Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕದ ‘ಸೊಕ್ಕಿನ ಮನುಷ್ಯ’ ಸಿದ್ದರಾಮಯ್ಯ : ಜೆಡಿಎಸ್ ಆಕ್ರೋಶ

---Advertisement---

ಬೆಂಗಳೂರು: ಮಾನ್ಯ ಮಾಜಿ ಪ್ರಧಾನಿಗಳು ಹೇಳಿದ್ದರಲ್ಲಿ ಲವಲೇಶವೂ ಉತ್ಪ್ರೇಕ್ಷೆ ಇಲ್ಲ. ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿ ಇಲ್ಲಿ ಕಾಂಗ್ರೆಸ್ ಅಂತ್ಯ ಕಾಣುತ್ತದೆ, ಹೌದು. ದೇಶವನ್ನು ಜಾತಿ,ಧರ್ಮದಿಂದಲೇ ವಿಭಜಿಸಿ ಪ್ರಜಾಪ್ರಭುತ್ವವನ್ನೇ ಅಂತ್ಯ ಕಾಣಿಸಲು ಹೊರಟಿದ್ದ ಕಾಂಗ್ರೆಸ್, ಚರಿತ್ರೆಯ ಕೊನೇಪುಟದಲ್ಲಿ ಏದುಸಿರು ಬಿಡುತ್ತಿದೆ. ಶಾಪ ಹಾಕುವುದನ್ನು ಗೌಡರೆಂದೂ ಮಾಡಿಲ್ಲ, ಮಾಡುವುದೂ ಇಲ್ಲ.ಅವರ ಹಸ್ತ ಅಭಯ ಹಸ್ತ.ಅದು ಆಶೀರ್ವಾದ,ಅನುಗ್ರಹದ ದ್ಯೋತಕ.ಗುರುಸ್ವಾಮಿ ಎಂಬ ಅನಾಮಧೇಯ ವ್ಯಕ್ತಿ ಎದುರು ಸೋತ ನಿಮ್ಮನ್ನು ಅನುಗ್ರಹದಲ್ಲಿಯೇ ಅವರು ಅನುಗ್ರಹಿಸಿದ್ದು ಮರೆತಿರಾ? ಅಂದು ಆ ಕೈ ನಿಮ್ಮ ಕೈ ಹಿಡಿಯದಿದ್ದರೆ ನೀವಿಷ್ಟು ಎತ್ತರಕ್ಕೇರಲು ಸಾಧ್ಯವಿತ್ತೆ ಸಿದ್ದರಾಮಯ್ಯ ನವರೇ? ಎಂದು ಪ್ರಶ್ನಿಸಿದೆ.

 

ಜಾತ್ಯತೀತತೆ ನೀವಷ್ಟೇ ಹೇಳಬೇಕು ಸಿದ್ದರಾಮಯ್ಯನವರೇ? ಸಿಎಂ ಸಚಿವಾಲಯದ ಕೊಳಕು ಕೊಡವಿದರೆ ನಿಮ್ಮ ಢೋಂಗಿ ಜಾತ್ಯತೀತತೆಯ ಅಸಲಿ ಮುಖ ಕಳಚಿ ಬೀಳುತ್ತದೆ. ಅಭಿಪ್ರಾಯ, ಭಿನ್ನಾಭಿಪ್ರಾಯ, ಪ್ರಾಮಾಣಿಕತೆ, ಜಾತ್ಯತೀತತೆ.. ಈ ಪದಗಳೆಲ್ಲ ನಿಮಗೆ ಆಗಿ ಬರಲ್ಲ. ನಿಮ್ಮದೇನಿದ್ದರೂ ಏಕಾಭಿಪ್ರಾಯ. ಸರ್ವಾಧಿಕಾರ ಧೋರಣೆ, ತುಘಲಕ್ ಮನಃಸ್ಥಿತಿ. ಮಾನ್ಯ ದೇವೇಗೌಡ ಅವರು ಸಾಮಾಜಿಕನ್ಯಾಯ, ಜಾತ್ಯತೀತತೆ, ನಂಬಿಕೆ, ವಿಶ್ವಾಸಾರ್ಹತೆ ಉಳ್ಳವರು ಆಗಿಲ್ಲದಿದ್ದಿದ್ದರೆ ನೀವು ಈವರೆಗೆ ಏನೇನೋ ಆಗಿದ್ದಿರಲ್ಲಾ… ಅದರಲ್ಲಿ ಏನೊಂದೂ ಆಗುತ್ತಿರಲಿಲ್ಲ. ನಿಮಗೆ ಏಣಿಯಾಗಿ, ಹೆಗಲಾಗಿದ್ದ ಅವರ ಬೆನ್ನಿಗಿರಿದ ‘ಅಪರ ಬ್ರೂಟಸ್’ ನೀವು. ಬೂಟಾಟಿಕೆ ಮಾಡಿಕೊಂಡೇ ರಾಜಕೀಯ ಬದುಕು ಕಟ್ಟಿಕೊಂಡವರು ನೀವು.

 

ಯಾರು, ಯಾರ ಸಂಗ ಮಾಡಿದ್ದರು? ಯಾವ ಗಾಳಿ ಯಾರಿಗೆ ಸೋಕಿತ್ತು? ನಿಮ್ಮ ಇಂಥ ಕಾಗಕ್ಕ,ಗೂಬ್ಬಕ್ಕ ಕಥೆಗಳ ಮೂಲಕ್ಕೆ ಹೋದರೆ ನೀವೇ ಬೆತ್ತಲೆ ಸ್ಥಿತಿಯಲ್ಲಿ ನಿಲ್ಲಬೇಕಾಗುತ್ತದೆ. ಅಂತಹ ಸ್ಥಿತಿ ತಂದುಕೊಳ್ಳಬೇಡಿ. ನಿಮ್ಮ ರಾಜಕೀಯ ಅಂತ್ಯಕಾಲ ಆನಂದವಾಗಿರಲಿ, ಅದಕ್ಕೆ ಕಳಂಕ ಮೆತ್ತಿಕೊಳ್ಳಬೇಡಿ ಎನ್ನುವುದು ನಮ್ಮ ಕಳಕಳಿಯ ಸಲಹೆ. ಸೊಕ್ಕು ಎನ್ನುವುದು ನಿಮ್ಮ ಪೇಟೆಂಟ್. ಆ ನಿಮ್ಮ ಸದ್ಗುಣ(!?)ವನ್ನು ದೇವೇಗೌಡರಿಗೆ ಅಂಟಿಸುವ ಪಾಪದ ಕೆಲಸ ಮಾಡಬೇಡಿ. ಕರ್ನಾಟಕದ ‘ಸೊಕ್ಕಿನ ಮನುಷ್ಯ’ ಅಂತ ಯಾರಾದರೂ ಇದ್ದರೆ ಅದು ತಾವೇ ಸಿದ್ಧರಾಮಯ್ಯನವರೇ. ನಿಮ್ಮ ಪಕ್ಷದ ಪಡಸಾಲೆಗೆ ಬಂದರೆ ಅಲ್ಲಿರುವ ಪ್ರತಿ ಬಾಗಿಲು ನಿಮ್ಮ ಸೊಕ್ಕಿನ ಕಥೆಗಳನ್ನೇ ಹೇಳುತ್ತವೆ. ಜನಾದೇಶವನ್ನು ದೇವೇಗೌಡರು ಎಂದೂ ಧಿಕ್ಕರಿಸಿಲ್ಲ. ಶಿರಸಾ ವಹಿಸಿದ್ದಾರೆ. ಅಂತಹ ಆಚಾರ, ವಿಚಾರ, ಸದ್ವಿಚಾರ, ಶಿಷ್ಟಾಚಾರವನ್ನು ನಿಮಗೆ ಕಲಿಸಿದ್ದೇ ಅವರು. ಆದರೆ, ಅಡ್ಡದಾರಿ ಆಯ್ಕೆ ಮಾಡಿಕೊಂಡ ನಿಮಗೆ ಇವೆಲ್ಲಾ ರುಚಿಸುತ್ತಿಲ್ಲ. ಸದ್ಯಕ್ಕೆ ನಿಮಗೆ ನೆಲ ಕಾಣುತ್ತಿಲ್ಲ. ನೆಲವೇ ಬುದ್ದಿ ಕಲಿಸುವ ಕಾಲ ಹತ್ತಿರದಲ್ಲಿದೆ. ಕಾಲ ಕ್ಷಣಿಕ ಎಂದು ಸರಣಿ ಟ್ವೀಟ್ ಮಾಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment