Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಗಣರಾಜ್ಯೋತ್ಸವ ಪರೇಡ್ ನಲ್ಲಿ ಗಮನ ಸೆಳೆದ ಕರ್ನಾಟಕದ ʻನಾರಿ ಶಕ್ತಿʼ

---Advertisement---

ನವದೆಹಲಿ: ಇಂದು 74ನೇ ವರ್ಷದ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಪರೇಡ್ ನಲ್ಲಿ ಕರ್ನಾಟಕದ ಸ್ತಬ್ದಚಿತ್ರ ಗಮನ ಸೆಳೆದಿದೆ. ಈ ಬಾರಿ ನಾರಿ ಶಕ್ತಿ ಕಲ್ಪನೆಯಡಿ ರಾಜ್ಯದ ಸ್ತಬ್ದ ಚಿತ್ರ ಪ್ರದರ್ಶನವಾಗಿದೆ.

ಸ್ತಬ್ದ ಚಿತ್ರದ ಮುಂಭಾಗದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕ್ರತ ಸೂಲಗಿತ್ತಿ ನರಸಮ್ಮ ಅವರ ಚಿತ್ರ ಪ್ರದರ್ಶನವಾಗಿತ್ತು. ಹಿಂಭಾಗದಲ್ಲಿ ಸಾಲುಮರದ ತಿಮ್ಮಕ್ಕ ಮತ್ತು ತುಳಸಿಗೌಡ ಅವರ ಸ್ತಬ್ದ ಚಿತ್ರಗಳನ್ನು ಅವರ ಸಾಧನೆಗಳೊಂದಿಗೆ ಪ್ರದರ್ಶನ ಮಾಡಲಾಗಿದೆ. ಕರ್ನಾಟಕದ ಟ್ಯಾಬ್ಲೋ ಜೊತೆಗೆ ಶಿವಮೊಗ್ಗದ ಮೂಲದ ಡೊಳ್ಳು ಕುಣಿತದ ಕಲಾವಿದರು ಭಾಗಿಯಾಗಿದ್ದರು.

ಈ ಬಾರಿಯ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ದ ಚಿತ್ರಕ್ಕೆ ಅವಕಾಶ ನಿರಾಕರಣೆ ಮಾಡಲಾಗಿತ್ತು. ಕೊನೆ ಕ್ಷಣದಲ್ಲಿ ಅನುಮತಿ ಸಿಕ್ಕಿತ್ತು. ಹೀಗಾಗಿ ಏಳೇ ದಿನದಲ್ಲಿ ನಾರಿ ಶಕ್ತಿ ಸ್ತಬ್ದ ಚಿತ್ರ ರೆಡಿಯಾಗಿತ್ತು. “ಕರ್ನಾಟಕದ ಎಲೆಮರೆಯ ಮಹಿಳಾ ಸಾಧಕರ ಪ್ರತೀಕವಾಗಿ ಸೂಲಗಿತ್ತಿ ನರಸಮ್ಮ,ವೃಕ್ಷ ಮಾತೆ ತುಳಸಿ ಗೌಡ ಹಾಲಕ್ಕಿ ಹಾಗೂ ಸಾಲು ಮರದ ತಿಮ್ಮಕ್ಕರನ್ನೊಳಗೊಂಡ “ನಾರಿ ಶಕ್ತಿ” ಸ್ತಬ್ಧ ಚಿತ್ರ ನವ ದೆಹಲಿಯ ಕರ್ತವ್ಯ ಪಥದಲ್ಲಿ ವಿಜೃಂಭಿಸಿದೆ” ಎಂದು ಸಿಎಂ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment