Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕದ ಗೆಲುವು ಮೋದಿಯಿಂದ ಸಾಧ್ಯ.. ‘ಯಪ್ಪ’ನ ಮುಖ ನೋಡಿ ವೋಟ್ ಹಾಕಲ್ಲ : ಮತ್ತೆ ಯಡಿಯೂರಪ್ಪ ವಿರುದ್ಧ ಯತ್ನಾಳ್ ಕಿಡಿ

Facebook
Twitter
Telegram
WhatsApp

ವಿಜಯಪುರ: ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಪುತ್ರ ವಿಜಯೇಂದ್ರ ಮೇಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯಾವಾಗಲೂ ಕಿಡಿಕಾರುತ್ತಲೇ ಇರುತ್ತಾರೆ. ಇದೀಗ ಮತ್ತೆ ಯಡಿಯೂರಪ್ಪ ವಿರುದ್ಧ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ಕರ್ನಾಟಕದಲ್ಲಿ ನರೇಂದ್ರ ಮೋದಿಯವರ ಹೆಸರಿಗೆ ವೋಟು ಹಾಕುತ್ತಾರೆ ವಿನಃ, ಯಾವ ‘ಯಪ್ಪ’ನ ಮುಖ ನೋಡಿಯೂ ವೋಟ್ ಹಾಕುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

 

ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಯತ್ನಾಳ್ ಅವರು, ನಾನು ದೆಹಲಿಗೆ ಯಾರ ಭೇಟಿಗೂ ಹೋಗಿಲ್ಲ, ಯಾರ appointment ಕೂಡ ತೆಗೆದುಕೊಂಡಿಲ್ಲ. ಯಾರ appointment ಕೂಡ ಬೇಕಿಲ್ಲ. ನಾನು ನನ್ನ ವೈಯಕ್ತಿಕ ಕೆಲಸಕ್ಕೆ ಹೋಗಿದ್ದೆ. ಕಾರ್ಖಾನೆ ವಿಚಾರಕ್ಕೆ ಹೋಗಿದ್ದೆ. ಈ ವೇಳೆ ಶೋಭಾ ಕರಂದ್ಲಾಜೆ, ಜೋಶಿ ಸೇರಿದಂತೆ ಇತರೆ ಸಂಸದರನ್ನು ಭೇಟಿಯಾಗಿದ್ದೇನೆ ಅಷ್ಟೇ.

 

ವಿಜಯೇಂದ್ರ ಇರುವುದರಿಂದ 35 ಲೋಕಸಭಾ ಸೀಟುಗಳು ಬರುತ್ತವೆ ಎಂದು ಹೊಗಳಿ ನನ್ನದೇನು ಗಂಟು ಹೋಗುತ್ತದೆ. 28 ಕ್ಷೇತ್ರಗಳು ಇದ್ದರು 35 ಕ್ಷೇತ್ರಗಳು ಬರುತ್ತವೆ ಎಂದು ಹೇಳಿದ್ದೀರಿ. ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆಯೇ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತದೆ‌. ಯಾ ಯಪ್ಪಂದು ಏನು ಇಲ್ಲ. ಇವರ ಮುಖ ನೋಡಿ ಯಾರೂ ವೋಟು ಹಾಕಲ್ಲ. ನನ್ನ ಹೋರಾಟ ವಂಶವಾರು, ಭ್ರಷ್ಟಾಚಾರ ಹಾಗೂ ಅಡ್ಜೆಸ್ಟ್ಮೆಂಟ್ ಗಳ ವಿರುದ್ಧವಾಗಿದೆ. ಇವುಗಳ ಮೇಲಿನ ನನ್ನ ಹೋರಾಟ ನಿರಂತರವಾಗಿರುತ್ತದೆ‌. ನನಗೆ ಯಾರೋ ಬೈದು ಇಲ್ಲ, ಎಚ್ಚರಿಕೆಯನ್ನು ನೀಡಿಲ್ಲ. ಗಂಭೀರವಾದ ಎಚ್ಚರಿಕೆಯನ್ನು ಯಾವನು ಕೊಟ್ಟಿಲ್ಲ ಎಂದೇ ಪ್ರತಿಕ್ರಿಯೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

error: Content is protected !!