Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ಮಗ : ಕುಮಾರಸ್ವಾಮಿ ಆಕ್ರೋಶ

---Advertisement---

ಕಾಸಿಗಾಗಿ ಹುದ್ದೆ ಉರುಫ್ #CashForPosting ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವಿಡಿಯೋ ತುಣುಕೇ ಸಾಕ್ಷಿ. @INCKarnataka ಸರಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿ ಬೀದಿಯಲ್ಲಿ ಮೂರು ಕಾಸಿಗೆ ಹರಾಜಾಗಿದೆ.

ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ಮಗ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ಪುರಾವೆ ಬೇಕಿಲ್ಲ? ಸಾರ್ವಜನಿಕ ಸಭೆಯಲ್ಲೇ ಎಗ್ಗಿಲ್ಲದೆ, ನಾಚಿಕೆ ಮಾನ ಮರ್ಯಾದೆ ಬಿಟ್ಟು ವರ್ಗಾವಣೆ ದಂಧೆ ನಡೆಸುವ ಮುಖ್ಯಮಂತ್ರಿ, ಮತ್ತವರ ಸುಪುತ್ರ, ಸಿಎಂ ಕಚೇರಿಯ ಪರ್ಸಂಟೇಜ್ ಪಟಾಲಂ ರಾಜ್ಯದ ಪ್ರತಿಷ್ಠೆಯನ್ನು ಹಣಕ್ಕಾಗಿ ಮಾರಿಕೊಂಡಿದೆ. ಬೀದಿಯಲ್ಲಿಯೇ ಇಷ್ಟಾದರೆ ನಾಲ್ಕು ಗೋಡೆಗಳ ಮಧ್ಯೆ ಇನ್ನೆಷ್ಟು ವ್ಯವಹಾರ ನಡೆಸುತ್ತಿರಬಹುದು?

ರಾಜ್ಯದ ಮುಖ್ಯಮಂತ್ರಿಗೇ ಧಮ್ಕಿ ಹಾಕಿ, “ನಾನು ಹೇಳಿದವರಷ್ಟನ್ನೇ ಮಾಡಿ” ಎನ್ನುವ ಈ ವ್ಯಕ್ತಿ ಮುಖ್ಯಮಂತ್ರಿ ಮಗನೋ ಅಥವಾ ಕರ್ನಾಟಕದ ಸೂಪರ್ ಸಿಎಮ್ಮೋ?? ಅಥವಾ ಮಿನಿಸ್ಟರ್ ಫಾರ್ ಕ್ಯಾಶ್ ಫಾರ್ ಪೋಸ್ಟಿಂಗಾ? ಇಲ್ಲವೇ ಒಳಾಡಳಿತ ಸಚಿವಾಲಯ ಮಾದರಿಯ ‘ಒಳ ವಸೂಲಿ ಸಚಿವಾಲಯ’ದ ಸಚಿವರಾ?

 

ಸ್ವತಃ ಮುಖ್ಯಮಂತ್ರಿಯೇ ಫೋನ್ ಕೊಡುವಷ್ಟು ಪ್ರಭಾವಿಯಾದ ಆ ಭಾರೀ ಆಸಾಮಿ ಯಾರು? ಇಷ್ಟಕ್ಕೂ ಆ ಮಹದೇವ ಎನ್ನುವ ವ್ಯಕ್ತಿ ಯಾರು? ಹಿಂದೊಮ್ಮೆ ನಾನೇ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದೆ. ಪ್ರತೀ ವರ್ಗಾವಣೆಗೆ ತಲಾ 30 ಲಕ್ಷ ರೂ. ಪೀಕುತ್ತಿದ್ದ ಗಿರಾಕಿ ಈತ ಎಂದು ತಿಳಿಸಿದ್ದೆ. ಕುಮಾರಸ್ವಾಮಿ ಸುಳ್ಳು ಹೇಳ್ತಾ ಇದ್ದಾರೆ, ಅವರು ಹೇಳೋದು 99.9999% ಸುಳ್ಳು. ಅವರಿಗೆ ನಾನು ಉತ್ತರ ಕೊಡಲ್ಲ, ಅವರು ಹಿಟ್ ಅಂಡ್ ರನ್ ಗಿರಾಕಿ ಎಂದಿದ್ದ ಸಿಎಂ ಸಿದ್ದರಾಮಯ್ಯನವರು ಈಗ ಏನು ಹೇಳುತ್ತಾರೆ?

ಈಗ ಹೇಳಿ @siddaramaiah ನವರೇ, ನೀವು, ನಿಮ್ಮ ಮಗ ಎಷ್ಟು ಪರ್ಸೆಂಟ್ ಗೆ ಹುದ್ದೆಗಳನ್ನು ಮಾರಿದ್ದೀರಿ? ಅದರಲ್ಲಿ ನಿಮಗೆಷ್ಟು? ನಿಮ್ಮ ಮಗನಿಗೆ ಎಷ್ಟು? ನಿಮ್ಮ ಕಚೇರಿಯ ಪರ್ಸಂಟೇಜ್ ಪಟಾಲಂಗೆ ಎಷ್ಟು?

ನಾನು ಹೇಳಿದ್ದೆಲ್ಲಾ ಸುಳ್ಳು ಸುಳ್ಳು ಎಂದು ಸಲೀಸಾಗಿ ಹೇಳುತ್ತೀರಲ್ಲ? ಸತ್ಯ ಎದ್ದು ಎದುರಿಗೇ ಕೂತಿದೆ. ಏನು ಹೇಳುತ್ತೀರಿ? ವಿಡಿಯೋದಲ್ಲಿರುವ ವಿಷಯ ಸುಳ್ಳೋ, ನಿಜವೋ ನಾಡಿನ ಜನ ತೀರ್ಮಾನ ಮಾಡುತ್ತಾರೆ. ಅದರ ಸಾಧಕ ಬಾಧಕ ನಾನೇ ಎದುರಿಸುತ್ತೇನೆ. ಸಾರ್ವಜನಿಕ ಸಭೆಯಲ್ಲೇ ನಿಮ್ಮ ‘ಸುಲಿಗೆಪುತ್ರ’ ಕಾಸಿಗಾಗಿ ಹುದ್ದೆ ವ್ಯವಹಾರವನ್ನು ಬಟಾಬಯಲು ಮಾಡಿ ನಿಮ್ಮ ವಸೂಲಿ ದಂಧೆಯನ್ನು ಬೆತ್ತಲು ಮಾಡಿದ್ದಾರಲ್ಲ!! ಇದಕ್ಕೆ ಅಹಿಂದ ಮಹಾಪುರುಷರಾದ ತಾವೇ ರಾಜ್ಯದ ಜನರಿಗೆ ಉತ್ತರ ಕೊಡಬೇಕು.

ನಿಮ್ಮಿಂದ ಉತ್ತರವಷ್ಟೇ ಅಲ್ಲ, ನಿಮಗೆ ಮಾನ ಮರ್ಯಾದೆ ಬಹಳ ಜಾಸ್ತಿ ಅಲ್ಲವೇ?ನೈತಿಕ ಮೌಲ್ಯಗಳಂತೂ ದುಪಟ್ಟು ಜಾಸ್ತಿ, ಹೌದಲ್ಲವೇ? ಅದಕ್ಕೆ ಬೆಲೆ ಕೊಟ್ಟು ರಾಜೀನಾಮೆ ಕೊಡಿ. ನಿಮಗೆ ಉಳಿದಿರುವುದು ಸಿಎಂ ಕಚೇರಿ ಖಾಲಿ ಮಾಡುವುದಷ್ಟೇ.
ಕೂಡಲೇ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ಕೊಡಿ. ಇದು ನನ್ನ ಆಗ್ರಹ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment