೆಳೆ ವಿಮೆ ಪಾವತಿಸಿ ಸಂಕಷ್ಟದಲ್ಲಿರುವ ರೈತರನ್ನು ಪಾರು ಮಾಡುವಂತೆ ಒತ್ತಾಯಿಸಿದ ಪ್ರತಿಭಟನಾನಿರತ ರೈತರು ದನ-ಕರುಗಳಿಗೆ ಗೋಶಾಲೆಯನ್ನು ತೆರೆದು ಮೇವು ಮತ್ತು ನೀರು ಪೂರೈಸುವಂತೆ ಆಗ್ರಹಿಸಿದರು.

ರೈತರು ಸ್ವಂತ ಖರ್ಚಿನಲ್ಲಿ ಟಿಸಿ ಮತ್ತು ಕಂಬಗಳನ್ನು ಅಳವಡಿಸಿಕೊಳ್ಳುವಂತೆ ಕಳೆದ ಸೆಪ್ಟಂಬರ್‍ನಲ್ಲಿ ಕಾನೂನು ಜಾರಿಗೆ ತಂದಿದ್ದನ್ನು ಸರ್ಕಾರ ಹಿಂದಕ್ಕೆ ಪಡೆದು ಮೊದಲಿನಂತೆ ಅಕ್ರಮ-ಸಕ್ರಮದಡಿ ವಿದ್ಯುತ್ ಸಂಪರ್ಕ ಕಲ್ಪಿಸಿ ಎಲ್ಲಾ ಬ್ಯಾಂಕಿನಲ್ಲಿರುವ ಸಾಲ ಮನ್ನಾ ಮಾಡಿ ರೈತರಿ ನೆರವಿಗೆ ಧಾವಿಸುವಂತೆ ರೈತರು ಆಗ್ರಹಿಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಧನಂಜಯ, ಸಿ.ನಾಗರಾಜ ಮುದ್ದಾಪುರ, ಎಸ್.ಕೆ.ಕುಮಾರಸ್ವಾಮಿ, ಬಿ.ಕೆಂಚಪ್ಪ, ಬಿ.ಪಿ.ತಿಪ್ಪೇಸ್ವಾಮಿ, ಎಂ.ಎಸ್.ಪ್ರಭು, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಸಿದ್ದಪ್ಪ ಜಾನುಕೊಂಡ, ವೈ.ಎನ್.ಅಶೋಕ, ಪಾಪಯ್ಯ, ರಂಗೇಗೌಡ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment