Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕ ವಿದ್ಯಾರ್ಥಿ ಒಕ್ಕೂಟ ರಾಜ್ಯ ಸಮಿತಿ ಅಸ್ತಿತ್ವಕ್ಕೆ : ಬಿ.ಟಿ.ತಿಪ್ಪೇರುದ್ರಸ್ವಾಮಿ ಅವರಿಂದ ಉದ್ಘಾಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 19 : ಮನುವಾದಿಗಳು ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುತ್ತಿರುವುದರ ವಿರುದ್ದ ವಿದ್ಯಾರ್ಥಿಗಳು ಜಾಗರೂಕರಾಗಬೇಕೆಂದು ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಬಿ.ಟಿ.ತಿಪ್ಪೇರುದ್ರಸ್ವಾಮಿ ಕರೆ ನೀಡಿದರು.

ಪತ್ರಕರ್ತರ ಭವನದಲ್ಲಿ ಶನಿವಾರ ಬುದ್ದ, ಅಂಬೇಡ್ಕರ್, ಪ್ರೊ.ಬಿ.ಕೃಷ್ಣಪ್ಪನವರ ಫೋಟೋಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕರ್ನಾಟಕ ವಿದ್ಯಾರ್ಥಿ ಒಕ್ಕೂಟ ರಾಜ್ಯ ಸಮಿತಿ ಉದ್ಗಾಟಿಸಿ ಮಾತನಾಡಿದರು.

ಅನೇಕ ಸಂಘಟನೆ, ಚಳುವಳಿ, ಹೋರಾಟಗಳಿಗೆ ಈ ನೆಲ ಬೆಂಬಲವಾಗಿ ನಿಂತಿದೆ. ಯುವ ಜನಾಂಗಕ್ಕೆ ಹುರುಪು ತುಂಬಬೇಕಿದೆ. ಅಸ್ಪøಶ್ಯತೆ, ಅಸಮಾನತೆ, ಶೋಷಣೆ ಬುದ್ದನ ಕಾಲದಿಂದಲೂ ಇದೆ. ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಚಾರ ಹಾಗೂ ಹೋರಾಟಗಾರ ಪ್ರೊ.ಬಿ.ಕೃಷ್ಣಪ್ಪನವರ ಹಾದಿಯಲ್ಲಿ ವಿದ್ಯಾರ್ಥಿಗಳು ಸಾಗಬೇಕಿದೆ ಎಂದು ಹೇಳಿದರು.

ಕರ್ನಾಟಕ ವಿದ್ಯಾರ್ಥಿ ಒಕ್ಕೂಟ ಯಾವುದೇ ಒಂದು ಜಾತಿ ಧರ್ಮಕ್ಕೆ ಸೀಮಿತವಲ್ಲ. ಎಲ್ಲಾ ವರ್ಗದವರನ್ನು ಇದರಲ್ಲಿ ಸೇರಿಸಿಕೊಂಡಿರುವುದು ಅರ್ಥಪೂರ್ಣ. ರಾಜ್ಯದ ಅನೇಕ ಭಾಗಗಳಲ್ಲಿ ಸಂಘಟನೆಗಳು ಹುಟ್ಟಿಕೊಂಡು ಕೆಲವೇ ದಿನಗಳಲ್ಲಿ ನಶಿಸಿ ಹೋಗಿರುವುದನ್ನು ನೋಡಿದ್ದೇನೆ. ವಿದ್ಯಾರ್ಥಿಗಳಲ್ಲಿ ಪ್ರಜ್ಞೆ, ಬದ್ದತೆಯಿದ್ದಾಗ ಮಾತ್ರ ಜೀವನದಲ್ಲಿ ಎಂತಹ ಸಮಸ್ಯೆ ಸವಾಲುಗಳನ್ನು ಬೇಕಾದರೂ ಎದುರಿಸಬಹುದು. ದೇಶಕ್ಕೆ ಸ್ವಾತಂತ್ರ್ಯ ಬಂದು ಎಪ್ಪತ್ತು ವರ್ಷಗಳಾಗಿದ್ದರೂ ದಲಿತರು ಇನ್ನು ಅಸಮಾನತೆ, ಅಸ್ಪøಶ್ಯತೆಯನ್ನು ಅನುಭವಿಸುತ್ತಿದ್ದಾರೆ. ಕೋಮುವಾದಿ ಬಿಜೆಪಿ.ಯವರು ಜಾತಿ ಸಂಘರ್ಷವನ್ನುಂಟು ಮಾಡುತ್ತಿದ್ದಾರೆ. ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿ. ಡಾ.ಬಿ.ಆರ್.ಅಂಬೇಡ್ಕರ್ ಹೇಳಿರುವಂತೆ ಶಿಕ್ಷಣ ಸಂಘಟನೆ, ಹೋರಾಟಕ್ಕೆ ಹೆಚ್ಚು ಆದ್ಯತೆ ಕೊಡಿ ಎಂದು ತಿಳಿಸಿದರು.

ಕರ್ನಾಟಕ ವಿದ್ಯಾರ್ಥಿ ಒಕ್ಕೂಟ ರಾಜ್ಯ ಸಮಿತಿ ಅಧ್ಯಕ್ಷ ರಮೇಶ್ ಎಂ.ಪ್ರಾಸ್ತಾವಿಕವಾಗಿ ಮಾತನಾಡಿದರು.
ಉಪಾಧ್ಯಕ್ಷರುಗಳಾದ ಆಕಾಶ, ಸಲೀಂ, ರಾಧಿಕ, ಪ್ರಧಾನ ಕಾರ್ಯದರ್ಶಿ ಪರಶುರಾಂ ಜಿ. ಸಂಘಟನಾ ಕಾರ್ಯದರ್ಶಿಗಳಾದ ಪ್ರಮೋದ್, ಪ್ರಿಯಾಂಕ, ರಚಿತ ಎಲ್.
ಇವರುಗಳು ವೇದಿಕೆಯಲ್ಲಿದ್ದರು.

ನಿವೃತ್ತ ಉಪ ವಿಭಾಗಾಧಿಕಾರಿ ಎಂ.ಮಲ್ಲಿಕಾರ್ಜುನ್, ಪ್ರೊ.ಸಿ.ಕೆ.ಮಹೇಶ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ನಿವೃತ್ತ ಪ್ರಾಚಾರ್ಯರಾದ ಡಾ.ವಿ.ಬಸವರಾಜು ಈ ಸಂದರ್ಭದಲ್ಲಿದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...