Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ आध्यात्मिक अन्य

---Advertisement---

ವರ್ಷಿತಾ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ : ಕರ್ನಾಟಕ ರಾಜ್ಯ ಮಾದಿಗ ಯುವ ಸೇನೆ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 22 : ಮಾದಿಗ ಸಮುದಾಯದ ವಿದ್ಯಾರ್ಥಿನಿ ವರ್ಷಿತಾಳ ಮೇಲೆ ಅತ್ಯಾಚಾರವೆಸಗಿ ಸುಟ್ಟು ಹಾಕಿರುವ ದುಷ್ಟಶಕ್ತಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಕರ್ನಾಟಕ ರಾಜ್ಯ ಮಾದಿಗ ಯುವ ಸೇನೆಯಿಂದ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಶುಕ್ರವಾರ ಮನವಿ ಅರ್ಪಿಸಲಾಯಿತು.

ವಿದ್ಯಾರ್ಥಿನಿ ವರ್ಷಿತಾಳ ಹತ್ಯೆಗೆ ಸಂಬಂಧಿಸಿದಂತೆ ಚೇತನ್ ಎಂಬುವನನ್ನು ಬಂಧಿಸಿದ್ದು, ಇದರ ಹಿಂದೆ ಯಾರ್ಯಾರ ಕೈವಾಡವಿದೆ ಎನ್ನುವುದನ್ನು ಸಂಪೂರ್ಣ ತನಿಖೆ ನಡೆಸಿ ಕಾಮುಕರನ್ನು ಬಯಲಿಗೆಳೆಯಬೇಕು. ವರ್ಷಿತಾಳ ಕುಟುಂಬಕ್ಕೆ ಐದು ಎಕರೆ ಜಮೀನು ಮಂಜೂರು ಮಾಡಿ ಒಬ್ಬರಿಗೆ ಸರ್ಕಾರಿ ಉದ್ಯೋಗ ಕೊಡಬೇಕೆಂದು ಕರ್ನಾಟಕ ರಾಜ್ಯ ಮಾದಿಗ ಯುವ ಸೇನೆ ಸಮಿತಿ ಅಧ್ಯಕ್ಷ ಬಿ.ಓ.ಗಂಗಾಧರಪ್ಪ ಮನವಿ ಮಾಡಿದರು. ಉಪಾಧ್ಯಕ್ಷ ಬಿ.ರಾಜಪ್ಪ, ಜೆ.ಪ್ರಸನ್ನ, ಕರಿಬಸವಯ್ಯ, ರುದ್ರಮುನಿ, ನ್ಯಾಯವಾದಿ ವೆಂಕಟೇಶ್ ಇನ್ನು ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Join WhatsApp

Join Now

Join Telegram

Join Now

Leave a Comment