Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೃಷಿ ಅಧಿಕಾರಿಗಳ ಬೇಜವಾಬ್ದಾರಿತನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 29 : ಚಳ್ಳಕೆರೆ ತಾಲ್ಲೂಕು ಕಸಬಾ ಹೋಬಳಿ ಸೋಮಗುದ್ದು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಏಳು ಗ್ರಾಮಗಳಲ್ಲಿ ಬೆಳೆ ಸಮೀಕ್ಷೆ ಜಿ.ಪಿ.ಎಸ್. ಮಾಡುವಾಗ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಚಿಕ್ಕಮಧುರೆ, ಹಿರೇಮಧುರೆ, ಉಪ್ಪಾರಹಟ್ಟಿ, ಚಿಗತನಹಳ್ಳಿ, ಗಂಜಿಗುಂಟೆ, ಲಂಬಾಣಿಹಟ್ಟಿ, ಕನ್ನೇನಹಳ್ಳಿ ಗ್ರಾಮಗಳ ರೈತರು ತೊಗರಿ ಮತ್ತು ಶೇಂಗಾಕ್ಕೆ ಬೆಳೆವಿಮೆ ಮೊತ್ತವನ್ನು ಪಾವತಿಸಿದ್ದರೂ ಸಹ ಮಳೆ ಸುರಿದು ಬೆಳೆ ಸಮೃದ್ದವಾಗಿದೆ ಎಂದು ಅಧಿಕಾರಿಗಳು ಬೆಳೆ ಸಮೀಕ್ಷೆಯಲ್ಲಿ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿರುವುದರಿಂದ ರೈತರ ಖಾತೆಗಳಿಗೆ ಬೆಳೆವಿಮೆ ಜಮಾ ಆಗಿರುವುದಿಲ್ಲ. ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ರೈತರು ಸಮಯಕ್ಕೆ ಸರಿಯಾಗಿ ಮಳೆ ಬಾರದ ಕಾರಣ ಬೆಳೆಹಾನಿಯಿಂದ ಕೈಸುಟ್ಟುಕೊಂಡಿದ್ದಾರೆ. ಚಳ್ಳಕೆರೆ ತಾಲ್ಲೂಕಿನ ಎಲ್ಲಾ ಪಂಚಾಯಿತಿಗಳಿಗೂ ಬೆಳೆವಿಮೆ ಪರಿಹಾರವನ್ನು ಸರ್ಕಾರ ಮತ್ತು ಬೆಳೆವಿಮೆ ಕಂಪನಿಗಳು ನೀಡಿದ್ದು, ಸೋಮಗುದ್ದು ಗ್ರಾಮ ಪಂಚಾಯಿತಿಗೆ ಮಾತ್ರ ಬೆಳೆವಿಮೆ ಸಿಕ್ಕಿಲ್ಲ. ಒಂದು ವಾರದೊಳಗಾಗಿ ದಿನ ನಿಗಧಿಪಡಿಸಿ ಎಲ್ಲಾ ಇಲಾಖೆ ಅಧಿಕಾರಿಗಳನ್ನು ಕರೆಸಿ ನಷ್ಟ ಅನುಭವಿಸಿರುವ ರೈತರ ಖಾತೆಗಳಿಗೆ ಬೆಳೆವಿಮೆ ಜಮಾ ಮಾಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದೆಂದು ಪ್ರತಿಭಟನಾನಿರತ ರೈತರು ಜಿಲ್ಲಾಡಳಿತಕ್ಕೆ ಗಡುವು ನೀಡಿದರು.

ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆ.ಪಿ.ಭೂತಯ್ಯ, ಜಿಲ್ಲಾಧ್ಯಕ್ಷ ಬಸ್ತಿಹಳ್ಳಿ ಜಿ.ಸುರೇಶ್‍ಬಾಬು, ತಾಲ್ಲೂಕು ಅಧ್ಯಕ್ಷ ಧನಂಜಯ, ಜಿಲ್ಲಾ ಉಪಾಧ್ಯಕ್ಷ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಪ್ರಶಾಂತ, ಕೆಂಚಪ್ಪ, ತಿಪ್ಪೇಸ್ವಾಮಿ, ಎಸ್.ನಾಗರಾಜ, ಶಶಿಧರ್, ಬಿ.ಟಿ.ಚಿದಾನಂದ, ಬಿ.ಶಿವಣ್ಣ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!