ಸುದ್ದಿಒನ್, ಚಿತ್ರದುರ್ಗ ಡಿ. 17 : ನಗರದ ಹೊರವಲಯದ ಪಿಳ್ಳೇಕೆರೆನಹಳ್ಳಿಯ ಶ್ರೀ ಗೌರಸಮುದ್ರ ಮಾರಮ್ಮ ದೇವಾಲಯದಲ್ಲಿ ಡಿಸೆಂಬರ್ 26 ರ ಶುಕ್ರವಾರ 14 ನೇ ವರ್ಷದ ಕಾರ್ತಿಕ ಮಹೋತ್ಸವ ಅದ್ದೂರಿಯಾಗಿ ನಡೆಯಲಿದೆ.
ಪ್ರತಿ ವರ್ಷದಂತೆ ಈ ವರ್ಷವೂ ಗ್ರಾಮದ ಆರಾಧ್ಯ ದೈವ, ಆದಿಶಕ್ತಿ ಶ್ರೀ ಗೌರಸಮುದ್ರ ಮಾರಮ್ಮ ದೇವಿಯ ದಿವ್ಯ ಸನ್ನಿಧಿಯಲ್ಲಿ ಅತಿ ವಿಜೃಂಭಣೆಯಿಂದ ಕಾರ್ತಿಕ ಮಹೋತ್ಸವವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದ ವಿವರಗಳು :
ಬೆಳಿಗ್ಗೆ 8:00 ಗಂಟೆಗೆ ಅಕ್ಷತೆ ಮತ್ತು ಕುಂಕುಮ ಹಂಚುವ ಕಾರ್ಯಕ್ರಮ
ಬೆಳಿಗ್ಗೆ 10:00 ಗಂಟೆಗೆ ಪೂಜಾ ಕಾರ್ಯಕ್ರಮಗಳ ಪ್ರಾರಂಭ
ಸಂಕಲ್ಪ, ಕುಂಭ ಪ್ರತಿಷ್ಠಾಪನೆ ಮತ್ತು ವಿಶೇಷ ಅಭಿಷೇಕ
ಸಂಜೆ 6:00 ಗಂಟೆಗೆ ಮಹಾ ಮಂಗಳಾರತಿ
ಸಂಜೆ 7:00 ಗಂಟೆಗೆ ತೀರ್ಥ ಪ್ರಸಾದ ವಿನಿಯೋಗ
ಈ ಸಮಾರಂಭಕ್ಕೆ ಭಕ್ತಾಧಿಗಳು ಆಗಮಿಸುವುದರ ಮೂಲಕ ಅಮ್ಮನವರ ಕೃಪೆಗೆ ಪಾತ್ರರಾಗುವಂತೆ ಸಮಿತಿಯ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








